• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2026 - 1:03 pm
in Flash News, ವಿದೇಶ
0 0
0
ಮುನ್ಸೂಚನೆ (10)

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ADVERTISEMENT
ADVERTISEMENT

ವಾಷಿಂಗ್ಟನ್, ಜುಲೈ 14: ಅಮೆರಿಕದ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪರಮಾಪ್ತ ಲಿಂಡ್ಸೆ ಗ್ರಹಾಂ (71) ಅವರು ಶನಿವಾರ ಸಂಜೆ ವಾಷಿಂಗ್ಟನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಹಠಾತ್ ನಿಧನರಾಗಿದ್ದಾರೆ. ಆದರೆ, ಅವರು ತಮ್ಮ ಉಕ್ರೇನ್ (Ukraine) ಪ್ರವಾಸ ಮುಗಿಸಿ ವಾಷಿಂಗ್ಟನ್‌‌ಗೆ ಮರಳಿದ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದಿದ್ದಾರೆ. ಇದು ಜಾಗತಿಕ ರಾಜಕೀಯ ವಲಯದಲ್ಲಿ ಹಲವು ನಿಗೂಢ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಟ್ರಂಪ್ ಆಪ್ತನ ನಿಗೂಢ ಸಾವು

ಜುಲೈ 11 ರಂದು ಶನಿವಾರ ಸಂಜೆ ತಮ್ಮ ವಾಷಿಂಗ್ಟನ್ ನಿವಾಸದಲ್ಲಿ ಗ್ರಹಾಂ ಅವರು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೂ ವೈದ್ಯರು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅಧಿಕೃತ ವೈದ್ಯಕೀಯ ವರದಿಯು ಹೃದಯಸ್ತಂಭನವೇ (Cardiac Arrest) ಮರಣಕ್ಕೆ ಕಾರಣ ಎಂದು ದಾಖಲಿಸಿದೆ.

ಆದರೆ, ಗ್ರಹಾಂ ಅವರ ಉಕ್ರೇನ್ ಪ್ರವಾಸದ ಸಂದರ್ಭದಲ್ಲಿ ಅವರಿಗೆ ಇರಾನ್‌ನಿಂದ ಜೀವ ಬೆದರಿಕೆ ