ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್: ತಪ್ಪಿದ ಭಾರೀ ಅನಾಹುತ

123 2025 04 22t155545.902

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೇ ಭಾರೀ ಅನಾಹುತವೊಂದು ತಪ್ಪಿದೆ.

ಅಥಣಿಯಿಂದ ಜಮಖಂಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (ನಂಬರ್: KA-23 F 6783) ಈ ಘಟನೆಗೆ ಸಿಲುಕಿದೆ. ಬಸ್‌ನಲ್ಲಿ ಏಳೆಂಟು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಬ್ರೇಕರ್ ದಾಟಿಸುವ ವೇಳೆ ಬಸ್‌ನ ಪಾಟಾ ಮುರಿದಿದ್ದು ಈ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ.

ಘಟನೆಯ ನಂತರ ಬಸ್‌ನ ಹಿಂಬದಿಯ ಗಾಜು ಒಡೆದು ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version