ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿ ಜನಮನಸೂರೆಗೊಂಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬದ ದಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಕುಟುಂಬ ಸಮೇತ ದೇವರ ದರ್ಶನ ಪಡೆದುಕೊಂಡಿದ್ದಾರೆ.
ಇದರ ಜೊತೆಗೆ ಅಭಿಮಾನಿಗಳ ಜೊತೆಗೂ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಹ ವಿಶೇಷ ರೀತಿಯಲ್ಲಿ ಆಚರಿಸಿದ್ದಾರೆ. ಆನೆಗುಡ್ಡೆ ವಿನಾಯಕನ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
“ಕಾಂತಾರ” ದಂತಹ ಸೂಪರ್ ಹಿಟ್ ಚಿತ್ರದ ಮೂಲಕ ವಿಶ್ವದ ಗಮನ ಸೆಳೆದಿರುವ ರಿಷಬ್ ಶೆಟ್ಟಿ ಅವರ ನಿರ್ದೇಶನ, ನಟನೆಯ ಹಾಗು ಹೊಂಬಾಳೆ ಫಿಲಂಸ್ ನಿರ್ಮಾಣದ ಬಹು ನಿರೀಕ್ಷಿತ “ಕಾಂತಾರ ಚಾಪ್ಟರ್ ೧” ಚಿತ್ರ ಸಹ ಇದೇ ವರ್ಷ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುಲಿದ್ದು, ಅಭಿಮಾನಿಗಳು ಆ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
