• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 26, 2026 - 5:53 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 05 26T175224.359

ಭಾರತದ ಮೊದಲ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರಿನ ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ (ಕೆಐಎ) ಯಶಸ್ವಿಯಾಗಿ 18 ವರ್ಷಗಳನ್ನು ಪೂರೈಸಿದೆ. 2008ರಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಆರಂಭವಾದ ಈ ವಿಮಾನ ನಿಲ್ದಾಣ, ಇಂದು ಬೆಂಗಳೂರನ್ನು ಜಗತ್ತಿನೊಂದಿಗೆ ಬೆಸೆಯುವ ಪ್ರಮುಖ ಹೆಬ್ಬಾಗಿಲಾಗಿದೆ. ಈ ಐತಿಹಾಸಿಕ ಮೈಲಿಗಲ್ಲನ್ನು ಸ್ಮರಿಸುವ ಉದ್ದೇಶದಿಂದ ‘ಭಾರತೀಯ ಅಂಚೆ ಇಲಾಖೆ’ ವಿಶಿಷ್ಟವಾದ ಗೌರವವೊಂದನ್ನು ಸಮರ್ಪಿಸಿದೆ.

ವಿಮಾನ ನಿಲ್ದಾಣದ 18ನೇ ವಾರ್ಷಿಕೋತ್ಸವದ ಅಂಗವಾಗಿ ಅಂಚೆ ಇಲಾಖೆಯು ಚಿತ್ರವನ್ನು ಒಳಗೊಂಡ ಶಾಶ್ವತ ಅಂಚೆ ಮೊಹರನ್ನು (Permanent Pictorial Cancellation Seal) ಬಿಡುಗಡೆ ಮಾಡಿದ್ದು, ಇದರ ಜೊತೆಗೆ ‘ವಿಶೇಷ ಅಂಚೆ ಲಕೋಟೆ’ ಮತ್ತು ‘ಸ್ಮರಣಾರ್ಥ ಅಂಚೆ ಕಾರ್ಡ್‌ಗಳನ್ನು’ ಬಿಡುಗಡೆಗೊಳಿಸಿದೆ.

RelatedPosts

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

ADVERTISEMENT
ADVERTISEMENT

ಏನಿದರ ವಿಶೇಷತೆ?

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಬಳಸಲಾಗುವ ಈ ಹೊಸ ಅಂಚೆ ಮೊಹರಿನಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಚಿತ್ರದೊಂದಿಗೆ ವಿಮಾನ ನಿಲ್ದಾಣದ ಭವ್ಯ ನೋಟವನ್ನು ಆಕರ್ಷಕವಾಗಿ ವಿನ್ಯಾಸಗೊಳಿಸಲಾಗಿದೆ. ಇದು ಬೆಂಗಳೂರಿನ ಶ್ರೀಮಂತ ಇತಿಹಾಸ ಮತ್ತು ಆಧುನಿಕ ತಂತ್ರಜ್ಞಾನದ ನಡುವಿನ ಅವಿನಾಭಾವ ಸಂಬಂಧವನ್ನು ಬಿಂಬಿಸುತ್ತದೆ.

ವಿಮಾನ ನಿಲ್ದಾಣದ ಪ್ರಸಿದ್ಧ ‘ಫೀಲ್ಸ್ ಲೈಕ್ ಬಿಎಲ್‌ಆರ್’ ಅಭಿಯಾನಕ್ಕೆ ಪೂರಕವಾಗಿ ಇದನ್ನು ಹೊರತರಲಾಗಿದೆ. ಈ ವಿಶೇಷ ಲಕೋಟೆ ಮತ್ತು ಅಂಚೆ ಕಾರ್ಡ್‌ಗಳು, ಪ್ರಯಾಣಿಕರಿಗೆ ಮತ್ತು ಅಂಚೆ ಚೀಟಿ ಸಂಗ್ರಹಕಾರರಿಗೆ ಬೆಂಗಳೂರಿನ ಹೆಮ್ಮೆಯನ್ನು ನೆನಪಿಸುವ ಅತ್ಯಮೂಲ್ಯ ಉಡುಗೊರೆಯಾಗಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್, “ವಿಮಾನ ನಿಲ್ದಾಣ 18 ವರ್ಷ ಪೂರೈಸುತ್ತಿರುವ ಈ ಕ್ಷಣ, ನಮ್ಮ ಹಾಗೂ ನಗರದ ಬೆಳವಣಿಗೆಯ ಪಯಣವನ್ನು ನೆನಪಿಸಿಕೊಳ್ಳುವ ಮಧುರ ಕ್ಷಣವಾಗಿದೆ. ಲಕ್ಷಾಂತರ ಪ್ರಯಾಣಿಕರಿಗೆ ಈ ಏರ್‌ಪೋರ್ಟ್ ಬೆಂಗಳೂರಿನ ಮೊದಲ ಅನುಭವವನ್ನು ನೀಡುತ್ತದೆ. ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಈ ಮೊಹರು ನಮ್ಮ ಬೆಳವಣಿಗೆಯನ್ನು ಅರ್ಥಪೂರ್ಣವಾಗಿ ಸ್ಮರಿಸುತ್ತದೆ. ಭವಿಷ್ಯದಲ್ಲೂ ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ,” ಎಂದು ತಿಳಿಸಿದರು.

