• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

‘ನಮೋ’ಗೆ ಒಲಿದ 29ನೇ ಜಾಗತಿಕ ಗೌರವ: ಪ್ರಧಾನಿ ಮೋದಿಗೆ ಓಮನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 18, 2025 - 7:58 pm
in ವಿದೇಶ
0 0
0
Untitled design 2025 12 18T194411.187

RelatedPosts

ಇರಾನ್‌ ಶಾಂತಿ ಪ್ರಸ್ತಾವನೆಗೆ ಚಾಟ್‌ಜಿಪಿಟಿ ಬಳಕೆ ಮಾಡಿದೆ: ಜೆಡಿ ವ್ಯಾನ್ಸ್ ವ್ಯಂಗ್ಯ

ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು

ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!

ಯುದ್ಧದಲ್ಲೂ ಲಾಭ ಮಾಡಿದ ಗಲ್ಫ್ ದೇಶಗಳು ಯಾವುವು?

ADVERTISEMENT
ADVERTISEMENT

ಮಸ್ಕತ್‌: ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸದ ಅಂಗವಾಗಿ ಓಮನ್‌ ದೇಶಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಭಾರತ–ಓಮನ್‌ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಿದ ಅವರ ಮಹತ್ವದ ಪಾತ್ರವನ್ನು ಗೌರವಿಸಿ, ಓಮನ್‌ನ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಗ್ರೇಟ್ ಆರ್ಡರ್ ಆಫ್ ಓಮನ್’ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಮಸ್ಕತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ಓಮನ್‌ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಆತ್ಮೀಯ ಸ್ವಾಗತ ಕೋರಿದರು. ಬಳಿಕ ಅಧಿಕೃತ ಕಾರ್ಯಕ್ರಮದಲ್ಲಿ ಸುಲ್ತಾನ ಹೈತಮ್ ಬಿನ್ ತಾರಿಕ್ ಅವರು ಗೌರವ ಪ್ರದಾನ ಮಾಡಿ, ಭಾರತ–ಓಮನ್‌ ಸ್ನೇಹ ಸಂಬಂಧಗಳಲ್ಲಿ ಪ್ರಧಾನಿ ಮೋದಿಯವರ ಪಾತ್ರವನ್ನು ಶ್ಲಾಘಿಸಿದರು.

ಗ್ರೇಟ್ ಆರ್ಡರ್ ಆಫ್ ಓಮನ್ ಎಂಬುದು ಒಮಾನ್ ದೇಶದ ಅತ್ಯುನ್ನತ ನಾಗರಿಕ ಗೌರವವಾಗಿದ್ದು, ವಿದೇಶಿ ರಾಷ್ಟ್ರಗಳ ಮುಖ್ಯಸ್ಥರು, ರಾಜಮನೆತನದ ಗಣ್ಯರು ಹಾಗೂ ಒಮಾನ್‌ನೊಂದಿಗೆ ಸ್ನೇಹ ಸಂಬಂಧಗಳನ್ನು ಬಲಪಡಿಸಿದ ಅಂತರರಾಷ್ಟ್ರೀಯ ನಾಯಕರಿಗೆ ಮಾತ್ರ ಈ ಗೌರವ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1970ರಲ್ಲಿ ಒಮಾನ್‌ನ ಮಾಜಿ ಸುಲ್ತಾನ್ ಕಬೂಸ್ ಬಿನ್ ಸೈದ್ ಅವರು ಸ್ಥಾಪಿಸಿದ್ದರು. ಇದು ಒಮಾನ್‌ನ ಶ್ರೇಷ್ಠ ನಾಗರಿಕ ಗೌರವವಾಗಿದೆ.

