ಕೋವಿಡ್-19 ಹಗರಣ: ನ್ಯಾಯಮೂರ್ತಿ ಡಿ’ಕುನ್ಹಾ ಆಯೋಗದ ಅವಧಿ ಪುನಃ ವಿಸ್ತರಣೆ

ಕೋವಿಡ್-19 ಹಗರಣ: ನ್ಯಾ. ಡಿ. ಕುನ್ಹಾ ತನಿಖಾ ಆಯೋಗದ ಅವಧಿ ಮತ್ತೆ ವಿಸ್ತರಣೆ

Siddu stalin kcr (66)

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳ ಸಾವಿನ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಜೂನ್ 30, 2025 ರವರೆಗೆ ವಿಸ್ತರಿಸಿದೆ.

ಕೋವಿಡ್ ಸಂದರ್ಭದಲ್ಲಿ ಹಗರಣ ನಡೆದಿದೆ ಎನ್ನಲಾದ, ಹಗರಣ ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗ ಅವಧಿಯು ಮಾರ್ಚ್ 31, 2025 ರಂದು ಕೊನೆಗೊಂಡಿತ್ತು. ಆದರೆ ಇದೀಗ ಈ ವಿಚಾರಣಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ.

ಹೌದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದವರ ಪ್ರಕರಣ ಸಂಬಂಧ ಪರಿಶೀಲನೆ ನಡೆಯಲಿದ್ದು, ಈ ನಿಟ್ಟಿನಲ್ಲಿ ತನಿಖಾ ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಖರೀದಿಯಲ್ಲಿನ ಅಕ್ರಮಗಳು ಮತ್ತು ದುರುಪಯೋಗದಿಂದಾಗಿ ಸಂಭವಿಸಿದ ಸರಣಿ ಸಾವುಗಳ ತನಿಖೆಗಾಗಿ ರಚಿಸಲಾಗಿದ್ದ ಈ ಆಯೋಗವು ಏಪ್ರಿಲ್ 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಎರಡನೇ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

ಆಯೋಗವನ್ನು ಆಗಸ್ಟ್ 25, 2023 ರಂದು ರಚಿಸಲಾಗಿತ್ತು. ಪ್ರಕರಣ ಸಂಬಂಧ 3 ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ, ಮೊದಲ ಮಧ್ಯಂತರ ವರದಿಯನ್ನು ಆಗಸ್ಟ್ 31, 2024 ರಂದು ಸಲ್ಲಿಸಿತ್ತು. ಬಳಿಕ ಆಯೋಗದ ಅವಧಿಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಮೂರು ತಿಂಗಳಿಗೆ ಅವಧಿಯನ್ನು ವಿಸ್ತರಣೆ ಮಾಡಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version