ಸ್ಪೀಕರ್ ಯು.ಟಿ. ಖಾದರ್, ಸಿಎಂಗೆ ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆ

02 (20)

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಅವರೇ ಸ್ವತಃ ತಿಳಿಸಿದ್ದಾರೆ. ಇತ್ತೀಚೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಂಡರ್‌ವರ್ಲ್ಡ್‌ನಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರಿಗೂ ಇಂತಹದ್ದೇ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಡ್ಯದ ತೂಬಿನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸ್ಪೀಕರ್ ಯು.ಟಿ. ಖಾದರ್‌ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿದೆ. ಅಂಡರ್‌ವರ್ಲ್ಡ್ ಸೇರಿದಂತೆ ಕೆಲವು ಕಡೆಗಳಿಂದ ಈ ಕರೆಗಳು ಬಂದಿವೆ. ಈ ಹಿಂದೆಯೂ ನನಗೆ ಹಲವು ಬಾರಿ ಜೀವ ಬೆದರಿಕೆ ಕರೆಗಳು ಬಂದಿವೆ,” ಎಂದು ಹೇಳಿದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕೂಡ ತಮಗೆ ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆಗಳು ಬಂದಿರುವುದಾಗಿ ದೃಢಪಡಿಸಿದ್ದಾರೆ. “ಈ ಕರೆಗಳು ಅಂಡರ್‌ವರ್ಲ್ಡ್‌ನಿಂದ ಮಾತ್ರವಲ್ಲ, ಬೇರೆ ಕೆಲವು ಮೂಲಗಳಿಂದಲೂ ಬಂದಿವೆ,” ಎಂದು ಖಾದರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ, “ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸುವ ಅಗತ್ಯವಿಲ್ಲ. ಜಿಲ್ಲೆಯ ಜನರಿಗಾಗಿ ಮಾಡಬೇಕಾದರೆ ಮಾಡಲಿ,” ಎಂದು ಹೇಳಿದರು.

ತಾತ್ವಿಕವಾಗಿ ಮಾತನಾಡಿದ ಸಿಎಂ, “ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂದು ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ. ಈಗ ಮಾತನಾಡುತ್ತಿದ್ದೇನೆ, ಆದರೆ ಮತ್ತೆ ಹೋಗುತ್ತೇನೆ ಎಂಬ ಗ್ಯಾರಂಟಿ ಇಲ್ಲ,” ಎಂದು ಭಾವುಕವಾಗಿ ಹೇಳಿದರು.

 

Exit mobile version