ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ವೈ.ಎನ್.ಪುರದಿಂದ ಹಾಸನಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕ-ನಿರ್ವಾಹಕ ನಾಗಪ್ಪ (55) ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ.
ಹಾಸನ ಡಿಪೋ-2ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗಪ್ಪ, ಇಂದು ಬೆಳಗ್ಗೆ ತಮ್ಮ ಕೆಲಸಕ್ಕೆ ಆಗಮಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರಿಗೆ ಒಮ್ಮೆಲೇ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಶವವನ್ನು ಆಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಈ ವರ್ಷದಲ್ಲಿ ಹೃದಯಸ್ಥಂಭನಕ್ಕೆ ಬಲಿಯಾದ ಆರನೇ ವ್ಯಕ್ತಿಯಾಗಿ ನಾಗಪ್ಪ ಗುರುತಿಸಲ್ಪಟ್ಟಿದ್ದಾರೆ. ಈ ಘಟನೆಯಿಂದ ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ನಾಗಪ್ಪ ಅವರ ಕುಟುಂಬದಲ್ಲಿ ಆಘಾತ ಮೂಡಿದೆ.