ಬೆಂಗಳೂರು: ಐಪಿಎಲ್ 2025ರ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಚೊಚ್ಚಲ ಟ್ರೋಫಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ. ನಿನ್ನೆ (ಜೂನ್ 3) ದಿನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಮಾಂಚಕ ಗೆಲುವು ಸಾಧಿಸಿದ ಆರ್ಸಿಬಿ, 18 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಿತು. ಈ ಗೆಲುವಿನ ಸಂಭ್ರಮದಲ್ಲಿ ಆರ್ಸಿಬಿ ತಂಡವು ಇಂದು ಬೆಂಗಳೂರಿಗೆ ಕಪ್ನೊಂದಿಗೆ ಆಗಮಿಸಿದ್ದು, ರಾಜ್ಯ ಸರ್ಕಾರದಿಂದ ಅದ್ಧೂರಿ ಸ್ವಾಗತವನ್ನು ಪಡೆಯಿತು. ಆದರೆ, ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ದೊಡ್ಡ ನೂಕು ನುಗ್ಗಲಿನಿಂದ ದುರಂತವೊಂದು ಸಂಭವಿಸಿದೆ.
ಹೌದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳ ಜನಸಂದಣಿಯಿಂದಾಗಿ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತದ ಘಟನೆ ನಡೆದಿದೆ. ಈ ದುರಂತದಲ್ಲಿ 20 ಜನ ಗಾಯಗೊಂಡಿದ್ದು, ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಟೇಡಿಯಂನಲ್ಲಿ ಉಚಿತ ಎಂಟ್ರಿ ಪಾಸ್ ಘೋಷಣೆಯ ಬಳಿಕ ಜನಸಂದಣಿ ಇಮ್ಮಡಿಯಾಗಿತ್ತು, ಇದರಿಂದ ಭದ್ರತಾ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಾಯಿತು. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಆರ್ಸಿಬಿಯ ಗೆಲುವಿನ ಸಂತೋಷಕ್ಕೆ ಛಾಯೆ ಬಿದ್ದಂತಾಗಿದೆ. ಪೊಲೀಸರು ಘಟನೆಯ ತನಿಖೆಯನ್ನು ಆರಂಭಿಸಿದ್ದು, ಭದ್ರತಾ ವೈಫಲ್ಯದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.