ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.
ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸತೀಶ್ ರೆಡ್ಡಿರವರು-1,13,574 ಮತಗಳಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಉಮಾಪತಿ ಶ್ರೀನಿವಾಸ ಗೌಡ-89,359 ಮತ ಗಳಿಸಿದ್ದರು. ಜೆಡಿಎಸ್ ನಾರಾಯಣ ರಾಜು-3445 ಮತ ಗಳಿಸಿದ್ದರು.ಈ ಚುನಾವಣೆಯಲ್ಲಿ ಸತೀಶ್ ರೆಡ್ಡಿ ಅವರು 1,13,574 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚಿತ್ರಣ..!
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ರೆಡ್ಡಿ ಸತತ ಗೆಲುವಿನ ನಾಗಾಲೋಟ ಕಂಡು ಕ್ಷೇತ್ರವನ್ನು ತಮ್ಮ ಕೈವಶ ಮಾಡಿಕೊಂಡಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಆಂಧ್ರ, ತಮಿಳುನಾಡಿನಿಂದ ಬಂದ ವಲಸಿಗ ಮತದಾರರೇ ಹೆಚ್ಚಾಗಿದ್ದಾರೆ. ಕಳೆದ ನಾಲ್ಕು ಚುನಾವಣೆಗಳಿಂದ ಬಿಜೆಪಿಯೆ ಜಯ ಕಾಣುತ್ತಿದ್ದಾರೆ. ಸತೀಶ್ ರೆಡ್ಡಿ ವಿರುದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸತತ ಸೋಲು ಕಾಣುತ್ತಿದ್ದಾರೆ. ಸತೀಶ್ ರೆಡ್ಡಿ ವಿರುದ್ದ ಪ್ರಬಲ ಸ್ಪರ್ಧೆ ನೀಡಿದ ನಿರ್ಮಾಪಕ ಹಾಗೂ ರಾಜಕಾರಣಿ ಉಮಾಪತಿ ಗೌಡ ಸಹ ಸೋಲು ಕಂಡಿದ್ದರು. ಒಕ್ಕಲಿಗ ಸಮುದಾಯವೇ ನಿರ್ಣಯಕವಾಗಿದೆ. ವಲಸಿಗರ ಕಾರಣದಿಂದ ಸತೀಶ್ ರೆಡ್ಡಿಗೆ ಗೆಲ್ಲಲು ಪ್ಲಸ್ ಆಗಿದೆ.
ಬೆಂಗಳೂರಿನಲ್ಲಿ ಅಭಿವೃದ್ಧಿ ಹೊಂದಿರುವ ಪ್ರದೇಶಗಳಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಕೂಡಾ ಒಂದಾಗಿದೆ. ಶಾಸಕ ಸತೀಶ್ ರೆಡ್ಡಿ ಸ್ಥಳೀಯ ನಾಯಕರಾಗಿರುವುದರಿಂದ ಜನರಿಗೆ ಸುಲಭವಾಗಿ ಸಿಗುತ್ತಾರೆ. ತಮ್ಮ ಕಷ್ಟಗಳಿಗೆ ಬೇಗ ಪರಿಹಾರ ದೊರೆಯುತ್ತದೆ ಎಂಬುದು ಜನರ ಅಭಿಪ್ರಾಯ.
ಸತೀಶ್ ರೆಡ್ಡಿ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ರಾಜಕಾರಣ ಮಾಡುತ್ತಿದ್ಧಾರೆ. ನಾಲ್ಕು ಅವಧಿಯಲ್ಲೂ ಕ್ಷೇತ್ರ ಅಭಿವೃದ್ಧಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಐಟಿ-ಬಿಟಿಯದ್ದೇ ಸದ್ದು ಮಾಡುತ್ತಿದೆ. ರೆಡ್ಡಿ ಜೊತೆ ನಿಂತ ತೆಲುಗು-ತಮಿಳು ಜನರು ಬೆಂಬಲ ನೀಡಿದ್ದಾರೆ. ಕ್ಷೇತ್ರದಲ್ಲಿ ಡಬಲ್ ಡೆಕ್ಕರ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿ ಚುರುಕು ಮಾಡಿದ್ದಾರೆ. ನಿರ್ಮಾಪಕ ಹಾಗೂ ರಾಜಕಾರಣಿ ಉಮಾಪತಿ ಗೌಡ ಕಾಂಗ್ರೆಸ್ ಅಭ್ಯರ್ಥಿ 2023ರಲ್ಲಿ ಸತೀಶ್ ರೆಡ್ಡಿ ವಿರುದ್ಧ ಸ್ಪರ್ಧೆ ಬಾರೀ ಪೈಪೋಟಿ ನಡೆದಿದೆ. ಸೋತರೂ ಗ್ಯಾರೆಂಟಿಗಳನ್ನು ಬೂತ್ಗೆ ತಲುಪಿಸಿ ಲಾಭ ಪಡೆಯಲು ಯತ್ನಿಸಿದ್ಧಾರೆ. ಕಳೆದ ಬಾರಿ ಉಮಾಪತಿಗೆ ಕಾಂಗ್ರೆಸ್ ನಾಯಕರಿಂದಲೇ ಒಳೇಟು ಬಿದಿದ್ದೆ.ಈಗಲೇ ಕ್ಷೇತ್ರದಲ್ಲಿ ಚುನಾವಣೆ ತಯಾರಿ ಮಾಡಿರೋ ಉಮಾಪತಿ ಗೆಲ್ಲುತ್ತಾರಾ.
ಬೊಮ್ಮನಹಳ್ಳಿಯಲ್ಲಿ ಕ್ಷೇತ್ರದ ಆಕಾಂಕ್ಷಿಗಳು ಯಾರು..?
ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಗಳು ಯಾರು ಎಂದು ನೋಡುವುದಾದರೆ ಬಿಜೆಪಿಯಿಂದ ಹಾಲಿ ಶಾಸಕ ಸತೀಶ್ ರೆಡ್ಡಿ ಜೊತೆಗೆ ಉಮಾಪತಿ ಶ್ರೀನಿವಾಸ್ ಸಹ ರೇಸ್ನಲ್ಲಿ ಇದ್ದಾರೆ. ಕಾಂಗ್ರೆಸ್ ನಿಂದ ಉಮಾಪತಿ ಶ್ರೀನಿವಾಸ್ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ಜೆಡಿಎಸ್ ನಿಂದ ಯಾರು ಸ್ಪರ್ಧೆಗೆ ಸಿದ್ಧತೆ ಮಾಡಿಲ್ಲ.
ಜನರ ಒಲವು ಈಗಲೂ ಯಾರ ಕಡೆ?
ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್ಗೆ ಗ್ಯಾರಂಟಿ ಯೋಜನೆ ಕೈ ಹಿಡಿದರು ಅಚ್ಚರಿಯಿಲ್ಲ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54