ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಗುಡ್ಡ ಕುಸಿತಕ್ಕೆ ಬಾಲಕ ಸೇರಿ ಇಬ್ಬರ ಸಾವು, ಮುಂದುವರೆದ ಶೋಧ!

ಕಾಂಪೌಂಡ್ ಗೋಡೆ ಕುಸಿದು ಬಾಲಕಿ ನಯೀಮ ಸಾವು

Befunky collage 2025 05 30t122413.230

ದಕ್ಷಿಣ ಕನ್ನಡ: ಮಂಗಳೂರಿನ ದೇರಳಕಟ್ಟೆ ಸಮೀಪದ ಕಾನಕೆರೆ ಮತ್ತು ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ಮನೆಗಳ ಮೇಲೆ ಬಿದ್ದ ಪರಿಣಾಮ, ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ದಾರುಣ ಇಂದು ನಡೆದಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಈ ಅವಘಡ ಸಂಭವಿಸಿದೆ.

ಮೃತರು ಬಾಲಕ ಆರ್ಯನ್(2.5) ಮತ್ತು ಪ್ರೇಮ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೊಂಟೆಪದವು ಕೋಡಿಯಲ್ಲಿ ಕಾಂತಪ್ಪ ಪೂಜಾರಿ ಅವರ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬದ ಐವರು ಸದಸ್ಯರು ಅವಶೇಷಗಳಡಿ ಸಿಲುಕಿದ್ದರು. ಈ ಪೈಕಿ ಪ್ರೇಮ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಿಸಲಾಗಿದೆ. ಆದರೆ, ಅಶ್ವಿನಿ (31) ಮತ್ತು ಆರುಶ್ (1) ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ. ಅಶ್ವಿನಿ ಮತ್ತು ಒಂದು ಮಗು ಜೀವಂತವಾಗಿದ್ದು, ಆಕ್ಸಿಜನ್ ವ್ಯವಸ್ಥೆಯ ಮೂಲಕ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಆದರೆ, ಒಂದು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ತಾಯಿಯ ತೋಳನ್ನು ಬಿಗಿದಪ್ಪಿಕೊಂಡಿರುವ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನಕಲಕುವಂತಿದೆ.

ADVERTISEMENT
ADVERTISEMENT

ಕಾನಕೆರೆಯಲ್ಲಿ ನೌಶಾದ್ ಎಂಬವರ ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದು, ಮನೆಯ ಮೇಲೆ ಮಣ್ಣು ಬಿದ್ದಿದೆ. ಈ ವೇಳೆ ಕಿಟಕಿ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕಿ ನಯೀಮ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಳು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳೀಯ ಆಡಳಿತವು ಸಿಲುಕಿದವರನ್ನು ರಕ್ಷಿಸಲು ತೀವ್ರ ಪ್ರಯತ್ನ ನಡೆಸುತ್ತಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಜಲಾವೃತ, ಭೂಕುಸಿತ, ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಈ ಘಟನೆ ದಕ್ಷಿಣ ಕನ್ನಡದಲ್ಲಿ ಆತಂಕ ಸೃಷ್ಟಿಸಿದ್ದು, ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿವೆ. ಜನರಿಗೆ ಎಚ್ಚರಿಕೆಯಿಂದಿರಲು ಮತ್ತು ಆಡಳಿತದ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ.

Exit mobile version