ಚಾಮರಾಜನಗರ: ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಕರೆಗಳು ಮತ್ತು ಸಂದೇಶಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಗುರಿಯಾಗಿದೆ. ಜಿಲ್ಲಾಧಿಕಾರಿ ಕಚೇರಿಯನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಈ ಘಟನೆಯಿಂದ ಆತಂಕ ಸೃಷ್ಟಿಯಾಗಿದ್ದು, ಚಾಮರಾಜನಗರ ಎಸ್ಪಿಗೆ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ADVERTISEMENT
ADVERTISEMENT