• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಿಫಾದಲ್ಲಿ ಮಿಂಚಿದ ಯುವ ಸಿನಿಮಾಸಕ್ತರು, ವಿಜೇತರಿಗೆ ಹೊಂಬಾಳೆ ಫಿಲ್ಮ್ಸ್ ನೆರವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 8:30 pm
in ಸಿನಿಮಾ
0 0
0
Untitled design 2025 11 18T202749.961

ಬೆಂಗಳೂರು 18 ನವೆಂಬರ್ 2025: ಬೆಂಗಳೂರಿನ ಆರ್ ವಿ ವಿಶ್ವವಿದ್ಯಾನಿಲಯದಲ್ಲಿ ನಡೆದ 2005ನೇ ಸಾಲಿನ, ನಾಲ್ಕನೆ ಆವೃತ್ತಿಯ ಟೀನ್ ಇಂಡೀ ಫಿಲ್ಮ್ ಅವಾರ್ಡ್ಸ್ (ಟಿಐಎಫ್ಎ) ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು. 13-25 ವಯೋಮಾನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಿ ಮೂಡಿಬಂದ ಕಾರ್ಯಕ್ರಮವು, ಹೊಸತನದ ಪ್ರಯೋಗಗಳಿಗೆ ವೇದಿಕೆ ಸಾಕ್ಷಿಯಾಯಿತು.

5 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಿನಿಮಾ ತಯಾರಿಕೆಯ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು. ಈ ವೇಳೆ ವಿದ್ಯಾರ್ಥಿಗಳು ಕಥೆ ನಿರೂಪಣೆ, ಪ್ರದರ್ಶನ, ಮಾಸ್ಟರ್ ಕ್ಲಾಸ್ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಆರಂಭದಲ್ಲಿ ಚಲನಚಿತ್ರೋತ್ಸವವು ಈಶಾನ್ಯ ಭಾರತದ ಚಲನಚಿತ್ರಗಳ ಪ್ರದರ್ಶನದೊಂದಿಗೆ ಆರಂಭವಾಯಿತು. ಆ ಬಳಿಕ ನಾನಾ ಭಾಗದ ಸಂಸ್ಕೃತಿ ಅನಾವರಣಕ್ಕೆ ಸಾಕ್ಷಿಯಾಯಿತು.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

ಕೇವಲ ಭಾರತ ಮಾತ್ರವಲ್ಲ ವಿದೇಶಗಳಿಂದಲೂ ಈ ಚಲನಚಿತ್ರೋತ್ಸವಕ್ಕೆ ಗಣ್ಯರು ಆಗಮಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಈಗಾಗಲೇ ಆಯೋಜನೆಗೊಳ್ಳುವ ಬಿಐಎಸ್ಎಸ್ಇಎಸ್ ಮತ್ತು ಬಿಐಎಸ್ಎಫ್ಎಫ್ ಚಲನಚಿತ್ರೋತ್ಸವದ ಬಳಿಕ ಇದು ಮೂರನೇ ಅತಿದೊಡ್ಡ ಚಲನಚಿತ್ರೋತ್ಸವವಾಗಿ ರೂಪುಗೊಂಡಿದೆ.

ಈ ಆವೃತ್ತಿಯಲ್ಲಿ ಹೆಚ್ಚಿನ ಉದ್ಯಮಗಳು ತೊಡಗಿಸಿಕೊಂಡಿದ್ದವು. ನಿರ್ಮಾಪಕರು, ಚಲನಚಿತ್ರ ಕ್ಷೇತ್ರಕ್ಕೆ ಸಂಬಂಧಪಟ್ಟವರು, ಹಿರಿಯ ಪತ್ರಕರ್ತರು, ಡಿಜಿಟಲ್ ಕ್ರಿಯೆಟರ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಮಾರ್ಗದರ್ಶನ ನೀಡಲು ಆಗಮಿಸಿದ್ದರು. ಹೊಸ ಪ್ರತಿಭೆಗಳು ಹಾಗೂ ಅವರಿಗೆ ವೃತ್ತಿಪರ ಮಾರ್ಗದರ್ಶನ ನೀಡಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು. ಇನ್ನು ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಪ್ರಮುಖರು, ಸಾಧಕ ಉದ್ಯಮಿಗಳು ಉಪಸ್ಥಿತರಿದ್ದರು.