ಭಾರತೀಯ ಅಂಚೆ ಇಲಾಖೆಯ ಬೆಂಗಳೂರು ಕೇಂದ್ರ ವಲಯದ ಅಂಚೆ ಸೇವೆಗಳ ನಿರ್ದೇಶಕಿ ವಿ. ತಾರಾ ಮಾತನಾಡಿ, “ಕೆಂಪೇಗೌಡ ವಿಮಾನ ನಿಲ್ದಾಣವು ಈ ಭಾಗದ ಅತಿದೊಡ್ಡ ಪ್ರವೇಶ ದ್ವಾರವಾಗಿದೆ. ನಗರದ ಪರಂಪರೆ ಹಾಗೂ ಜಾಗತಿಕ ಗುರುತನ್ನು ಪ್ರತಿಬಿಂಬಿಸುವ ಈ ಸಂಸ್ಥೆಯನ್ನು ಅಂಚೆ ಇಲಾಖೆಯ ಮೂಲಕ ಗೌರವಿಸುತ್ತಿರುವುದು ನಮಗೆ ಸಂತಸ ತಂದಿದೆ. ಈ ವಿಶೇಷ ಲಕೋಟೆ ಮತ್ತು ಕಾರ್ಡ್‌ಗಳು ಪ್ರತಿಯೊಬ್ಬರಿಗೂ ವಿಶೇಷ ನೆನಪಾಗಿ ಉಳಿಯಲಿವೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲಿ ಲಭ್ಯ?

ಸಾಂಸ್ಕೃತಿಕ, ಐತಿಹಾಸಿಕ ಅಥವಾ ಪ್ರವಾಸಿ ಪ್ರಾಮುಖ್ಯತೆಯ ಸ್ಥಳಗಳ ಸ್ಮರಣಾರ್ಥವಾಗಿ ಅಂಚೆ ಇಲಾಖೆ ಇಂತಹ ವಿಶೇಷ ಮೊಹರುಗಳನ್ನು ನೀಡುತ್ತದೆ. ಮೇ 26, 2026 ರಿಂದ ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಈ ಮೊಹರು ಅಧಿಕೃತವಾಗಿ ಲಭ್ಯವಿರಲಿದೆ.

ಇನ್ನು ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಾರ್ಡ್‌ಗಳು ‘ಬೆಂಗಳೂರು ಜಿಪಿಒ’ನ ಫಿಲಾಟೆಲಿಕ್ ಬ್ಯೂರೋ ಸೇರಿದಂತೆ ಕರ್ನಾಟಕದ ಎಲ್ಲಾ ಪ್ರಮುಖ ಫಿಲಾಟೆಲಿಕ್ ಬ್ಯೂರೋಗಳಲ್ಲಿ ಖರೀದಿಗೆ ದೊರೆಯಲಿವೆ.

ದಕ್ಷಿಣ ಭಾರತದ ಅತ್ಯಂತ ಜನನಿಬಿಡ ಹಾಗೂ ದೇಶದ 3ನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿರುವ ಬೆಂಗಳೂರು ಏರ್‌ಪೋರ್ಟ್, 2025-26ರ ಆರ್ಥಿಕ ವರ್ಷದಲ್ಲಿ 4.44 ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ಒದಗಿಸಿ ‘ಎಸಿಐ ಬೃಹತ್‌ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜೊತೆಗೆ 2026ರ ಏಪ್ರಿಲ್‌ನಲ್ಲಿ, ವಿಮಾನ ನಿಲ್ದಾಣದ ಆರಂಭದಿಂದ ಈವರೆಗೆ ಒಟ್ಟು 40 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿದ ಮೈಲಿಗಲ್ಲನ್ನೂ ತಲುಪಿದೆ. ಬೇಗನೆ ಕೊಳೆಯುವ ವಸ್ತುಗಳ ಸರಕು ಸಾಗಣೆಯಲ್ಲಿ ಸತತ ಐದನೇ ವರ್ಷವೂ ದೇಶದಲ್ಲೇ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T183242.893

ಗಲ್ಫ್ ಇನ್ನು ಮುಂದೆ ಅಮೆರಿಕಕ್ಕೆ ಸುರಕ್ಷಿತ ನೆಲೆಯಲ್ಲ: ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

by ಶ್ರೀದೇವಿ ಬಿ. ವೈ
May 26, 2026 - 6:34 pm
0

BeFunky collage 2026 05 26T175956.626

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

by ಶ್ರೀದೇವಿ ಬಿ. ವೈ
May 26, 2026 - 6:00 pm
0

BeFunky collage 2026 05 26T175224.359

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

by ಶ್ರೀದೇವಿ ಬಿ. ವೈ
May 26, 2026 - 5:53 pm
0

BeFunky collage 2026 05 26T181356.729

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (15)
    ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!
    May 26, 2026 | 0
  • ನಿಶ್ಚಿತಾರ್ಥ (13)
    ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ
    May 26, 2026 | 0
  • ನಿಶ್ಚಿತಾರ್ಥ (8)
    ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ
    May 26, 2026 | 0
  • ನಿಶ್ಚಿತಾರ್ಥ (6)
    ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version