ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

BeFunky collage (53)

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶಗಳು ಲಭ್ಯವಾಗುವ ನಿರೀಕ್ಷೆಯಿದೆ. ಹಿರಿಯ ಕಾಂಗ್ರೆಸ್ ನಾಯಕರ ನಿಧನದಿಂದ ತೆರವಾದ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಮತ ಎಣಿಕೆ ವಿವರ :

ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯು ನಗರದ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಬಾಗಲಕೋಟೆ ಕ್ಷೇತ್ರದ ಎಣಿಕೆಯು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಿ 8.30ಕ್ಕೆ ಇವಿಎಂ ಎಣಿಕೆ ಶುರುವಾಗಲಿದೆ.

ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರಗಳ ಸುತ್ತ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವಾಗಿ ಘೋಷಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಭ್ಯರ್ಥಿಗಳು ಮತ್ತು ಸ್ಪರ್ಧೆ :

ದಾವಣಗೆರೆ ದಕ್ಷಿಣ ಕ್ಷೇತ್ರ:

ಬಾಗಲಕೋಟೆ ಕ್ಷೇತ್ರ:

ಕಾಂಗ್ರೆಸ್‌ಗೆ ಭಿನ್ನಮತದ ಸವಾಲು :

ಕಾಂಗ್ರೆಸ್ ಪಕ್ಷಕ್ಕೆ ಎರಡೂ ಕ್ಷೇತ್ರಗಳಲ್ಲಿ ಆಂತರಿಕ ಭಿನ್ನಮತ ಎದುರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಸಮುದಾಯದ ಅಸಮಾಧಾನ, ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿರುವುದು ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆರಂಭಿಕ ನಿಷ್ಕ್ರಿಯತೆ ಪಕ್ಷಕ್ಕೆ ಸವಾಲಾಗಿದೆ. 14 ಮಂದಿ ಮುಸ್ಲಿಂ ಅಭ್ಯರ್ಥಿಗಳು ಬಂಡಾಯವಾಗಿ ಕಣದಲ್ಲಿದ್ದಾರೆ.

ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಒಳಭಿನ್ನಮತ (ಮಲ್ಲಿಕಾರ್ಜುನ ಮೇಟಿ vs ಉಮೇಶ್ ಮೇಟಿ) ಟಿಕೆಟ್ ವಿವಾದಕ್ಕೆ ಕಾರಣವಾಗಿತ್ತು.

ಈ ಉಪಚುನಾವಣೆಯ ಫಲಿತಾಂಶಗಳು ರಾಜ್ಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಪ್ರಭಾವ ಬೀರಲಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

Exit mobile version