ಆಲಿಕಲ್ಲು ಮಳೆಗೆ ಬೆಂಗಳೂರು ಹೈರಾಣು! ಮರಗಳು ಕುಸಿದು ನಗರದಲ್ಲಿ ಅವಾಂತರ

BeFunky collage (84)

ರಾಜಧಾನಿ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ತೀವ್ರ ಅವಾಂತರ ಸೃಷ್ಟಿಯಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ನಂದಿನಿ ಲೇಔಟ್, ನವರಂಗ, ಕೆ.ಆರ್. ಮಾರ್ಕೆಟ್, ರಾಮಮೂರ್ತಿ ನಗರ, ಕೋರಮಂಗಲ ಮತ್ತು ಬನ್ನೇರುಘಟ್ಟ ರಸ್ತೆ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಮರಗಳು ಬುಡಸಮೇತ ಕುಸಿದು ಸಂಚಾರ ಸ್ಥಗಿತಗೊಂಡಿದೆ.

ವೆಸ್ಟ್ ಆಫ್ ಕಾರ್ಡ್ ರೋಡ್‌ನಲ್ಲಿ ಬೃಹತ್ ಮರವೊಂದು ಬುಡಸಮೇತ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಸ್ಥಳೀಯರು ಮತ್ತು GBA ಸಿಬ್ಬಂದಿಗಳು ಮರವನ್ನು ಕತ್ತರಿಸಿ ಸಂಚಾರಕ್ಕೆ ಮಾರ್ಗ ಮಾಡಿಕೊಟ್ಟಿದ್ದಾರೆ. ವೈಯಾಲಿಕಾವಲ್ ಪ್ರದೇಶದಲ್ಲಿ ಬೃಹತ್ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಇಲ್ಲಿಯೂ ಮರ ತೆರವುಗೊಳಿಸುವ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ವಿವಿಧೆಡೆ ಅವಾಂತರ :

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24-48 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಎಚ್ಚರಿಕೆ :

ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು GBA ಸಿಬ್ಬಂದಿಗಳು ಮರಗಳನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕೆಲವು ಪ್ರದೇಶಗಳಲ್ಲಿ ಇನ್ನೂ ಮರಗಳು ಬಿದ್ದುಕೊಂಡಿರುವುದು ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದೆ.

ಈ ಮಳೆಯಿಂದಾಗಿ ನಗರದಲ್ಲಿ ವಿದ್ಯುತ್ ಸರಬರಾಜು ಕಡಿತಗೊಳ್ಳುವ, ರಸ್ತೆಗಳು ಜಲಾವೃತವಾಗುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರುವಂತೆ ಮನವಿ ಮಾಡಲಾಗಿದೆ.

Exit mobile version