ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಳಪತಿ ವಿಜಯ್‌ ವಿರುದ್ಧ ಪ್ರಕರಣ ದಾಖಲು

Untitled design 2026 03 31T190830.139

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ಹೊಸದಾಗಿ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಕಟ್ಟಿ ಚುನಾವಣಾ ಕಣಕ್ಕಿಳಿದಿರುವ ಸೂಪರ್ ಸ್ಟಾರ್ ವಿಜಯ್ ವಿರುದ್ಧ ಇದೀಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಕಾರಣಕ್ಕೆ ಅಧಿಕಾರಿಗಳು ವಿಜಯ್ ವಿರುದ್ಧ ದೂರು ದಾಖಲಿಸಿದ್ದಾರೆ.

ದಳಪತಿ ವಿಜಯ್ ಈ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಚೆನ್ನೈನ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರಗಳಿಂದ ಅವರು ನಾಮಪತ್ರ ಸಲ್ಲಿಸಿದ್ದಾರೆ. ವ್ಯಾಸರಪಾಡಿಯ ಡಾ. ಅಂಬೇಡ್ಕರ್ ಸರ್ಕಾರಿ ಕಲಾ ಕಾಲೇಜಿನಲ್ಲಿ ಚುನಾವಣಾಧಿಕಾರಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ನಂತರ ವಿಜಯ್ ಅವರು ಪೆರಂಬೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದರು.

ದೂರು ದಾಖಲಾಗಲು ಕಾರಣವೇನು ?

ಚುನಾವಣಾ ಅಧಿಕಾರಿ ಕುಮಾರ್ ಅವರು ನೀಡಿರುವ ದೂರಿನ ಅನ್ವಯ, ವಿಜಯ್ ವಿರುದ್ಧ ಒಟ್ಟು ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿರುವ ಪ್ರಮುಖ ಅಂಶಗಳು ಇಲ್ಲಿವೆ:

ತಮ್ಮ ನಾಯಕನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಟಿವಿಕೆ ಪಕ್ಷವು ಚುನಾವಣಾ ಆಯೋಗಕ್ಕೆ ತಿರುಗೇಟು ನೀಡಿದೆ. ವಿಜಯ್ ಅವರ ಭದ್ರತೆಯ ವಿಷಯದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಪಕ್ಷವು ಆರೋಪಿಸಿದೆ. ವಿಜಯ್ ಅವರ ಬೆಂಗಾವಲು ವಾಹನಗಳಿಗೆ ಯಾವುದೇ ಪೊಲೀಸ್ ಭದ್ರತೆ ಒದಗಿಸುತ್ತಿಲ್ಲ. ಇದು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದಲ್ಲದೆ, ಪ್ರಚಾರ ಪ್ರಕ್ರಿಯೆಗೆ ಅಡ್ಡಿಪಡಿಸುವ ತಂತ್ರವಾಗಿದೆ. ಇದು ಆಡಳಿತಾರೂಢ ಪಕ್ಷದ ಪರವಾದ ಪಕ್ಷಪಾತವನ್ನು ತೋರಿಸುತ್ತದೆ ಎಂದು ಟಿವಿಕೆ ಪತ್ರದಲ್ಲಿ ಕಿಡಿಕಾರಿದೆ.

ಮತ್ತೊಂದೆಡೆ, ಹಾಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಏಪ್ರಿಲ್ 23ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದ್ದು, ವಿಜಯ್ ಮತ್ತು ಸ್ಟಾಲಿನ್ ನಡುವಿನ ಈ ಸಮರ ಈಗ ಕಾನೂನು ಹೋರಾಟದ ರೂಪ ಪಡೆದುಕೊಂಡಿದೆ.

Exit mobile version