ಸಿಎಂ ಸಿದ್ದರಾಮಯ್ಯ ಮೇಲೆ 500 ಕೋಟಿ ಕಿಕ್ ಬ್ಯಾಕ್ ಆರೋಪ

Siddu stalin kcr (52)

ಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಹೌದು ರಾಮಗಡ್ ಮಿನರಲ್ಸ್ ಸೇರಿದಂತೆ 8 ಗಣಿ ಗುತ್ತಿಗೆ ನವೀಕರಣದಲ್ಲಿ ಸಿಎಂ ಸಿದ್ದರಾಮಯ್ಯ 2015ರಲ್ಲಿ ಸಿಎಂ ಆಗಿದ್ದಾಗ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ಪತ್ರಬರೆದು, ಈ ಬಗ್ಗೆ ತನಿಖೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

2015ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 8 ಗಣಿಗಳ ಗುತ್ತಿಗೆ ನವೀಕರಣ ಮಾಡಿದ್ದರು. ಅಲ್ಲದೇ ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಹಲವು ವರ್ಷಗಳಿಂದ ಬಾಕಿ ಇದ್ದ ಲೈಸನ್ಸ್ ಕೂಡ ನವೀಕರಣ ಮಾಡಲು ಅನುಮತಿ ನೀಡಿದ್ದರು.

ಹೀಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡರವರು, ಈ ಬಗ್ಗೆ ತನಿಖೆಗೆ ನಿರ್ದೇಶಿಸಿ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧದ ವಿಚಾರಣೆಗೆ ಅನುಮತಿ ಕೋರುವ ಸಂಬಂಧ ದಾಖಲೆ ಸಲ್ಲಿಸಲು ರಾಜ್ಯಪಾಲರ ಭೇಟಿಗೆ ಅವಕಾಶ ನೀಡಬೇಕು ಎಂದು 2025 ರ ಮಾರ್ಚ್‌ 04 ರಂದು ರಾಜ್ಯಪಾಲರ ಸಚಿವಾಲಯಕ್ಕೆ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಈ ಸಂಬಂಧ ರಾಮಮೂರ್ತಿ ಗೌಡ ನೀಡಿದ್ದ ಮನವಿ ಪತ್ರ ಮತ್ತು ದಾಖಲೆಗಳನ್ನು ರಾಜ್ಯಪಾಲರು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ದೂರುದಾರ ರಾಮಮೂರ್ತಿ ಗೌಡ ಅವರೊಂದಿಗೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

 

 

Exit mobile version