ನಟ ಜಗ್ಗೇಶ್ ಅವರ ಸಿನಿಮಾದಲ್ಲಿ ‘ಬೌಬೌ ಬಿರಿಯಾನಿ’ ಕೇವಲ 20 ರೂಪಾಯಿಗೆ ಸಿಗುವ ದೃಶ್ಯವನ್ನು ನೋಡಿ ಎಲ್ಲರೂ ನಕ್ಕಿದ್ದೇವೆ. ಆದರೆ, ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಇದೇ ರೀತಿಯ ಘಟನೆಯೊಂದು ನಿಜವಾಗಿಯೇ ನಡೆದಿದೆ. ಮದೀನಾ ಹೋಟೆಲ್ ಮಾಲೀಕ ಆಜಾದ್ ಎಂಬಾತನ ವಿರುದ್ಧ ನಾಯಿ ಮಾಂಸವನ್ನು ಬಿರಿಯಾನಿಗೆ ಬೆರೆಸಿ ಗ್ರಾಹಕರಿಗೆ ಬಡಿಸಿದ ಆರೋಪ ಕೇಳಿಬಂದಿದ್ದು, ಆಕ್ರೋಶಗೊಂಡ ಜನರು ಅವನನ್ನು ಥಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎಂಬ ಚಿಕ್ಕ ಹೋಟೆಲ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈ ಹೋಟೆಲ್ನಲ್ಲಿ ನಾನ್-ವೆಜ್ ಅಡುಗೆಯಲ್ಲಿ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ತಿಂದ ಬಿರಿಯಾನಿಯಲ್ಲಿ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ.
ಹೋಟೆಲ್ ಮಾಲೀಕ ಆಜಾದ್ ತನ್ನ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸಿ, ಗ್ರಾಹಕರಿಗೆ ಗೊತ್ತಿಲ್ಲದಂತೆ ಬಡಿಸುತ್ತಿದ್ದ ಎನ್ನಲಾಗಿದೆ. ಕೆಲವು ಗ್ರಾಹಕರು ಬಿರಿಯಾನಿಯ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು, ಶಂಕೆ ವ್ಯಕ್ತಪಡಿಸಿದ್ದಾರೆ. ಇಂದು ನಾಯಿ ಮಾಂಸದ ಸಾಕ್ಷಿಯೊಂದಿಗೆ ಆರೋಪಿ ಆಜಾದ್ ಗ್ರಾಹಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದರಿಂದ ಕುಪಿತಗೊಂಡ ಜನರು ಆತನಿಗೆ ಥಳಿಸಿದ್ದಾರೆ.
ಈ ಘಟನೆಯ ಸುದ್ದಿ ತಿಳಿದು ಪಾಂಡವಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆರೋಪಿ ಆಜಾದ್ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಈಗ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯು ಸ್ಥಳೀಯರಿಗೆ ಆಘಾತವನ್ನುಂಟು ಮಾಡಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಪೊಲೀಸ್ ತನಿಖೆಯಿಂದ ಈ ಆರೋಪದ ಸತ್ಯಾಸತ್ಯತೆ ಶೀಘ್ರದಲ್ಲಿ ಬಹಿರಂಗವಾಗಲಿದೆ.