ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

Befunky collage 2025 06 04t122513.029

ಬೆಂಗಳೂರು: ಐಪಿಎಲ್ 2025 ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಚೊಚ್ಚಲ ಟ್ರೋಫಿಯನ್ನು ಗೆದ್ದ ಸಂಭ್ರಮದಲ್ಲಿ, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಆರ್‌ಸಿಬಿ ಅಭಿಮಾನಿಯೊಬ್ಬರ ಮೇಲೆ ದುಷ್ಕರ್ಮಿಗಳು ಚಾಕು ಇರಿದ ಆಘಾತಕಾರಿ ಘಟನೆ ನಡೆದಿದೆ.

ತಡರಾತ್ರಿ 12 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ, ಆರ್‌ಸಿಬಿಯ ಐತಿಹಾಸಿಕ ಗೆಲುವಿನ ಸಂತೋಷದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಯುವಕನೊಬ್ಬ, ಸ್ನೇಹಿತರೊಂದಿಗೆ ಬಾರ್‌ಗೆ ತೆರಳುವಾಗ ದುಷ್ಕರ್ಮಿಗಳ ಗುಂಪಿನಿಂದ ದಾಳಿಗೊಳಗಾದ. ದುಷ್ಕರ್ಮಿಗಳು ಯುವಕನ ಕುತ್ತಿಗೆಯ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಅದೃಷ್ಟವಶಾತ್, ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಯುವಕನ ಪ್ರತಿರೋಧದಿಂದಾಗಿ ದುಷ್ಕರ್ಮಿಗಳು ಘಟನಾಸ್ಥಳದಿಂದ ಓಡಿಹೋಗಿದ್ದಾರೆ.

ಸ್ಥಳೀಯರ ಸಹಾಯದಿಂದ ಗಾಯಗೊಂಡ ಯುವಕನನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಈ ಘಟನೆ ಪೀಣ್ಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

Exit mobile version