• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 6:43 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 06 09T184026.754

ಮುಂಬೈ: ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ.

ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.
ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ ವಿಭಿನ್ನ ಸಂಸ್ಕೃತಿ ಮತ್ತು ಕಥೆಗಳಿಗೆ ಸೂಕ್ತ ಮನ್ನಣೆ ಸಿಗುವಂತೆ ಮಾಡುವುದಾಗಿದೆ.

RelatedPosts

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ADVERTISEMENT
ADVERTISEMENT

ಸ್ಪರ್ಧೆಯು ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕರನ್ನೊಳಗೊಂಡ ಜ್ಯೂರಿ ಸಮಿತಿಯು ವಿಜೇತರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಸಮಿತಿಯಲ್ಲಿ ಅನುರಾಗ್ ಕಶ್ಯಪ್ (ಹಿಂದಿ), ರವಿ ಜಾಧವ್ (ಮರಾಠಿ), ನಾಗ್ ಅಶ್ವಿನ್ (ತೆಲುಗು), ಸೃಜಿತ್ ಮುಖರ್ಜಿ (ಬೆಂಗಾಲಿ), ಪಿ. ಸಮುದ್ರಖಣಿ (ತಮಿಳು), ನಮ್ಮ ಹೆಮ್ಮೆಯ ನಿರ್ದೇಶಕ ಹೇಮಂತ್ ರಾವ್ (ಕನ್ನಡ) ಮತ್ತು ಲಿಜೋ ಜೋಸ್ ಪೆಲ್ಲಿಸ್ಸೆರಿ (ಮಲಯಾಳಂ) ಭಾಗಿಯಾಗಿದ್ದಾರೆ.

ಇದರೊಂದಿಗೆ, ಸಮಾರೋಪ ಸಮಾರಂಭದಲ್ಲಿ ವಿಶೇಷ ಕಾರ್ಯಕ್ರಮವಾಗಿ ಖ್ಯಾತ ಪತ್ರಕರ್ತ ರಾಜೀವ್ ಮಸಂದ್ ಅವರ ನೇತೃತ್ವದಲ್ಲಿ ಜ್ಯೂರಿ ಸದಸ್ಯರ ವಿಶೇಷ ಸಂವಾದ ನಡೆಯಲಿದ್ದು, ಕಥೆ ಹೇಳುವ ಶೈಲಿ, ಪ್ರಾದೇಶಿಕ ಸಿನಿಮಾಗಳು ಮತ್ತು ಭಾರತೀಯ ಚಿತ್ರರಂಗದ ಭವಿಷ್ಯದ ಕುರಿತು ಚರ್ಚೆ ನಡೆಯಲಿದೆ.

ಮುಂಬೈನ ಪ್ರಸಿದ್ಧ ಹೋಟೆಲ್‌ನಲ್ಲಿ ನಡೆಯಲಿರುವ ಈ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಮಾಧ್ಯಮ ಮುಖ್ಯಸ್ಥರು,ಹಾಗೂ ಯುವ ನಿರ್ದೇಶಕರು ಒಂದೆಡೆ ಸೇರಲಿದ್ದಾರೆ. ಎಂಟು ಭಾಷಾ ವಿಭಾಗಗಳಲ್ಲಿ ವಿಜೇತರನ್ನು ಘೋಷಿಸಲಾಗುತ್ತಿದ್ದು; ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ, ಅತ್ಯುತ್ತಮ ಕಥೆ, ಅತ್ಯುತ್ತಮ ಸಂಗೀತ, ಅತ್ಯುತ್ತಮ ಹಾಸ್ಯನಟ ಸೇರಿದಂತೆ ಜ್ಯೂರಿಗಳ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.

ಯುವ ಪ್ರತಿಭೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರಗಳ ಪ್ರಸಾರ ಹಕ್ಕುಗಳನ್ನು ಜೀ ಸಂಸ್ಥೆ ಪಡೆಯಲಿದೆ. ಈ ಕಿರುಚಿತ್ರಗಳನ್ನು ZEE5 ಒಟಿಟಿ ವೇದಿಕೆಯಲ್ಲಿ ಸ್ಟ್ರೀಮ್ ಮಾಡುವುದರ ಜೊತೆಗೆ, ಜೀ ಟಿವಿ, ಜೀ ಕನ್ನಡ,ಜೀ ಮರಾಠಿ, ಜೀ ಬಾಂಗ್ಲಾ, ಜೀ ತೆಲುಗು, ಜೀ ತಮಿಳು, ಜೀ ಕೇರಳಂ, ಜೀ ಜೆಸ್ಟ್ ಮತ್ತು ಜಿಂಗ್ ವಾಹಿನಿಗಳಲ್ಲಿಯೂ ಪ್ರಸಾರವಾಗಲಿವೆ. ಯುವ ಕಥೆಗಾರರಿಗೆ ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳೆರಡರಲ್ಲೂ ದೊಡ್ಡ ಮಟ್ಟದ ವೇದಿಕೆಯಾಗಲಿದೆ. ಇದರೊಂದಿಗೆ ಪ್ರತಿ ಭಾಷಾ ವಿಭಾಗದ ಒಬ್ಬ ವಿಜೇತರಿಗೆ ತಲಾ 2,00,000 ರೂಪಾಯಿ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು.

‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ನ ಕುರಿತು ಮಾತನಾಡಿದ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಯೋಗಗಳನ್ನು ಮಾಡಿ, ಸೋಲು ಗೆಲುವುಗಳ ನಡುವೆ ತಮ್ಮ ವಿಭಿನ್ನ ಶೈಲಿಯ ಕಥೆಗಳನ್ನು ಹೇಳಲು ಕಿರುಚಿತ್ರಗಳು ಸಹಕಾರಿಯಾಗಿವೆ. ಈ ಸ್ಪರ್ಧೆಯು ಮುಕ್ತ ಅಭಿವ್ಯಕ್ತಿಗೆ ರಾಷ್ಟ್ರ ಮಟ್ಟದ ವೇದಿಕೆ ಕಲ್ಪಿಸಿದೆ” ಎಂದರು.

ನಿರ್ದೇಶಕ ಹೇಮಂತ್ ರಾವ್ ಮಾತನಾಡಿ, “ಹೊಸ ಪ್ರಯೋಗಗಳನ್ನು ನಾವು ಎಷ್ಟು ಧೈರ್ಯದಿಂದ ಬೆಂಬಲಿಸುತ್ತೇವೆಯೋ, ಅದರ ಮೇಲೆ ಚಿತ್ರರಂಗದ ಭವಿಷ್ಯ ನಿಂತಿದೆ. ಈ ವೇದಿಕೆಯು ಯುವ ನಿರ್ದೇಶಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲದೆ ತಮ್ಮ ಕಥೆಗಳನ್ನು ಹೇಳಲು ಆತ್ಮವಿಶ್ವಾಸ ನೀಡಿದೆ” ಎಂದು ಅಭಿಪ್ರಾಯ ಪಟ್ಟರು.

ನಾಗ್ ಅಶ್ವಿನ್ ಮಾತನಾಡಿ, “ಯಾವುದೇ ಚೌಕಟ್ಟುಗಳಿಗೆ ಸಿಲುಕದ ಹೊಸ ಪ್ರತಿಭೆಗಳು ಅದ್ಭುತ ಆಲೋಚನೆಗಳನ್ನು ಹೊಂದಿರುತ್ತಾರೆ . ಇಂದಿನ ತಂತ್ರಜ್ಞಾನದ ಸುಲಭ ಲಭ್ಯತೆ ಯುವ ಪೀಳಿಗೆಯ ಕಲ್ಪನಾ ಶಕ್ತಿಗೆ ಹೊಸ ಆಯಾಮ ನೀಡಿದೆ” ಎಂದು ಹಂಚಿಕೊಂಡರು.

ರವಿ ಜಾಧವ್ ಮಾತನಾಡಿ,”ಭಾರತೀಯ ಚಿತ್ರರಂಗದ ಅಸಲಿ ಶಕ್ತಿ ಇರುವುದೇ ನಮ್ಮ ಪ್ರಾದೇಶಿಕ ಕಥೆಗಳಲ್ಲಿ. ಇದು ವಿಭಿನ್ನ ಹಿನ್ನೆಲೆಯ ಧ್ವನಿಗಳನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುವ ಅದ್ಭುತ ಪ್ರಯತ್ನ” ಎಂದರು.

ಸೃಜಿತ್ ಮುಖರ್ಜಿ ಮಾತನಾಡಿ, ” ಸಿನಿಮಾಗಳಿಗೆ ಈಗ ಭಾಷೆ ಮತ್ತು ಭೌಗೋಳಿಕ ಗಡಿಗಳಿಲ್ಲ. ಇಂತಹ ವೇದಿಕೆಗಳು ಒಳ್ಳೆ ಕಥೆಗಳಿಗೆ ಉತ್ತಮ ಅವಕಾಶ ನೀಡಿ ಪ್ರೇಕ್ಷಕರನ್ನು ತಲುಪುವಲ್ಲಿ ಸಹಕಾರಿಯಾಗಿವೆ.” ಎಂದರು

ಲಿಜೋ ಜೋಸ್ ಪೆಲ್ಲಿಸ್ಸೆರಿ, “ಭಾರತೀಯ ಸಿನಿಮಾರಂಗ ಸದಾ ಹೊಸತನವನ್ನು ಬಯಸುತ್ತದೆ ಕಥೆ ಹೇಳುವ ಹಳೆಯ ಶೈಲಿಯನ್ನು ಮೀರಿ,ಪ್ರೇಕ್ಷಕರನ್ನು ಬೆರಗುಗೊಳಿಸುವ ಹೊಸ ಧ್ವನಿಗಳಿಗೆ ಅವಕಾಶ ನೀಡುವುದು ಮುಖ್ಯ” ಎಂದು ನುಡಿದರು.

