• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಮುಂಡೇಶ್ವರಿ ಎಲ್ಲ ಧರ್ಮದವರ ದೇವರು, ದೇವರಿಗೆ ಜಾತಿ-ಧರ್ಮ ಲೇಪನ ಮಾಡಬೇಡಿ: ಡಿಸಿಎಂ ಡಿಕೆಶಿ

ನಾಡದೇವಿಗೆ ಧರ್ಮದ ರಾಜಕೀಯ ಬೇಡ: ಡಿಕೆಶಿ

admin by admin
August 27, 2025 - 5:17 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 27t171601.645

ಬೆಂಗಳೂರು: ಚಾಮುಂಡೇಶ್ವರಿ ದೇವಿ ಎಲ್ಲ ಧರ್ಮದವರ ದೇವರು, ದೇವರಿಗೆ ಜಾತಿ-ಧರ್ಮ ಲೇಪನ ಮಾಡಬೇಡಿ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಎಲ್ಲ ಧರ್ಮದವರಿಗೂ ಆಶೀರ್ವಾದ ನೀಡುವ ಶಕ್ತಿಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಇಂದು (ಬುಧವಾರ) ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಅವರು, ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ತಮ್ಮ ಹೇಳಿಕೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

RelatedPosts

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ADVERTISEMENT
ADVERTISEMENT

“ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವ ಜಾತಿ-ಧರ್ಮವಿಲ್ಲವೋ, ಅದೇ ರೀತಿ ದೇವರಿಗೂ ಧರ್ಮವಿಲ್ಲ. ಪ್ರಾರ್ಥನೆ ಯಾರೊಬ್ಬರ ಸ್ವತ್ತೂ ಅಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದ ವಿಶ್ವಕ್ಕೆ ಶಾಂತಿ ಸಾಧ್ಯ ಎಂದಿದ್ದಾರೆ,” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

“ಚಾಮುಂಡೇಶ್ವರಿಯು ಎಲ್ಲ ಧರ್ಮದವರಿಗೂ ಆಶೀರ್ವಾದ ಮಾಡುವ ದೇವರು. ರಾಜವಂಶಸ್ಥರು ಮತ್ತು ನಂತರದ ಸರ್ಕಾರಗಳು ಚಾಮುಂಡಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿಯಾಗಿದೆ. ನಾಡದೇವಿ, ನಾಡಧ್ವಜ, ರಾಷ್ಟ್ರಧ್ವಜ ಮತ್ತು ದೇವರಿಗೆ ಜಾತಿ, ಧರ್ಮ, ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ,” ಎಂದು ಡಿಸಿಎಂ ಡಿಕೆಶಿ ಸ್ಪಷ್ಟಪಡಿಸಿದರು.

ದೇವಸ್ಥಾನಕ್ಕೆ ಯಾರನ್ನೂ ತಡೆಯಲು ಆಗದು

“ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮ ಎಲ್ಲಿದೆ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಅವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ-ಬೇರೆ ಧರ್ಮಕ್ಕೆ ಸೇರಿರಬಹುದು, ಇಂತಹ ಮಕ್ಕಳ ಆಚರಣೆಯೂ ಬೇರೆ-ಬೇರೆ ಇರಬಹುದು.

ಬ್ಯಾರಿಗಳು ನಮಗಿಂತಲೂ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಿಸುವ ವಿಡಿಯೋ ನಾನು ನೋಡಿದ್ದೇನೆ. ಅವರೂ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ,” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದರು.

“ಮಹಾರಾಜರ ಆಳ್ವಿಕೆಯ ಕಾಲದಲ್ಲೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನಿಸಲಾಗುತ್ತಿತ್ತು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಚರ್ಚ್, ಮಸೀದಿ, ಜೈನ ಬಸದಿ, ಗುರುದ್ವಾರದಂತಹ ಸ್ಥಳಗಳಲ್ಲಿ ನಮ್ಮನ್ನು ಒಳಗೆ ಬಿಡುವುದಿಲ್ಲವೇ? ಈ ಹಿಂದೆ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಆದರೆ ಈಗ ಬಾನು ಮುಷ್ತಾಕ್ ಬೆಟ್ಟವನ್ನೇ ಹತ್ತಬಾರದು, ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಯದುವೀರ್‌ಗೆ ತಿರುಗೇಟು:

