ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಫಿಕ್ಸ್..!?

Untitled design 2025 03 24t184333.015

ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲದೆ ವರ್ಷ ಕಳೆದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನಪ್ರತಿನಿಧಿಗಳ ಆಡಳಿತವಿಲ್ಲದೆ ಅಧಿಕಾರಿಗಳ ಅಂಧಾ ದರ್ಭಾರ್ ಸಾರ್ವಜನಿಕರನ್ನು ಹೈರಾಣಾಗಿಸಿದೆ.

ಇಂದು ರಾಜ್ಯ ಚುನಾವಣಾ ಆಯುಕ್ತರು ಸುದ್ದಿಗಾರರೊಂದಿಗೆ ಮಾತನಾಡಿ ಶಿವಮೊಗ್ಗ, ಮೈಸೂರು, ತುಮಕೂರು, ಮಂಗಳೂರು, ದಾವಣಗೆರೆ ಸೇರಿ ಐದು ಪಾಲಿಕೆಗಳ ಚುನಾವಣೆಯನ್ನು ಈ ವರ್ಷವೇ ನಡೆಸಲು ಆಯೋಗ ಸಿದ್ದವಿದೆ. ಸರ್ಕಾರ ಮೀಸಲಾತಿ ನಿಗಧಿ ಮಾಡಿಕೊಟ್ಟರೆ ಕೂಡಲೇ ಚುನಾವಣೆ ನಡೆಸಲಾಗುವುದು. ಒಂದು ವೇಳೆ ಮೀಸಲಾತಿ ಪಟ್ಟಿ ಕೊಡದಿದ್ದರೆ ಹಳೇ ಮೀಸಲಾತಿ ಅನ್ವಯವೇ ಚುನಾವಣೆ ನಡೆಸಲಾಗುವುದು ಎಂದು ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು.

Exit mobile version