ಪಿ. ಸಮುದ್ರಖಣಿ,”ನೈಜ ಜೀವನದ ಅನುಭವಗಳಿಂದ ಬಂದ ಕಥೆಗಳು ನೇರವಾಗಿ ಪ್ರೇಕ್ಷಕರ ಮನ ಮುಟ್ಟುತ್ತವೆ
ಅಂತಹ ಕಥೆಗಳಿಗೆ ಇಲ್ಲಿ ಮನ್ನಣೆ ಸಿಗುತ್ತಿರುವುದು ಸಂತಸದ ವಿಚಾರ . ಜೀ ಸಂಸ್ಥೆ ಆಯೋಜಿಸುತ್ತಿರುವ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಮಹಾ ಸಮಾರೋಪವು, ಕೇವಲ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರದೆ ದೇಶದ ಸಾಂಸ್ಕೃತಿಕ ವೈವಿದ್ಯತೆ,ಸೃಜನಶೀಲತೆ ಮತ್ತು ಯುವ ಕಥೆಗಾರರನ್ನು ಸಂಭ್ರಮಿಸುವ ವೇದಿಕೆಯಾಗಲಿದೆ..

ದೀಪಕ್ ಶ್ರೀರಾಮುಲು, ಚೀಫ್ ಚಾನೆಲ್ ಆಫೀಸರ್ – ಜೀ ಕನ್ನಡ & ಜೀ 5 ಬ್ಯುಸಿನೆಸ್ ಹೆಡ್ ಅವರು ” ಜೀ ನೆಟ್‌ವರ್ಕ್ ಹೊಸ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ವೇದಿಕೆ ಕಲ್ಪಿಸುತ್ತಾ ಬಂದಿದೆ. ಈ ಹಾದಿಯಲ್ಲಿ ಅನೇಕ ನಿರ್ದೇಶಕರು, ಬರಹಗಾರರು,ನಟರು ಹೀಗೆ ಅನೇಕರ ಕಲಿಕೆಗೆ ಜೀ ಪೂರಕವಾಗಿದೆ. ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಜೀ ರೈಟರ್ಸ್ ರೂಮ್ ಎನ್ನುವ ಹೊಸ ಹೆಜ್ಜೆಯನ್ನು ಇಟ್ಟಿತ್ತು. ಈ ಬಾರಿ ದೇಶದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಬಹುಭಾಷಾ ಕಿರುಚಿತ್ರ ಸ್ಪರ್ಧೆಯನ್ನು ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಆಯೋಜಿಸಲಾಗಿತ್ತು .ಈ ಪ್ರಯತ್ನಕ್ಕೆ ಚಿತ್ರರಂಗದ ಖ್ಯಾತ ನಿರ್ದೇಶಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಹಾಗೇ ಜನರಿಂದ ಕೂಡ ಅತ್ಯುತ್ತಮ ಪ್ರತಿಕ್ರಿಯೆ ಬಂದಿರುವ ಸಂತಸ ನಮಗಿದೆ. ಈ ಸ್ಪರ್ಧೆಯ ಗ್ರಾಂಡ್ ಫಿನಾಲೆ ಜೂನ್ 5 ರಂದು ನಡೆಯಲಿದ್ದು ಈ ವೇದಿಕೆ ಉದಯೋನ್ಮುಖ ಪ್ರತಿಭೆಗಳನ್ನು ಚಿತ್ರರಂಗ, ಮುಖ್ಯ ವಾಹಿನಿ ಹಾಗೂ OTTಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಲಿದೆ.ಇಂಹತ ಸೃಜನಾತ್ಮಕ ಹಾಗೂ ಅರ್ಥ ಪೂರ್ಣ ವೇದಿಕೆಯನ್ನು ಸೃಷ್ಟಿಸುವಲ್ಲಿ ಮಾರ್ಗದರ್ಶನ ನೀಡಿರುವ ರಾಘವೇಂದ್ರ ಹುಣಸೂರು,ಚೀಫ್ ಕಂಟೆಂಟ್ ಆಫೀಸರ್,ಜೀ ಹಾಗೂ ಜೀ ತಂಡಕ್ಕೂ ನನ್ನ ಕೃತಜ್ಞತೆಗಳು ಹಾಗೂ ಎಲ್ಲಾ ಸ್ಪರ್ಧಾರ್ಥಿಗಳಿಗೂ ಶುಭವಾಗಲಿ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸ್ವ (15)

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

by ದಿಶಾ ಕೆ. ಎಸ್.
July 21, 2026 - 11:46 am
0

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version