ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: 6 ಮಂದಿ ಸಾ*ವು

Untitled design 2026 03 22T154031.815

ಕೈರೋ/ದೋಹಾ: ಕತಾರ್‌ನ ಪ್ರಾದೇಶಿಕ ಸಮುದ್ರ ಪ್ರದೇಶದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ಪತನಗೊಂಡಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ ಎಂದು ಕತಾರ್ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಒಬ್ಬರು ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಕತಾರ್ ಆಂತರಿಕ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಇನ್ನೊಬ್ಬ ವ್ಯಕ್ತಿ ಕಾಣೆಯಾಗಿದ್ದಾನೆ. ಆತನಿಗಾಗಿ ಸಮುದ್ರ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಕ್ಷಣಾ ತಂಡಗಳು, ನೌಕಾಪಡೆ ಹಾಗೂ ವಾಯುಪಡೆಯ ಸಹಕಾರದೊಂದಿಗೆ ಹುಡುಕಾಟ ನಡೆಯುತ್ತಿದೆ.

ರಕ್ಷಣಾ ಸಚಿವಾಲಯವು ನೀಡಿದ್ದ ಹೇಳಿಕೆಯ ಪ್ರಕಾರ, ತಾಂತ್ರಿಕ ದೋಷದಿಂದಾಗಿಯೇ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಕತಾರ್‌ನ ನೀರಿನಲ್ಲಿ ಪತನವಾಗಿದೆ. ಅಪಘಾತದ ಬಳಿಕ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಭಾನುವಾರ ಬೆಳಿಗ್ಗೆಯಿಂದಲೂ ಶೋಧ ಕಾರ್ಯ ನಡೆಯುತ್ತಿದೆ. ಮೃತರ ಶವಗಳನ್ನು ಹೊರತೆಗೆಯಲಾಗಿದ್ದು, ಸಾವನ್ನಪ್ಪಿದವರ ಗುರುತುಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಗುರುತಿನ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಪತನ, 7 ಮಂದಿ ಸಾವು!

ಉತ್ತರಾಖಂಡದ ಕೇದಾರನಾಥಕ್ಕೆ ತೆರಳುತ್ತಿದ್ದ ಆರ್ಯನ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ್ ಬಳಿ ಪತನಗೊಂಡು ಭೀಕರ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಪೈಲಟ್ ಸೇರಿದಂತೆ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕೆಟ್ಟ ಹವಾಮಾನವೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಆದರೆ, ವಿಪರೀತ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ತೀವ್ರ ತೊಡಕು ಎದುರಾಗಿದೆ.

ಹೆಲಿಕಾಪ್ಟರ್ ಇಂದು ಬೆಳಿಗ್ಗೆ 5:30ರ ಸುಮಾರಿಗೆ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿತ್ತು. ತ್ರಿಜುಗಿನಾರಾಯಣ ಮತ್ತು ಗೌರಿಕುಂಡ್ ನಡುವಿನ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಯಿತು ಎಂದು ಉತ್ತರಾಖಂಡದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಡಾ. ವಿ. ಮುರುಗೇಶನ್ ತಿಳಿಸಿದ್ದಾರೆ. ಗೌರಿ ಮೈ ಖಾರ್ಕ್‌ನ ಕಾಡಿನ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಅವಶೇಷಗಳು ಚದುರಿಹೋಗಿವೆ. ಅಪಘಾತದ ಸ್ಥಳದಲ್ಲಿ ಹೊಗೆಯನ್ನು ಗಮನಿಸಿದ ಸ್ಥಳೀಯ ನೇಪಾಳಿ ಮೂಲದ ಮಹಿಳೆಯರು, ಹುಲ್ಲು ಕತ್ತರಿಸುವಾಗ ಈ ಘಟನೆಯ ಬಗ್ಗೆ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮೃತರನ್ನು ಮಹಾರಾಷ್ಟ್ರದ ಜೈಸ್ವಾಲ್ ಕುಟುಂಬದವರೆಂದು ಗುರುತಿಸಲಾಗಿದೆ. ರಾಜ್‌ಕುಮಾರ್ ಜೈಸ್ವಾಲ್, ಶ್ರದ್ಧಾ ಜೈಸ್ವಾಲ್, ಕಾಶಿ ಜೈಸ್ವಾಲ್, ತುಸ್ತಿ ಸಿಂಗ್, ವಿನೋದ್, ವಿಕ್ರಮ್ ಸಿಂಗ್, ಮತ್ತು ಕ್ಯಾಪ್ಟನ್ ರಾಜೀವ್ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಾಗಿದ್ದಾರೆ. ದುರಂತವಾಗಿ, ಮೃತರಲ್ಲಿ 23 ತಿಂಗಳ ಮಗುವೂ ಸೇರಿದೆ. ಮೃತದೇಹಗಳು ತೀವ್ರವಾಗಿ ಸುಟ್ಟುಹೋಗಿರುವ ಕಾರಣ ಗುರುತಿಸುವಿಕೆಯಲ್ಲಿ ಸವಾಲುಗಳು ಎದುರಾಗಿವೆ.

ಕೆಟ್ಟ ಹವಾಮಾನದ ಪಾತ್ರ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಉತ್ತರಾಖಂಡದಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದಾಗಿ ದೃಷ್ಟಿಗೋಚರತೆ ಕಡಿಮೆಯಾಗಿತ್ತು, ಇದು ಅಪಘಾತಕ್ಕೆ ಕಾರಣವಾಯಿತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಘಟನೆಯು ಕಳೆದ ಒಂದು ತಿಂಗಳಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ಮೂರನೇ ಹೆಲಿಕಾಪ್ಟರ್ ಅಪಘಾತವಾಗಿದೆ, ಇದು ಚಾರ್‌ಧಾಮ್ ಯಾತ್ರೆಯ ಮಾರ್ಗದಲ್ಲಿ ಹೆಲಿಕಾಪ್ಟರ್ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ಜೂನ್ 7ರಂದು, ಕೇದಾರಘಾಟಿಯ ಬಡಾಸು ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಕ್ರಿಸ್ಟಲ್ ಕಂಪನಿಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ರುದ್ರಪ್ರಯಾಗ್-ಗೌರಿಕುಂಡ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಈ ಘಟನೆಯಲ್ಲಿ ಪೈಲಟ್‌ಗೆ ಸ್ವಲ್ಪ ಗಾಯವಾಗಿದ್ದರೂ, ಐವರು ಪ್ರಯಾಣಿಕರು ಸುರಕ್ಷಿತರಾಗಿದ್ದರು. ಅದೇ ರೀತಿ, ಮೇ 8ರಂದು ಉತ್ತರಕಾಶಿಯಲ್ಲಿ ಸಂಭವಿಸಿದ ಮತ್ತೊಂದು ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದರು.

ಇದಕ್ಕೂ ಎರಡು ದಿನ ಮೊದಲು, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿ 240ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಆಘಾತದಿಂದ ಜನರು ಚೇತರಿಸುವ ಮುನ್ನವೇ ಕೇದಾರನಾಥದ ಈ ದುರಂತ ಸಂಭವಿಸಿದೆ.

Exit mobile version