ಬಿಡದಿ 2ನೇ ಏರ್‌ಪೋರ್ಟ್‌ಗೆ ಸೂಕ್ತ ಅಲ್ಲ: ಸಚಿವ ಎಂ.ಬಿ. ಪಾಟೀಲ್

Siddu stalin kcr (72)

ಬೆಂಗಳೂರಿನ 2ನೇ ವಿಮಾನ ನಿಲ್ದಾಣ  ಜಾಗ ಕನಕಪುರ ಭಾಗನಾ? ನೆಲಮಂಗಲದ ಭಾಗನಾ? ಅಥವಾ ಕುಣಿಗಲ್​​ ಭಾಗನಾ? ಎಂಬ ವಿಷಯ ಗೊಂದಲ ಸೃಷ್ಟಿಸಿದೆ.

ಹೌದು ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದು, ಏರ್​ಪೋರ್ಟ್​ ನಿರ್ಮಾಣದ ಸ್ಥಳಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಳೆದ ಮೂರು ದಿನಗಳಿಂದ ಏರ್​ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕಾರಿಗಳು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಕನಕಪುರ ರಸ್ತೆಯ 2 ಸ್ಥಳಗಳನ್ನು ಪರಿಶೀಲನೆ ಮಾಡಿ ಬಳಿಕ ಸಚಿವ ಎಂ ಬಿ ಪಾಟೀಲ್ ಜೊತೆಗೆ ಸುದೀರ್ಘ ಚರ್ಚೆ ಮಾಡಿದ್ದಾರೆ. ಹಾಗೇ ನೆಲಮಂಗಲ ಮತ್ತು ಕುಣಿಗಲ್ ಭಾಗದ ಸ್ಥಳಗಳನ್ನೂ ಏರ್ಪೋರ್ಟ್ ಅಥಾರಿಟಿ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರರಲ್ಲಿ ಒಂದು ಔಟ್​ ಆದಂತಾಗಿದ್ದು, ಇನ್ನುಳಿದ ಎರಡು ಸ್ಥಳಗಳಲ್ಲಿ ಯಾವುದನ್ನು ಆಯ್ಕೆ ಮಾಡಲಾಗುತ್ತೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಸಚಿವ ಎಂ ಬಿ ಪಾಟೀಲ್‌ ಅವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿದ್ದಾರೆ. ಯಾರ ಒತ್ತಡಕ್ಕೂ ಮಣೆಯದೇ ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದ್ದಾರೆ.

ಬಳಿಕ ಮಾತನಾಡಿದ ಸಚಿವ ಎಂಬಿ ಪಾಟೀಲ್, ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಂ ಬಿ ಪಾಟೀಲ್‌ ಅವರು ತಿಳಿಸಿದ್ದಾರೆ. ಇನ್ನೂ, ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಇನ್ನುಳಿದ ಎರಡು ಸ್ಥಳಗಳ ಬಗ್ಗೆ ಕೇಂದ್ರ ಅಧ್ಯಯನ ತಂಡ ವರದಿ ನೀಡಲಿದೆ ಎಂದಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version