KIADB ಭೂಸ್ವಾಧೀನ ವಿರೋಧಿಸಿ ಧರಣಿ ವೇಳೆ ವಿಷ ಕುಡಿದು ರೈತ ಅಸ್ವಸ್ಥ

Siddu stalin kcr (70)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1,777 ಎಕೆರೆ ಭೂಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದ್ದು, ಸರ್ಕಾರದ ಕ್ರಮ ಖಂಡಿಸಿ ಈ ಭಾಗದ ರೈತರು ತಮ್ಮ ಜಮೀನು ಕೊಡುವುದಿಲ್ಲ ಅಂತ ನಿರಂತರ 4 ವರ್ಷಗಳಿದ ಅನಿರ್ಧಾಷ್ಟವಧಿ ಧರಣಿ ನಡೆಸುತ್ತಿದ್ದಾರೆ.

ಇಂದು ಸಹ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದೇವನಹಳ್ಳಿ ಶಾಸಕ ಕೆ.ಹೆಚ್ ಮುನಿಯಪ್ಪ ನಿವಾಸಕ್ಕೆ ರೈತರು ಮುತ್ತಿಗೆ ಹಾಕಲು ತೀರ್ಮಾನ ಮಾಡಿದ್ದರು. ಅಂತೆಯೇ ಎರಡು ಬಸ್‌ಗಳ ಮೂಲಕ ಬೆಂಗಳೂರಿಗೆ ಹೊರಟಿದ್ದ ರೈತರ ಬಸ್ಸನ್ನು ಪೊಲೀಸರು ತಡೆಯೊಡ್ಡಿದ್ದರು. ಇದರಿಂದ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇದಾದ ನಂತರ ಧರಣಿ ನಿರತ ರೈತರು ನಮಗೆ ಸಾಯೋದಕ್ಕಾದರೂ ಬಿಡಿ ಅಂತ ಊಟದಲ್ಲಿ ಕ್ರೀಮಿನಾಶಕ ಬೆರೆಸಲು ಮುಂದಾಗಿದ್ದು ಈ ವೇಳೆ ಕ್ರೀಮಿನಾಶಕ ಬಾಟಲಿಯನ್ನ ಪೊಲೀಸರು ಕಸಿದುಕೊಳ್ಳುವ ಪ್ರಯತ್ನ ಮಾಡಿ ತಳ್ಳಾಟ ನೂಕಾಟ ನಡೆದಿದೆ.

ಈ ವೇಳೆ ರೈತ ವೆಂಕಟೇಶ್ ಎಂಬಾತ ಕ್ರೀಮಿನಾಶಕ ಸೇವಿಸಿ ಆಸ್ವಸ್ಥಗೊಂಡಿದ್ದು ಪೊಲೀಸರು ಅಸ್ವಸ್ಥ ರೈತನನ್ನ ದೇವನಹಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ನಂತರ ಧರಣಿ ನಿರತ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version