ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಕುಂಟೆ, ಸ್ಮಶಾನ, ಗುಂಡುತೋಪು, ಸರ್ಕಾರಿ ಕಟ್ಟೆ, ಸರ್ಕಾರಿ ಕರೆ, ಸರ್ಕಾರಿ ಊರ ಮುಂದಲ ತಿಪ್ಪೆ ಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ಸ.ನಂ 20 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ 124ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಹಾಲನಾಯಕನಹಳ್ಳಿ ಗ್ರಾಮದ ಸ.ನಂ 23ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.60 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಸರ್ಜಾಪುರ-3 ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.30 ಕೋಟಿಗಳಾಗಿರುತ್ತದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಮಾದಾಪಟ್ಟಣ ಗ್ರಾಮದ ಸ.ನಂ 31ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 1.23 ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಸ.ನಂ 58ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.69 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಸ.ನಂ 53ರ ಸರ್ಕಾರಿ ಕರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.50 ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಯಲಹಂಕ-3 ಹೋಬಳಿಯ ದೊಡ್ಡಬೆಟ್ಟಹಳ್ಳಿ ಗ್ರಾಮದ ಸ.ನಂ 5 ಸರ್ಕಾರಿ ಊರ ಮುಂದಲ ತಿಪ್ಪೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಕೋಟಿಗಳಾಗಿರುತ್ತದೆ. ಹೆಸರುಘಟ್ಟ-1 ಹೋಬಳಿಯ ಮತ್ಕೂರು ಗ್ರಾಮದ ಸ.ನಂ 76 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಹುಣ್ಣಿಗೆರೆ ಗ್ರಾಮದ ಸ.ನಂ51 ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.75ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಸ.ನಂ38 ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು,ಅಂದಾಜು ಮೌಲ್ಯ ರೂ 3.00 ಕೋಟಿಗಳಾಗಿರುತ್ತದೆ. ಯಶವಂತಪುರ ಹೋಬಳಿಯ ಚಿಕ್ಕಬಾಣಾವರ ಗ್ರಾಮದ ಸ.ನಂ 57 ಸರ್ಕಾರಿ ಕಟ್ಟಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 16.05 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54
