• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಪ್ರಿಯರಿಗೆ ಸಿಹಿ ಸುದ್ದಿ: ಚಿತ್ರಮಂದಿರಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿಗೆ ಹೈಕೋರ್ಟ್ ಬ್ರೇಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 5:06 pm
in Flash News, ಸಿನಿಮಾ
0 0
0
Untitled design 2026 03 07T170630.835

ಹೈದರಾಬಾದ್: ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ತೆರಳುವ ಪ್ರೇಕ್ಷಕರಿಗೆ ದೊಡ್ಡ ರಿಲೀಫ್ ನೀಡುವ ಮಹತ್ವದ ಆದೇಶವೊಂದನ್ನು ತೆಲಂಗಾಣ ಹೈಕೋರ್ಟ್ ನೀಡಿದೆ. ಇನ್ನು ಮುಂದೆ ಏಕಪರದೆ (Single Screen) ಚಿತ್ರಮಂದಿರಗಳಿಗೆ ಸಿನಿಮಾ ನೋಡಲು ಹೋಗುವ ಪ್ರೇಕ್ಷಕರಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಅವಕಾಶ ಇರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಸಂಬಂಧ 2021ರಲ್ಲಿ ಹೊರಡಿಸಲಾಗಿದ್ದ ಸರ್ಕಾರಿ ಆದೇಶವನ್ನು ನ್ಯಾಯಾಲಯ ಅಮಾನತುಗೊಳಿಸಿದ್ದು, ಈ ತೀರ್ಪು ಸಿನಿಪ್ರಿಯರಲ್ಲಿ ಸಂತಸ ಮೂಡಿಸಿದೆ.

ಕೆಲ ವರ್ಷಗಳಿಂದ ಹಲವು ಏಕಪರದೆ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಬರುವ ಪ್ರೇಕ್ಷಕರಿಂದ ಪಾರ್ಕಿಂಗ್ ಶುಲ್ಕವಾಗಿ ₹10 ರಿಂದ ₹30 ವರೆಗೆ ವಸೂಲಿ ಮಾಡಲಾಗುತ್ತಿತ್ತು. ಬೈಕ್ ಮತ್ತು ಕಾರುಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿತ್ತು. ಆದರೆ ಈಗ ಈ ಪ್ರಕ್ರಿಯೆಗೆ ತೆಲಂಗಾಣ ಹೈಕೋರ್ಟ್ ತಡೆಯೊಡ್ಡಿದ್ದು, ಸಿನಿಮಾ ಟಿಕೆಟ್ ಹೊಂದಿರುವ ಪ್ರೇಕ್ಷಕರಿಗೆ ಪಾರ್ಕಿಂಗ್ ಉಚಿತವಾಗಿರಬೇಕು ಎಂದು ಸ್ಪಷ್ಟಪಡಿಸಿದೆ.

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ADVERTISEMENT
ADVERTISEMENT
ಮಲ್ಟಿಪ್ಲೆಕ್ಸ್ ಮತ್ತು ಮಾಲ್‌ಗಳಲ್ಲಿ ಇದ್ದ ನಿಯಮವೇನು?

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ನಿಯಮಗಳ ಪ್ರಕಾರ, ಮಲ್ಟಿಪ್ಲೆಕ್ಸ್‌ಗಳು ಹಾಗೂ ವಾಣಿಜ್ಯ ಸಂಕೀರ್ಣಗಳಿಗೆ ಬರುವ ಗ್ರಾಹಕರಿಗೆ ಉಚಿತ ಪಾರ್ಕಿಂಗ್ ನೀಡುವುದು ಕಡ್ಡಾಯವಾಗಿದೆ. ಗ್ರಾಹಕರು ಮಾನ್ಯವಾದ ಬಿಲ್ ಅಥವಾ ಸಿನಿಮಾ ಟಿಕೆಟ್ ತೋರಿಸಿದರೆ ಅವರಿಗೆ ಪಾರ್ಕಿಂಗ್‌ಗೆ ಯಾವುದೇ ಶುಲ್ಕ ವಿಧಿಸಲು ಅವಕಾಶ ಇರುವುದಿಲ್ಲ.

ಆದರೆ 2021ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶ (GO 121) ಮೂಲಕ ಏಕಪರದೆ ಚಿತ್ರಮಂದಿರಗಳಿಗೆ ಮಾತ್ರ ಈ ನಿಯಮದಿಂದ ವಿನಾಯಿತಿ ನೀಡಲಾಗಿತ್ತು. ಇದರ ಪರಿಣಾಮವಾಗಿ ಅನೇಕ ಚಿತ್ರಮಂದಿರಗಳು ಪ್ರೇಕ್ಷಕರಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುತ್ತಿದ್ದರು. ಇದೀಗ ಹೈಕೋರ್ಟ್ ಈ ವಿನಾಯಿತಿಯನ್ನು ಅಮಾನತುಗೊಳಿಸಿದ್ದು, ಏಕಪರದೆ ಚಿತ್ರಮಂದಿರಗಳನ್ನೂ ಮಲ್ಟಿಪ್ಲೆಕ್ಸ್‌ಗಳಂತೆ ಪರಿಗಣಿಸಬೇಕು ಎಂದು ಸೂಚಿಸಿದೆ.

