ಹಾವೇರಿಯಲ್ಲಿ ಕಾಡಿನೊಳಗೆ ಚಿರತೆ ಶವ ಪತ್ತೆ; ಕಾದಾಟದಲ್ಲಿ ಸಾವು ಶಂಕೆ!

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (2)

ಹಾವೇರಿ ಆ.29: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಸಮೀಪ ಕಾಡಿನಲ್ಲಿ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 2.5 ವರ್ಷದ ಚಿರತೆ ಇದಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕವಾಗಿ ತಿಳಿಸಿದ್ದಾರೆ.

ಕಾಡಿನಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಅರಣ್ಯಾಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಸಾವಿನ ಕುರಿತು ಪರಿಶೀಲನೆ ನಡೆಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡು ಚಿರತೆಗಳ ನಡುವೆ ನಡೆದ ತೀವ್ರ ಕಾದಾಟದಲ್ಲಿ ಗಾಯಗೊಂಡು ಚಿರತೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸ್ಪಷ್ಟವಾಗಲಿದೆ.

ಚಿರತೆಯ ಮೃತದೇಹವನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದೇಹದ ಮೇಲಿರುವ ಗಾಯಗಳು ಹಾಗೂ ಇತರ ಅಂಶಗಳನ್ನು ಪರಿಶೀಲಿಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಈ ಘಟನೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಕಾಡಿನಲ್ಲಿ ಚಿರತೆಗಳ ನಡುವೆ ಕಾದಾಟ ನಡೆದಿರುವ ಸಾಧ್ಯತೆ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version