ಸಂಸದ ಯದುವೀರ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಯದುವೀರ್ ಈಗ ಬಿಜೆಪಿಯೊಂದಿಗೆ ಸೇರಿಕೊಂಡಿದ್ದಾರೆ. ಆ ಕಾರಣಕ್ಕೆ ಇತಿಹಾಸವನ್ನೇ ಮರೆತಿದ್ದಾರೆ. ನಾನೊಬ್ಬ ಹಿಂದೂ. ಚಾಮುಂಡಿ ತಾಯಿಗೆ ಎರಡು ಸಾವಿರ ಕಾಣಿಕೆ ಕೊಟ್ಟು, ನಾನು ಮತ್ತು ಸಿದ್ದರಾಮಯ್ಯನವರು ಎಲ್ಲ ತಾಯಂದಿರಿಗೂ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದೇವೆ. ಆ ತಾಯಿ ನಮಗೆ ಆಶೀರ್ವಾದ ಮಾಡಿದ್ದಾಳೆ. ಈಗ ಕೇವಲ ಹಿಂದೂಗಳಿಗೆ ಮಾತ್ರ ಹಣ ಕೊಡುತ್ತಿದ್ದೇವೆಯೇ? ಪಾರ್ಸಿ, ಸಿಖ್, ಮುಸ್ಲಿಂ, ಜೈನ, ಬೌದ್ಧರಿಗೆ ಹಣ ಕೊಡುತ್ತಿಲ್ಲವೇ?” ಎಂದು ಕೇಳಿದರು.

ಬಿಜೆಪಿಯ ಹಿಂದುತ್ವದ ಮೇಲಿನ ದಾಳಿ ಮತ್ತು ಬಾನು ಮುಷ್ತಾಕ್ ಆಯ್ಕೆಯ ಟೀಕೆಗೆ, “ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಬಿಜೆಪಿಯವರು ಎಲ್ಲಿ ಆಚರಣೆ ಮಾಡುತ್ತಾರೆ? ನಾನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ,” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದರು.

ಬಿಜೆಪಿ-ಜೆಡಿಎಸ್‌ನ ರಾಜಕೀಯ ಅಜೆಂಡಾ

ಬಿಜೆಪಿಯ ರಾಜಕೀಯ ಆರೋಪಗಳ ಬಗ್ಗೆ, “ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿಯವರು ಅಲ್ಪಸಂಖ್ಯಾತ ಇಲಾಖೆಯನ್ನೇ ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನೂ ನಾವು ಒಪ್ಪಿಕೊಳ್ಳಲೇಬೇಕು. ಅವರನ್ನು ದೇಶದಿಂದ ಓಡಿಸಲು ಆಗುತ್ತದೆಯೇ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ಜೆಡಿಎಸ್‌ನ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ, “ಜೆಡಿಎಸ್ ಯಾವತ್ತೂ ಫೇಕ್ ಕೆಲಸಗಳನ್ನೇ ಮಾಡುತ್ತದೆ. ನಾನು ಹೆದರಿಕೊಂಡು ರಣಹೇಡಿಯಂತೆ ಇದ್ದರೆ ಟೀಕೆ ಮಾಡಿಕೊಳ್ಳಲಿ. ಅವರ ದೊಡ್ಡ ನಾಯಕರಿಗೂ ನಾನು ಹೆದರುವವನಲ್ಲ. ಈ ಟ್ವೀಟ್‌ಗಳಿಗೆ ಈಗ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಮತ್ತು ಅಶೋಕ್ ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ,” ಎಂದು ತಿರುಗೇಟು ನೀಡಿದರು.

ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯ ಚಲೋ, ಧರ್ಮದ ಚಲೋ ಅಲ್ಲ,” ಎಂದು ಸ್ಪಷ್ಟಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಕೈಗೊಳ್ಳಲಿರುವ (23)

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

by ದಿಶಾ ಕೆ. ಎಸ್.
July 31, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version