ಕಾನೂನು ಹೋರಾಟದಿಂದ ಬಂದ ತೀರ್ಪು

ಈ ಮಹತ್ವದ ತೀರ್ಪು ಒಂದು ಗ್ರಾಹಕರಿಂದ ಆರಂಭವಾದ ಕಾನೂನು ಹೋರಾಟದ ಫಲವಾಗಿದೆ. ದಿಲ್‌ಸುಖ್‌ನಗರದಲ್ಲಿರುವ ಕೋಣಾರ್ಕ್ ಚಿತ್ರಮಂದಿರದಲ್ಲಿ ಒಬ್ಬ ಗ್ರಾಹಕರಿಂದ ₹20 ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರೇಮ್ ರಾಮಾವತ್ ಎಂಬವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಗ್ರಾಹಕರಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವ ಕ್ರಮ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ 2021ರ ಸರ್ಕಾರಿ ಆದೇಶವನ್ನು ಅಮಾನತುಗೊಳಿಸುವಂತೆ ಆದೇಶ ನೀಡಿದೆ.

ವಕೀಲರ ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯಿಸಿದ ಹೈಕೋರ್ಟ್ ವಕೀಲ ವಿಜಯ್ ಗೋಪಾಲ್ ಅವರು, “2021ರಲ್ಲಿ ಏಕಪರದೆ ಚಿತ್ರಮಂದಿರಗಳ ಮಾಲೀಕರು ಅಂದಿನ ಸರ್ಕಾರವನ್ನು ಸಂಪರ್ಕಿಸಿ ಯಾವುದೇ ಸಮರ್ಪಕ ಕಾರಣವಿಲ್ಲದೆ ಪಾರ್ಕಿಂಗ್ ನಿಯಮದಿಂದ ವಿನಾಯಿತಿ ಪಡೆದಿದ್ದರು. ಆದರೆ ಕಾನೂನಿನ ಪ್ರಕಾರ, ವಾಣಿಜ್ಯ ಸಂಸ್ಥೆಗೆ ಬರುವ ಗ್ರಾಹಕರಿಗೆ ಮಾನ್ಯವಾದ ಬಿಲ್ ಅಥವಾ ಟಿಕೆಟ್ ಇದ್ದರೆ ಅವರಿಗೆ ಪಾರ್ಕಿಂಗ್ ಉಚಿತವಾಗಿರಬೇಕು. ಈಗ ಹೈಕೋರ್ಟ್ ಆ ಹಳೆಯ ಆದೇಶವನ್ನು ಅಮಾನತುಗೊಳಿಸಿ ಸ್ಪಷ್ಟತೆ ನೀಡಿದೆ,” ಎಂದು ತಿಳಿಸಿದ್ದಾರೆ.

ಇಡೀ ತೆಲಂಗಾಣಕ್ಕೆ ಅನ್ವಯ

ಹೈಕೋರ್ಟ್ ನೀಡಿರುವ ಈ ತೀರ್ಪು ಕೇವಲ ಒಂದು ಚಿತ್ರಮಂದಿರಕ್ಕೆ ಮಾತ್ರ ಸೀಮಿತವಾಗಿಲ್ಲ. ತೆಲಂಗಾಣ ರಾಜ್ಯದಾದ್ಯಂತ ಇರುವ ಎಲ್ಲಾ ಏಕಪರದೆ ಚಿತ್ರಮಂದಿರಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ವಕೀಲರು ತಿಳಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಸರ್ಕಾರಿ ಆದೇಶದ ಮೂಲಕ ಯಾವುದೇ ಸಂಸ್ಥೆಗೆ ವಿಶೇಷ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಈ ತೀರ್ಪು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (11)

ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್

by ಕವಿತಾ
July 31, 2026 - 8:51 pm
0

ಈಶ್ವರ ಖಂಡ್ರೆ (10)

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

by ಕವಿತಾ
July 31, 2026 - 8:36 pm
0

ಈಶ್ವರ ಖಂಡ್ರೆ (9)

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

by ಕವಿತಾ
July 31, 2026 - 7:55 pm
0

ಈಶ್ವರ ಖಂಡ್ರೆ (8)

ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್

by ಕವಿತಾ
July 31, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version