ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌

21113 (2)

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಜನರಿಗೆ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, ಈ ಬಗ್ಗೆ ಸುಪ್ರೀಂಕೋರ್ಟ್‌ (Supreme Court) ಅಸಮಾಧಾನ ವ್ಯಕ್ತಪಡಿಸಿದೆ. ಈ ಬೆಳವಣಿಗೆಗೆ ಸ್ಯಾಂಡಲ್‌ವುಡ್ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದು, “ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಮ್ಯಾ ತಮ್ಮ ಎಕ್ಸ್‌ ಖಾತೆಯಲ್ಲಿ, “ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ,” ಎಂದು ಬರೆದುಕೊಂಡು ಒಂದು ಸುದ್ದಿಯ ಲಿಂಕ್ ಅನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ರಮ್ಯಾ ಸಾಮಾನ್ಯರಿಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಒದಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಲಯವು ಆರೋಪಿಗಳಿಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿದೆ. ಖಾಸಗಿ ವಕೀಲೆಯೊಬ್ಬರು ಪವಿತ್ರಾ ಗೌಡರ ಪರವಾಗಿ ವಾದ ಮಂಡಿಸುತ್ತಾ, “ಪವಿತ್ರಾ ಗೌಡ ಅವರು ರೇಣುಕಾಸ್ವಾಮಿಯ ಮೇಲೆ ಯಾವುದೇ ದೊಡ್ಡ ಮಟ್ಟದ ಹಲ್ಲೆ ಮಾಡಿಲ್ಲ. ಅವರು ಕೇವಲ ಚಪ್ಪಲಿಯಿಂದ ಹೊಡೆದಿದ್ದಾರೆ. ಇದರಿಂದ ಯಾವುದೇ ಗಂಭೀರ ಗಾಯವಾಗಿಲ್ಲ,” ಎಂದು ಹೇಳಿದ್ದರು. ಆದರೆ, ಈ ವಾದವನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ತೀವ್ರವಾಗಿ ಪ್ರಶ್ನಿಸಿದ್ದಾರೆ. “ಈ ಪ್ರಕರಣಕ್ಕೆ ನೀವೇ ಕಾರಣವಲ್ಲವೇ? ನೀವು ಇಲ್ಲದಿದ್ದರೆ ದರ್ಶನ್ ಆಸಕ್ತಿ ತೋರಿಸಿರಲಿಲ್ಲವೇ?” ಎಂದು ಕೇಳಿದ ನ್ಯಾಯಾಲಯ, ಆರೋಪಿಗಳ ಮನಸ್ಸಿನಲ್ಲಿ ಭಯವನ್ನು ಹುಟ್ಟಿಸಿದೆ.

ಕರ್ನಾಟಕ ಹೈಕೋರ್ಟ್‌ನ ಜಾಮೀನು ತೀರ್ಮಾನದ ವಿರುದ್ಧ ಸುಪ್ರೀಂ ಕೋರ್ಟ್‌ನ ಅಸಮಾಧಾನವು ಸ್ಪಷ್ಟವಾಗಿದೆ. “ನಾವು ಆರೋಪಿಗಳಿಗೆ ಶಿಕ್ಷೆಯನ್ನು ನೀಡುವುದಿಲ್ಲ, ಆದರೆ ಅವರನ್ನು ದೋಷಮುಕ್ತರೆಂದು ಘೋಷಿಸುವುದಿಲ್ಲ. ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ,” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ತಿಳಿಸಿದ್ದಾರೆ.

Exit mobile version