ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

Siddu stalin kcr (29)

ಆಂಧ್ರ ಪದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಸುಟ್ಟ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್‌ ಶಂಕರ್ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ ಮಾರ್ಕ್‌ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಂಕರ್ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿದ್ದರಿಂದ ತೀವ್ರ ತೊಂದರೆ ಅನುಭವಿಸಿದ್ದಾರಂತೆ. ಪ್ರಸ್ತುತ ಸಿಂಗಾಪುರದ ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆಯಂತೆ.

ಸದ್ಯ ಡಿಸಿಎಂ ಪವನ್ ಕಲ್ಯಾಣ್ ಅವರು ವಿಶಾಖಪಟ್ಟಣಂನಲ್ಲಿ ಇದ್ದಾರೆ. ಕಾರ್ಯಕ್ರಮವನ್ನು ಮುಗಿಸಿ ಸಿಂಗಾಪೂರ್‌ಗೆ ಪ್ರಯಾಣ ಬೆಳಸಲಿದ್ದಾರೆ. ಮಾರ್ಕ್‌ ಶಂಕರ್ ಆನಾ ಲೆನೆವಾ ಮತ್ತು ಪವನ್ ಕಲ್ಯಾಣ್ ದಂಪತಿ ಪುತ್ರನಾಗಿದ್ದಾನೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version