• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 2, 2025 - 4:16 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Film 2025 04 02t160944.129

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

RelatedPosts

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ​, ಪ್ರಯಾಣಿಕರಿಗೆ ಗಂಭೀರ ಗಾಯ

ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಸಮಾಜಕಲ್ಯಾಣ ಇಲಾಖೆ ಅಧಿಕಾರಿ

ಮಾರ್ಚ್ 22 ರಿಂದ 25ರವರೆಗೆ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಕಡಿತ, ಪೂರ್ಣ ವಿವರ ಇಲ್ಲಿದೆ!

ADVERTISEMENT
ADVERTISEMENT

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ
ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು
ಎಂದಿದ್ದಾರೆ.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ ರೂ.ಗಳನ್ನು ಸರಕಾರಕ್ಕೆ ಕೊಡಲಾಗಿತ್ತು. ಹಿಂದೆ ಸಂಸ್ಥೆಯು ಲಾಭಾಂಶ ಕೊಡುವ ಸರಕಾರಿ ಉದ್ದಿಮೆಗಳ ಪೈಕಿ 21ನೇ ಸ್ಥಾನದಲ್ಲಿತ್ತು. ಈಗ 3ನೇ ಸ್ಥಾನದಲ್ಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.‌ ಕಳೆದ ಸಾಲಿನಲ್ಲಿ ರಫ್ತು ವಹಿವಾಟಿನ ಮೂಲಕವೂ ಕೆಎಸ್ಡಿಎಲ್ 23.2 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ ಎಂದು ಸಚಿವ ಪಾಟೀಲ ವಿವರಿಸಿದ್ದಾರೆ.

ಸಂಸ್ಥೆಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ 19 ಉತ್ಪನ್ನಗಳನ್ನು ಒಳಗೊಂಡಿದೆ. ಇದರಲ್ಲಿ ಮೈಸೋಪು, ಹ್ಯಾಂಡ್ ವಾಶ್, ಶವರ್ ಜೆಲ್, ಕುಡಿಯುವ ನೀರು, ಅಗರಬತ್ತಿ ಮುಂತಾದ ಉತ್ಕೃಷ್ಟ ಉತ್ಪನ್ನಗಳನ್ನು ಹೊಂದಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ದಕ್ಷ ಉತ್ಪಾದನಾ ವಿಧಾನದ ಮೂಲಕ ಲಾಭವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯು ಈಗ ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಅಳವಡಿಸಿಕೊಂಡಿದೆ. ಸಂಸ್ಥೆಯ ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್, ದೆಹಲಿ, ಛತ್ತೀಸಗಢ ಮತ್ತು ಕೋಲ್ಕತಾ ಹಾಗೂ ಒಡಿಶಾ ಶಾಖೆಗಳಲ್ಲಿ ಕೂಡ ವಹಿವಾಟು ಹೆಚ್ಚಳ ಕಂಡಿದೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯಲ್ಲಿ ಈಗ ಮೂರು ಪಾಳಿಗಳ ಕೆಲಸದ ವ್ಯವಸ್ಥೆ ಇದೆ. ವಿಜಯಪುರದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಘಟಕವನ್ನು ತೆರೆಯಲಾಗುವುದು.‌ ಇದಕ್ಕೆ 50 ಎಕರೆ ಜಾಗವನ್ನು ಕೆಐಎಡಿಬಿ ಹಂಚಿಕೆ ಮಾಡಿದೆ. 2025-26ರಲ್ಲಿ ಸಂಸ್ಥೆಯು 1,819 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಲಾಭದ ಪ್ರಮಾಣ ಏರುಮುಖವಾಗಿದೆ. ಪಾರದರ್ಶಕತೆ, ದಕ್ಷತೆ, ಮಾರುಕಟ್ಟೆ ವಿಸ್ತರಣೆ ಮತ್ತು ಗುಣಮಟ್ಟ ಈ‌ ‌ನಾಲ್ಕು ಅಂಶಗಳಿಗೆ ಆದ್ಯತೆ ನೀಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಸಂಸ್ಥೆಯ ಸಾಬೂನು ಘಟಕವು ಕಳೆದ ಸಾಲಿನಲ್ಲಿ 36,268 ಟನ್, ಡಿಟರ್ಜೆಂಟ್ ಘಟಕವು 5,788 ಟನ್ ಮತ್ತು ಸೌಂದರ್ಯ ವರ್ಧಕಗಳ ಘಟಕವು 1,087 ಟನ್ ಉತ್ಪನ್ನಗಳನ್ನು ತಯಾರಿಸಿದೆ ಎಂದು ಅವರು ಹೇಳಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 21T142330.610

ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?

by ಶ್ರೀದೇವಿ ಬಿ. ವೈ
March 21, 2026 - 2:25 pm
0

BeFunky collage 2026 03 21T140108.543

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

by ಶ್ರೀದೇವಿ ಬಿ. ವೈ
March 21, 2026 - 2:03 pm
0

ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

by ಶ್ರೀದೇವಿ ಬಿ. ವೈ
March 21, 2026 - 1:26 pm
0

ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಹತ್ಯೆ

ಗೋರಕ್ಷಕ ಚಂದ್ರಶೇಖರ್ ಹತ್ಯೆಯಿಂದ ಉತ್ತರಪ್ರದೇಶದ ಮಥುರಾದಲ್ಲಿ ಕಿಚ್ಚು

by ಶ್ರೀದೇವಿ ಬಿ. ವೈ
March 21, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!
    ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!
    March 21, 2026 | 0
  • BeFunky collage 2026 03 21T110251.694
    ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ​, ಪ್ರಯಾಣಿಕರಿಗೆ ಗಂಭೀರ ಗಾಯ
    March 21, 2026 | 0
  • ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಆತ್ಮಹತ್ಯೆ
    ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಸಮಾಜಕಲ್ಯಾಣ ಇಲಾಖೆ ಅಧಿಕಾರಿ
    March 21, 2026 | 0
  • bescom
    ಮಾರ್ಚ್ 22 ರಿಂದ 25ರವರೆಗೆ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಕಡಿತ, ಪೂರ್ಣ ವಿವರ ಇಲ್ಲಿದೆ!
    March 21, 2026 | 0
  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version