ಕರ್ಜಗಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ಅಟ್ಟಹಾಸ!

ರಾತ್ರಿಯ ಅಂಧಕಾರದಲ್ಲಿ ಮಣ್ಣು ದರೋಡೆ

Siddu stalin kcr (20)

ರಾಜ್ಯದಲ್ಲಿ ಮರಳು ಮತ್ತು ಮಣ್ಣು ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಭೂಮಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಜಿಲ್ಲಾಡಳಿತ ಮತ್ತು KIADB ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ದಂಧೆ ತಡೆಯಲಾಗದ ಸ್ಥಿತಿಗೆ ತಲುಪಿದೆ.

ಹೌದು ರಾಜ್ಯ ಸರ್ಕಾರ ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದ ಹೊರಹೊಲಯದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಗೆ ಮೀಸಲಿಟ್ಟಿರುವ 407 ಎಕರೆ ಸರ್ಕಾರಿ ಭೂಮಿಯಲ್ಲಿ ಎಗ್ಗಿಲ್ಲದೆ ಮಣ್ಣು ಮಾಫಿಯಾ ನಡೆಯುತ್ತಿದೆ.

ಜಿಲ್ಲೆಯಲ್ಲಿ ಈ ಕೆಂಪು ಮಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು,  ಈ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ ಮಣ್ಣು ಮಾಫಿಯಾ, ರಾತ್ರಿ ವೇಳೆಯಲ್ಲಿ ಜೆಸಿಬಿ ಮತ್ತು ಟಿಪ್ಪರ್ ವಾಹನಗಳನ್ನು ಬಳಸಿಕೊಂಡು ಭೂಮಿಯಿಂದ ಮಣ್ಣನ್ನು ದೋಚುತ್ತಿದೆ. ಈ ದರೋಡೆ ಸ್ಥಳೀಯ ಪ್ರಭಾವಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕರ್ಜಗಿ ಗ್ರಾಮದ ಸುತ್ತಮುತ್ತಲಿನ 407 ಎಕರೆ ಭೂಮಿಯನ್ನು ರಾಜ್ಯ ಸರ್ಕಾರವು ಕೈಗಾರಿಕಾ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದರೂ, ಈ ಭೂಮಿ ಈಗ ಮಣ್ಣುಗಳ್ಳರ ಗುರಿಯಾಗಿದೆ.

KIADB ಅಧಿಕಾರಿಗಳು ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದರೆ ಪೋಲಿಸರು ದಂಧೆಕೋರರಿಂದ ಹಣ ಪಡೆದು ತಿಂದಿದ್ದಾರೆ ಎಂದು KIADB ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯರು ಈ ಬಗ್ಗೆ ಪ್ರಶ್ನಿಸಿದರೆ ಗಲಾಟೆ ಮಾಡುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರು ಈ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಂಪು ಮಣ್ಣು  ದರೋಡೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಅಲ್ಲದೆ, ರಾತ್ರಿಯಲ್ಲಿ ಲಾರಿ ಟಿಪ್ಪರ್‌ಗಳ ಓಡಾಟಗಳಿಂದ ಧೂಳು ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತಿರುವುದರಿಂದ, ಇದು ಸ್ಥಳೀಯರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version