ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸಾವು

ಮೈಸೂರಿನಲ್ಲಿ ಶಾಲಾ ವಾಹನ ಪಲ್ಟಿ: 16 ಮಕ್ಕಳಿಗೆ ಗಂಭೀರ ಗಾಯ

Add a heading (2)

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲಾ NSUI ಮುಖಂಡ ಓಂ ಶ್ರೀ (24, ಕೊಂಚಾಡಿ) ಮತ್ತು ಕದ್ರಿ ನಿವಾಸಿ ಅಮನ್ ರಾವ್ (23, ಮಲ್ಲಿಕಟ್ಟೆ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲಪಾಡಿಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್ ಕಾರು ಚಾಲಕನ ಅತಿಯಾದ ವೇಗದಿಂದಾಗಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪುಡಿಪುಡಿಯಾಗಿದೆ.

ಕಾರಿನಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು. ಈ ದುರ್ಘಟನೆಯಲ್ಲಿ ವಂಶಿ ಮತ್ತು ಆಶಿಕ್ ಗಂಭೀರವಾಗಿ ಗಾಯಗೊಂಡಿದ್ದು, ಇವರಿಬ್ಬರಿಗೂ ಸ್ಥಳೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಇಟಲಿ ಮೂಲದ ಜೆರ್ರಿ ಎಂಬ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT
ADVERTISEMENT

ಮೃತ ಓಂ ಶ್ರೀ ಮತ್ತು ಅಮನ್ ರಾವ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಓಂ ಶ್ರೀ ದಕ್ಷಿಣ ಕನ್ನಡ ಜಿಲ್ಲಾ NSUI ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ದುರಂತವು ಸ್ಥಳೀಯ ಕಾಂಗ್ರೆಸ್‌ ಘಟಕದಲ್ಲಿ ಆಘಾತ ಮೂಡಿಸಿದೆ.

ಮೈಸೂರಿನಲ್ಲಿ ಶಾಲಾ ವಾಹನ ಪಲ್ಟಿ: 16 ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಕಂಪಲಾಪುರದ ನೊಬೆಲ್ ಶಾಲೆಗೆ ಸೇರಿದ ಶಾಲಾ ವಾಹನವೊಂದು ಟೈಯರ್ ಪಂಚರ್ ಆಗಿ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ವಾಹನದಲ್ಲಿ ಸುಮಾರು 16 ಮಕ್ಕಳಿದ್ದರು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಹುಣಸೂರು ಮತ್ತು ಮೈಸೂರಿನ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.

Exit mobile version