ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯುಜಿಸಿಇಟಿ-2025 (UGCET-2025) ಫಲಿತಾಂಶವನ್ನು ನಾಳೆ (ಮೇ 24, 2025) ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಬೆಳಿಗ್ಗೆ 11:30ಕ್ಕೆ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಮಧ್ಯಾಹ್ನ 2 ಗಂಟೆಯಿಂದ ಕೆಇಎನ ಅಧಿಕೃತ ವೆಬ್ಸೈಟ್ನಲ್ಲಿ (https://cetonline.karnataka.gov.in/kea/) ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ವರ್ಷ 3 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಯುಜಿಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ.
ಫಲಿತಾಂಶ ಪರಿಶೀಲನೆ ವಿಧಾನ
ವಿದ್ಯಾರ್ಥಿಗಳು ತಮ್ಮ ಯುಜಿಸಿಇಟಿ-2025 ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:
-
ಕೆಇಎನ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
-
ಮುಖಪುಟದಲ್ಲಿ ‘ಯುಜಿಸಿಇಟಿ-2025 ಫಲಿತಾಂಶ’ ಲಿಂಕ್ ಮೇಲೆ ಕ್ಲಿಕ್ ಮಾಡಿ.
-
ಹೊಸ ಪುಟದಲ್ಲಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
-
‘Submit’ ಬಟನ್ ಕ್ಲಿಕ್ ಮಾಡಿದ ನಂತರ ಫಲಿತಾಂಶ ಪ್ರದರ್ಶಿತವಾಗುತ್ತದೆ.
-
ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಿ.
#UGCET-25 results will be announced on May 24 from 2 PM.
Higher Education Minister Dr. M.C. Sudhakar will declare them at 11:30 AM at the KEA office.
Result links go live post 2 PM.https://t.co/TLplrLc0qv & https://t.co/7q9hak7Y9z@CMofKarnataka @drmcsudhakar @KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 23, 2025
ಪರೀಕ್ಷೆಯ ವಿಶೇಷತೆ
ಯುಜಿಸಿಇಟಿ-2025 ಪರೀಕ್ಷೆಯನ್ನು ವೆಬ್ಕಾಸ್ಟಿಂಗ್ ಮತ್ತು ಕ್ಯೂಆರ್ ಕೋಡ್ ಆಧಾರಿತ ಮುಖಚಹರೆ ಪತ್ತೆ ವ್ಯವಸ್ಥೆಯ ಮೂಲಕ ನಡೆಸಲಾಗಿತ್ತು. ಈ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಜಾರಿಗೆ ತರಲಾಗಿದ್ದು, ಅಭ್ಯರ್ಥಿಗಳ ನೈಜತೆಯನ್ನು ಖಚಿತಪಡಿಸಿಕೊಳ್ಳಲಾಗಿದೆ. ಒಟ್ಟಾರೆಯಾಗಿ ಪರೀಕ್ಷೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ.
ಕೆಇಎ ಮೊಬೈಲ್ ಆ್ಯಪ್: ವಿದ್ಯಾರ್ಥಿಗಳಿಗೆ ಸೌಲಭ್ಯ
ಕೆಇಎ ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಆಪ್ನಲ್ಲಿ ವೆಬ್ಸೈಟ್ನಲ್ಲಿ ಲಭ್ಯವಿರುವ ಎಲ್ಲ ಮಾಹಿತಿಯೂ ದೊರೆಯುತ್ತದೆ. ಅಭ್ಯರ್ಥಿಗಳು ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಕೆ, ಆಯ್ಕೆ ದಾಖಲಾತಿ, ಸೀಟು ಆಯ್ಕೆ, ಶುಲ್ಕ ಪಾವತಿ ಮುಂತಾದ ಎಲ್ಲ ಪ್ರಕ್ರಿಯೆಗಳನ್ನು ಸುಲಭವಾಗಿ ನಿರ್ವಹಿಸಬಹುದು.
ಜೊತೆಗೆ, ಆಪ್ ಡೌನ್ಲೋಡ್ ಮಾಡಿಕೊಂಡವರಿಗೆ ಸಮಯಕ್ಕೆ ತಕ್ಕಂತೆ ಅಲರ್ಟ್ ಸಂದೇಶಗಳು ಕಳುಹಿಸಲಾಗುವುದು. ಈ ಆ್ಯಪ್ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಬರ್ ಸೆಂಟರ್ಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ತಾಂತ್ರಿಕ ತೊಡಕುಗಳನ್ನು ತಪ್ಪಿಸಲು ಸಹಾಯಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.