ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ಮಾಲಿಕನಿಗೆ ಮಚ್ಚಿನಿಂದ ಹಲ್ಲೆ

Film 2025 04 22t111401.489

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಪೀಣ್ಯಾ ಸುಪ್ರಭಾತನಗರದಲ್ಲಿ ಘಟನೆ. ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಲ್ಲಿ ಬರುವ ಸುಪ್ರಭಾತನಗರದಲ್ಲಿ ಹಣದ ವಿಚಾರವಾಗಿ ಮಚ್ಚಿನಿಂದ ಹಲ್ಲೆ ನಡೆದಿದೆ. ಸಿದ್ದೇಶ್ವರ ಪ್ರಾವಿಜನ್ ಸ್ಟೋರ್‌ನ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿ ಹಣ ಕೇಳಿದ್ದಕ್ಕೆ ಮೂರು ಜನರ ಗುಂಪಿನಿಂದ ಮಚ್ಚಿಯಿಂದ ಹಲ್ಲೆಗೆ ಮುಂದಾಗಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ADVERTISEMENT
ADVERTISEMENT

ಮಾಲಿಕ ಸಿದ್ದಲಿಂಗಯ್ಯ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿಶ್ವನಾಥ್ ಸೇರಿದಂತೆ ಮೊವರ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಆರೋಪಿ ವಿಶ್ವನಾಥ್ ಎಂಬಾತ, ಕಳೆದ ಆರು ತಿಂಗಳುಗಳಿಂದ ಅಂಗಡಿಗೆ ಸುಮಾರು ₹1,500 ಬಾಕಿ ಇಟ್ಟುಕೊಂಡಿದ್ದ. ಈ ಮೊದಲು ಬಾಕಿ ಹಣ ಪಾವತಿಸದಿದ್ದರೂ, ಇದೀಗ ಮತ್ತೆ ಅಂಗಡಿಗೆ ಬಂದು ಹೊಸದಾಗಿ ಸಾಲ ಕೇಳಿದ್ದ. ಅಂಗಡಿಯ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿಯ ಬಗ್ಗೆ ಕೇಳಿದಾಗ, ವಿಶ್ವನಾಥ್ ತನ್ನ ಜತೆಗೆ ಕಾರಿನಲ್ಲಿ ಇದ್ದ ಇಬ್ಬರೊಂದಿಗೆ ಇಳಿದು, ಮಾಲಿಕರ ಮೇಲೆ ಮಚ್ಚಿಯಿಂದ ಆಕ್ರೋಶದಿಂದ ದಾಳಿ ನಡೆಸಿದ್ದಾನೆ.

“ಮಗನೇ ನಮ್ಮ ಹುಡುಗನ ಹತ್ತಿರನೇ ದುಡ್ಡು ಕೇಳುತ್ತಿಯಾ?”

ಈ ಶಬ್ದಗಳಿಂದ ಆರೋಪಿ ಹಾಗೂ ಸಹಚರರು ಆಕ್ರೋಶ ವ್ಯಕ್ತಪಡಿಸಿ, ಅಂಗಡಿಗೆ ನುಗ್ಗಿ ಸಿದ್ದಲಿಂಗಯ್ಯ ಅವರ ಕಾಲರ್ ಹಿಡಿದು ಅಂಗಡಿಯ ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆ.

ಸ್ಥಳೀಯರು ಧಾವಿಸುತ್ತಿದ್ದಂತೆ, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದ್ರು ಎಂದು ಹೇಳಲಾಗಿದೆ.

ಪೋಲೀಸರ ತನಿಖೆ ಆರಂಭ:

ಘಟನೆಯ ಬಗ್ಗೆ ಪೀಣ್ಯಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೀಣ್ಯಾ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳು ಶೀಘ್ರವೇ ಬಂಧನಕ್ಕೆ ಒಳಗಾಗಲಿದ್ದಾರೆ ಎಂಬ ವಿಶ್ವಾಸವನ್ನು ಪೊಲೀಸರು ಮಾಲಿಕ ಸಿದ್ದಲಿಂಗಯ್ಯಗೆ ತಿಳಿಸಿದ್ದಾರೆ.

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
Exit mobile version