ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಮಂಡ್ಯ ಹೆಚ್ಚುವರಿ ಎಸ್‌ಪಿ ಸ್ಥಾನಕ್ಕೆ ನವೀನ್ ಕುಮಾರ್ ಆಯ್ಕೆ!

Your paragraph text (16)

ಮಂಡ್ಯ: ಮದ್ದೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ತಿಮ್ಮಯ್ಯ ಅವರಿಗೆ ಯಾವುದೇ ಹೊಸ ಸ್ಥಾನವನ್ನು ತೋರಿಸದೆ, ಡಿಜಿಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ವರ್ಗಾವಣೆಯು ಮದ್ದೂರಿನ ಗಲಭೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚೆಗೆ ಕಾರಣವಾಗಿದೆ. ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Exit mobile version