ಪಹಲ್ಗಾಮ್ ಉಗ್ರರ ದಾಳಿ: ಜಮೀರ್ ಅಹಮದ್ ಖಾನ್ ಖಂಡನೆ

123 2025 04 23t124908.709

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ವಾಗಿ ಖಂಡಿಸಿದ್ದಾರೆ.

ಈ ದಾಳಿಯಲ್ಲಿ‌ ಇಬ್ಬರು ಕನ್ನಡಿಗರು ಸೇರಿದಂತೆ 28 ಮಂದಿ ಬಲಿಯಾಗಿರುವುದು ಅತೀವ ನೋವು ತಂದಿದೆ.
ಪಹಲ್ಗಾಮ್‌ ಉಗ್ರರ ದಾಳಿ ಈ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ 370 ವಿಧಿ ರದ್ದು ಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಕೃತ್ಯದಲ್ಲಿ ಬಲಿಯಾದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ: ಸಚಿವರು ಮತ್ತು ಶಾಸಕರ ತೀವ್ರ ಖಂಡನೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ ಅನೇಕರು ಬಲಿಯಾಗಿರುವ ಘಟನೆಯನ್ನು ಮೈಸೂರಿನ ಸಚಿವರು ಮತ್ತು ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಕರ್ನಾಟಕದವರು ಮೃತಪಟ್ಟಿದ್ದು, ಇದು ಅತ್ಯಂತ ಹೀನಾಯ ಕೃತ್ಯವೆಂದು ಗುರುತಿಸಲಾಗಿದೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ

ಕಾಶ್ಮೀರದಲ್ಲಿ 70 ವರ್ಷಗಳಿಂದ ಭಯೋತ್ಪಾದನೆಯ ಸಮಸ್ಯೆಯಿದ್ದು, ಈ ದಾಳಿಯಲ್ಲಿ ಹಿಂದೂಗಳನ್ನೇ ಗುರಿಯಾಗಿಸಿ ಕೊಲೆಗೈಯಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಸೂಕ್ತ ತನಿಖೆಯಾಗಬೇಕು ಮತ್ತು ದಾಳಿಯ ನಿಖರ ಕಾರಣವನ್ನು ಕಂಡುಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಟ್ವೀಟ್‌

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ ಅನೇಕರು ಬಲಿಯಾಗಿರುವುದು ಅತೀವ ನೋವು ತಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಘಟನೆಯನ್ನು ಹತ್ತಿಕ್ಕುವ ಕೆಲಸ ಮಾಡಬೇಕು ಎಂದಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟುವುದು ಮುಖ್ಯವೆಂದು ಒತ್ತಿ ಹೇಳಿದ್ದಾರೆ.

ಶಾಸಕ ಜಿ.ಟಿ. ದೇವೇಗೌಡ ಅವರ ಹೇಳಿಕೆ

ಶಾಸಕ ಜಿ.ಟಿ. ದೇವೇಗೌಡ ಅವರು, ಈ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಎಂಬ ವ್ಯಕ್ತಿಯನ್ನು ಅವರ ಪತ್ನಿ ಮತ್ತು ಪುತ್ರರ ಎದುರೇ ಗುಂಡಿಟ್ಟು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ. ಹಿಂದೂಗಳನ್ನು ಗುರಿಯಾಗಿಸಿದ ಈ ದಾಳಿಯನ್ನು ಇಡೀ ಪ್ರಪಂಚವೇ ಖಂಡಿಸುತ್ತದೆ ಎಂದು ಹೇಳಿದ ಅವರು, ಎಲ್ಲ ಕನ್ನಡಿಗರು ಈ ಕೃತ್ಯವನ್ನು ಒಗ್ಗಟ್ಟಾಗಿ ವಿರೋಧಿಸುತ್ತಾರೆ ಎಂದಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ದಾಳಿಗೆ ತಕ್ಕ ಉತ್ತರ ನೀಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ದೇವೇಗೌಡ, ಈಗಾಗಲೇ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವುದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಭಾರತೀಯ ಸೇನೆಗೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವಿರಲಿ ಎಂದು ಹಾರೈಸಿದ ಅವರು, ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ತನಿಖೆಗೆ ಒತ್ತಾಯ

ಈ ದಾಳಿಯ ಬಗ್ಗೆ ಸೂಕ್ತ ತನಿಖೆ ನಡೆಸಿ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟಿಬದ್ಧವಾಗಿರಬೇಕು ಎಂದು ಸಚಿವರು ಮತ್ತು ಶಾಸಕರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

    Exit mobile version