ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಇ-ಮೇಲ್ ಸಂದೇಶದಿಂದ ಹೆಚ್ಚಿದ ಆತಂಕ

02 (12)

ಚಾಮರಾಜನಗರ: ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಕರೆಗಳು ಮತ್ತು ಸಂದೇಶಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಗುರಿಯಾಗಿದೆ. ಜಿಲ್ಲಾಧಿಕಾರಿ ಕಚೇರಿಯನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಈ ಘಟನೆಯಿಂದ ಆತಂಕ ಸೃಷ್ಟಿಯಾಗಿದ್ದು, ಚಾಮರಾಜನಗರ ಎಸ್‌ಪಿಗೆ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇ-ಮೇಲ್ ಸಂದೇಶದಲ್ಲಿ, ಇಂದು ಮಧ್ಯಾಹ್ನ 3 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಉಲ್ಲೇಖಿಸಲಾಗಿದೆ. ಸಂದೇಶ ಬಂದ ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು, ಚಾಮರಾಜನಗರ ಎಸ್‌ಪಿ ಕವಿತಾ ಅವರಿಗೆ ಮಾಹಿತಿ ನೀಡಿದೆ. ಪೊಲೀಸರು ಇ-ಮೇಲ್ ಖಾತೆಯ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದು, ಚಾಮರಾಜನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT
ADVERTISEMENT
Exit mobile version