ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

Untitled design 2025 05 05t213900.035

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಗಾಯಕ ಸೋನು ನಿಗಮ್ ಅವರು ಕನ್ನಡ ಹಾಡು ಹಾಡುವಂತೆ ಕೇಳಿದ ವಿದ್ಯಾರ್ಥಿಯೊಬ್ಬನಿಗೆ, “ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯಿತು” ಎಂದು ಹೇಳಿದ್ದರು. ಈ ಹೇಳಿಕೆ ಕನ್ನಡಿಗರ ಭಾವನೆಗೆ ಧಕ್ಕೆ ತಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಯಿತು, ಕನ್ನಡಪರ ಸಂಘಟನೆಗಳು ಸೋನು ಅವರನ್ನು ಖಂಡಿಸಿ, ಕ್ಷಮೆ ಕೇಳುವಂತೆ ಒತ್ತಾಯಿಸಿದವು. ಕರ್ನಾಟಕ ಫಿಲ್ಮ್ ಚೇಂಬರ್ ಸಹ ಕನ್ನಡ ಚಿತ್ರರಂಗದಿಂದ ಬಹಿಷ್ಕಾರ ಹಾಕಿತ್ತು.

ಈ ವಿವಾದದ ಬಳಿಕ ಸೋನು ನಿಗಮ್ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. “ಸಾರಿ ಕರ್ನಾಟಕ, ನಾನು ಹೆಚ್ಚು ಮಾತನಾಡಿದೆ, ಆದರೆ ನಿಮ್ಮ ಮೇಲಿನ ಪ್ರೀತಿ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ,” ಎಂದು ಅವರು ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು, ಕೆಲವರು ಬೆದರಿಕೆಯ ರೀತಿಯಲ್ಲಿ ಕನ್ನಡ ಹಾಡು ಕೇಳಿದ್ದರಿಂದ ತಾಳ್ಮೆ ಕಳೆದುಕೊಂಡೆ ಎಂದು ಸ್ಪಷ್ಟಪಡಿಸಿದ್ದಾರೆ.

ಕನ್ನಡ ಚಿತ್ರರಂಗದಿಂದ ಬಹಿಷ್ಕಾರದ ನಂತರ ಸೋನು ತಮ್ಮ ಕನ್ನಡದ ಬಗ್ಗೆ ಇರುವ ಪ್ರೀತಿಯನ್ನು ಮತ್ತೊಮ್ಮೆ ಒತ್ತಿಹೇಳಿದ್ದಾರೆ. “ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ,” ಎಂದು ಈ ಹಿಂದೆ ಹೇಳಿದ್ದ ಸೋನು, ಕನ್ನಡದಲ್ಲಿ ಹಲವು ಜನಪ್ರಿಯ ಹಾಡುಗಳನ್ನು ಹಾಡಿದ್ದಾರೆ.

Exit mobile version