ಯಾದಗಿರಿ: ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಮೊಬೈಲ್ನಲ್ಲಿ ಹರಟೆಯಲ್ಲಿ ಹೊಡೆಯುತ್ತಿದ್ದ ರೈಲ್ವೆ ಸಿಬ್ಬಂದಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಯಾದಗಿರಿಯ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿ ಸಿ.ಮಹೇಶ್ರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಯಾದಗಿರಿ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ್, ಟಿಕೆಟ್ಗಾಗಿ ನೂರಾರು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿರುವಾಗಲೂ ಮೊಬೈಲ್ನಲ್ಲಿ ದೀರ್ಘಕಾಲ ಮಾತನಾಡುತ್ತಾ ಕುಳಿತಿದ್ದರು.
ಇದರಿಂದ ಕುಪಿತರಾದ ಪ್ರಯಾಣಿಕನೊಬ್ಬರು ಈ ದೃಶ್ಯವನ್ನು ವೀಡಿಯೋ ರೆಕಾರ್ಡ್ ಮಾಡಿ ಸ್ಟೇಷನ್ ಮಾಸ್ಟರ್ಗೆ ಕಳುಹಿಸಿದ್ದಾರೆ. ಈ ವೀಡಿಯೋ ಆಧಾರದ ಮೇಲೆ ರೈಲ್ವೆ ಅಧಿಕಾರಿಗಳು ಮಹೇಶ್ರನ್ನು ಅಮಾನತುಗೊಳಿಸಿದ್ದಾರೆ.