ಈ ಗೌರವವನ್ನು ಇದುವರೆಗೆ ಬ್ರಿಟನ್‌ನ ಮಾಜಿ ರಾಣಿ ಎಲಿಜಬೆತ್ II, ನೆದರ್ಲ್ಯಾಂಡ್ಸ್‌ನ ರಾಣಿ ಮ್ಯಾಕ್ಸಿಮಾ, ಜಪಾನ್‌ನ ಚಕ್ರವರ್ತಿ ಅಕಿಹಿಟೊ, ದಕ್ಷಿಣ ಆಫ್ರಿಕಾದ ನಾಯಕ ನೆಲ್ಸನ್ ಮಂಡೇಲಾ, ಜೋರ್ಡಾನ್‌ನ ರಾಜ ಅಬ್ದುಲ್ಲಾ ಸೇರಿದಂತೆ ಹಲವು ವಿಶ್ವದ ಗಣ್ಯರಿಗೆ ಪ್ರದಾನ ಮಾಡಲಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಗೌರವ ಪಡೆದ ವಿಶ್ವದ ಪ್ರಮುಖ ನಾಯಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದರೊಂದಿಗೆ ಪ್ರಧಾನಿ ಮೋದಿ ಅವರಿಗೆ ದೊರಕಿದ ಒಟ್ಟು ಅಂತರರಾಷ್ಟ್ರೀಯ ಗೌರವಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಒಮಾನ್‌ಗೆ ಆಗಮಿಸುವ ಒಂದು ದಿನ ಮುನ್ನವೇ ಇಥಿಯೋಪಿಯಾ ದೇಶವು ತನ್ನ ಅತ್ಯುನ್ನತ ನಾಗರಿಕ ಗೌರವವಾದ ‘ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ಪ್ರದಾನ ಮಾಡಿತ್ತು. ಅಡಿಸ್ ಅಬಾಬಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರು ಈ ಗೌರವವನ್ನು ನೀಡಿ ಸನ್ಮಾನಿಸಿದ್ದರು.

ಭಾರತ ಮತ್ತು ಓಮನ್ ನಡುವಿನ ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಈ ಭೇಟಿ ನಡೆಯುತ್ತಿರುವುದು ವಿಶೇಷ ಮಹತ್ವ ಪಡೆದುಕೊಂಡಿದೆ. ಈ ಭೇಟಿಯ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ರಕ್ಷಣೆ, ಸಮುದ್ರ ಭದ್ರತೆ ಮತ್ತು ಸಾಂಸ್ಕೃತಿಕ ವಿನಿಮಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆಗಳು ನಡೆಯಲಿವೆ.

ಓಮನ್‌ನಲ್ಲಿ ವಾಸಿಸುತ್ತಿರುವ ಲಕ್ಷಾಂತರ ಭಾರತೀಯ ಸಮುದಾಯದ ಪಾತ್ರವನ್ನು ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದು, ಎರಡು ರಾಷ್ಟ್ರಗಳ ನಡುವಿನ ಸ್ನೇಹ ಸೇತುವೆಯಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಭಾರತ ಮತ್ತು ಓಮನ್ ನಡುವಿನ ಇತಿಹಾಸ ಪ್ರಸಿದ್ಧ ಸ್ನೇಹ ಸಂಬಂಧಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಠವಾಗಲಿವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T131624.296
    ಇರಾನ್‌ ಶಾಂತಿ ಪ್ರಸ್ತಾವನೆಗೆ ಚಾಟ್‌ಜಿಪಿಟಿ ಬಳಕೆ ಮಾಡಿದೆ: ಜೆಡಿ ವ್ಯಾನ್ಸ್ ವ್ಯಂಗ್ಯ
    April 9, 2026 | 0
  • Untitled design 2026 04 08T225652.501
    ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು
    April 8, 2026 | 0
  • Untitled design 2026 04 08T160619.234
    ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!
    April 8, 2026 | 0
  • BeFunky collage (48)
    ಯುದ್ಧದಲ್ಲೂ ಲಾಭ ಮಾಡಿದ ಗಲ್ಫ್ ದೇಶಗಳು ಯಾವುವು?
    April 8, 2026 | 0
  • BeFunky collage (42)
    ಶೆಹಬಾಜ್ ಷರೀಫ್ ‘ಕಾಪಿ-ಪೇಸ್ಟ್’ ಎಡವಟ್ಟು! ಇರಾನ್ ಬಿಕ್ಕಟ್ಟಿನಲ್ಲಿ ಪಾಕ್ ಪ್ರಧಾನಿ ಪೋಸ್ಟ್ ನೋಡಿ ನಕ್ಕ ನೆಟ್ಟಿಗರು
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version