ಗುಡ್‌ ನ್ಯೂಸ್‌! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ರಾಜ್ಯ ಸರ್ಕಾರ ಗ್ರಿನ್‌ ಸಿಗ್ನಲ್‌

Untitled design 2026 02 12T221125.983

ಬೆಂಗಳೂರು: ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ

ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕರಿಯಿಸಿದ ಡಿಸಿಎಂ ಡಿಕೆಶಿ, ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್ ಮಾರಾಟ ಮಾಡಬೇಕು, ಜನದಟ್ಟಣೆ ಅಗತ್ಯಕ್ಕೆ ತಕ್ಕಂತೆ ದೊಡ್ಡ ಗೇಟ್‌ಗಳ ಅಳವಡಿಕೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸುಗಳ ಅನುಗುಣವಾಗಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇದು ಕ್ರಿಕೆಟ್ ಪ್ರಿಯರಿಗೆ ಇದೊಂದು ಶುಭ ಸುದ್ದಿಯಾಗಿದ್ದು, ಇಷ್ಟು ದಿನಗಳ ಕಾಲ ಅನುಭವಿಸಿದ ನೋವಿಗೆ ವಿಷಾದಿಸುತ್ತೇನೆ. ನಾವು ಒಂದು ಪ್ರತಿಷ್ಠಿತ ಪಂದ್ಯಾವಳಿ ಕಳೆದುಕೊಂಡಿದ್ದೇವೆ. ಮುಂದಿನ ಬಾರಿ ನಾವು ಜಾಗೃತರಾಗಿರೋಣ ಎಂದು ತಿಳಿಸಿದರು.

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ ಫಿಕ್ಸ್..! ಕೆಎಸ್‌ಸಿಎ ಇಂದು ಅಧಿಕೃತ ಘೋಷಣೆ..?

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಆರ್‌ಸಿಬಿ.. ಆರ್‌ಸಿಬಿ.. ಎಂಬ ಘೋಷಣೆ ಮೊಳಗಲಿದೆಯೇ ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ಪಂದ್ಯಗಳ ಆಯೋಜನೆಗೆ ಹಸಿರು ನಿಶಾನೆ ತೋರಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸ್ಟೇಡಿಯಂನಲ್ಲಿ ಪಂದ್ಯ ಆಡುವುದು ಇನ್ನು ಅಧಿಕೃತವಾಗಿಲ್ಲ. ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬುಧವಾರ ಮಹತ್ವದ ಸುದ್ದಿಗೋಷ್ಠಿ ಕರೆದಿದೆ.

ವದಂತಿಗಳಿಗೆ ಸಿಗಲಿದೆಯೇ ಬ್ರೇಕ್ ?

ಕಳೆದ ಕೆಲವು ದಿನಗಳಿಂದ ಆರ್‌ಸಿಬಿ ತಂಡವು ತನ್ನ ತವರು ನೆಲವಾದ ಬೆಂಗಳೂರನ್ನು ಬಿಟ್ಟು ಪುಣೆ, ನವಿ ಮುಂಬೈ ಅಥವಾ ರಾಯ್ಪುರದಲ್ಲಿ ಪಂದ್ಯಗಳನ್ನು ಆಡಲಿದೆ ಎಂಬ ಬಲವಾದ ವದಂತಿಗಳು ಹಬ್ಬಿದ್ದವು. ಇದು ಆರ್‌ಸಿಬಿ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ, ಕೆಎಸ್‌ಸಿಎ ಅಧಿಕಾರಿಗಳು ಆರ್‌ಸಿಬಿ ಫ್ರಾಂಚೈಸಿಯೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದ್ದು, ತವರಿನಲ್ಲೇ ಪಂದ್ಯ ಆಡುವಂತೆ ಮನವೊಲಿಸುತ್ತಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಈ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ಸಿಗುವ ನಿರೀಕ್ಷೆಯಿದೆ.

AI ತಂತ್ರಜ್ಞಾನದ ಕ್ಯಾಮೆರಾ

ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ಫ್ರಾಂಚೈಸಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಸುಮಾರು 300 ರಿಂದ 350 ಎಐ (Artificial Intelligence) ಆಧಾರಿತ ಕ್ಯಾಮೆರಾಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ಅಳವಡಿಸಲು ಆರ್‌ಸಿಬಿ ಆಡಳಿತ ನಿರ್ಧರಿಸಿದೆ. ಈ ಅತ್ಯಾಧುನಿಕ ತಂತ್ರಜ್ಞಾನವು ಪ್ರೇಕ್ಷಕರ ಚಲನವಲನಗಳನ್ನು ಗಮನಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಹಕಾರಿಯಾಗಲಿದೆ.

ಕಳೆದ ವರ್ಷ ಜೂನ್ 4 ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಹೀಗಾಗಿ, ರಾಜ್ಯ ಸರ್ಕಾರವು ಈ ಬಾರಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಷರತ್ತು ವಿಧಿಸಿ ಪಂದ್ಯ ಆಯೋಜನೆಗೆ ಅನುಮತಿ ನೀಡಿದೆ .

ಅಭಿಮಾನಿಗಳ ಆಸೆ ಈಡೇರುವುದೇ ?

ಬೆಂಗಳೂರಿನ ಅಭಿಮಾನಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ನಡುವೆ ಅವಿನಾಭಾವ ಸಂಬಂಧವಿದೆ. ಆರ್‌ಸಿಬಿ ತಂಡಕ್ಕೆ ಬೆಂಗಳೂರೇ ಶಕ್ತಿ. ಎಐ ಕ್ಯಾಮೆರಾಗಳ ಅಳವಡಿಕೆ ಮತ್ತು ಸರ್ಕಾರದ ಗ್ರೀನ್ ಸಿಗ್ನಲ್ ನಂತರ, ಆರ್‌ಸಿಬಿ ಆಡಳಿತ ಮಂಡಳಿ ಪಾಸಿಟಿವ್ ಆಗಿ ಸ್ಪಂದಿಸುವ ಸಾಧ್ಯತೆ ದಟ್ಟವಾಗಿದೆ. ಇಂದು ಕೆಎಸ್‌ಸಿಎ ನೀಡುವ ಪ್ರಕಟಣೆಯ ಮೇಲೆ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಕಣ್ಣು ನೆಟ್ಟಿದೆ.

Exit mobile version