ಇನ್ನು ಭವಿಷ್ಯದ ಸಿನಿಮಾ ನಿರ್ದೇಶಕರನ್ನು ಗುರುತಿಸುವ ಈ ಚಲನಚಿತ್ರೋತ್ಸವದಲ್ಲಿ ವಿಜೇತರಾದವರಿಗೆ ಭಾರತದ ಅತಿದೊಡ್ಡ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬೆಂಬಲವಾಗಿ ನಿಲ್ಲಲಿದೆ. ಅವರ ಚಲನಚಿತ್ರಗಳನ್ನು ತಜ್ಞರ ಮಾರ್ಗದರ್ಶನದಲ್ಲಿ ಅದನ್ನು ರಾಷ್ಟ್ರೀಯ ವೇದಿಕೆಗಳಲ್ಲಿ ಪ್ರದರ್ಶಿಸಲು ಅನುವು ಮಾಡಿಕೊಡುತ್ತದೆ.

ಇದೇ ವೇಳೆ ಆಯೋಜಕರು ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದು, ಬೆಂಗಳೂರು ಮತ್ತು ಈಶಾನ್ಯದ ಯುವ ಪ್ರತಿಭೆಗಳ ಸಹಯೋಗಕ್ಕಾಗಿ ಭವಿಷ್ಯದಲ್ಲಿ ಗುವಾಹಟಿಯಲ್ಲಿ ಟಿಐಎಫ್ಎ ರೋಡ್ ಶೋ ಆಯೋಜಿಸುವುದಾಗಿ ಘೋಷಿಸಿದರು.

ಇನ್ನು ಈ ವೇಳೆ ಆರ್ ವಿ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಫಿಲ್ಮ್, ಮೀಡಿಯಾ ಆಂಡ್ ಕ್ರಿಯೇಟಿವ್ ಆರ್ಟ್ಸ್ ನ ಡೀನ್ ಪ್ರೊ. (ಡಾ.). ಪಿಯೂಷ್ ರಾಯ್ ಮಾತನಾಡಿ, ‘ಟಿಐಎಫ್ಎ ರಾಷ್ಟ್ರೀಯ ಪ್ರತಿಭೆಗಳನ್ನು ಅನಾವರಣಗೊಳಿಸುವ ಕಾರ್ಯ ಮಾಡುತ್ತದೆ. ಪ್ರತಿ ಆವೃತ್ತಿಯು ಸಿನಿಮಾವನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಬಯಸುವ ಯುವ ಚಲನಚಿತ್ರ ನಿರ್ದೇಶಕರ ಆತ್ಮ ವಿಶ್ವಾಸ ಹೆಚ್ಚಿಸುತ್ತದೆ’ ಎಂದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ, ತೀರ್ಪುಗಾರರಾಗಿದ್ದ ಚಲನಚಿತ್ರ ನಿರ್ದೇಶಕ ಅಮಿತ್ ಬೆಹ್ಲ್ ಅವರು ಮಾತನಾಡಿ, ‘ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ತಮ್ಮ ಪರಿಕಲ್ಪನೆಗಳನ್ನು ಚಿತ್ರಗಳ ಮೂಲಕ ತೋರಿಸುವುದು ನಿಜಕ್ಕೂ ರೋಮಾಂಚನಕಾರಿ ವಿಚಾರ. ಎಲ್ಲಾ ಚಿತ್ರಗಳಲ್ಲೂ ತಂತ್ರಜ್ಞಾನ ಲೋಪ ಇರಲಿಲ್ಲ. ಅದು ಇಷ್ಟವಾಯಿತು. ವಿದ್ಯಾರ್ಥಿಗಳ ಚಿಂತನೆ ಪರಿಶುದ್ಧವಾಗಿತ್ತು. ಇಲ್ಲಿರುವ ವಿದ್ಯಾರ್ಥಿಗಳು ಅದೃಷ್ಟವಂತರು. ಕನ್ನಡ, ಹಿಂದಿ ಮತ್ತು ತಮಿಳು ಚಲನಚಿತ್ರೋದ್ಯಮಗಳು ಹತ್ತಿರದಲ್ಲಿವೆ. ಹಾಗಾಗಿ ಇಲ್ಲಿಂದ ಸಾಧ್ಯವಾದಷ್ಟು ಕಲಿಯಿರಿ. ಟಿಐಎಫ್ಎ ಬೆಳೆದು ಮುಂದೆ ಇನ್ನು ಅತಿದೊಡ್ಡ ಉತ್ಸವವಾಗಲಿದೆ’ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version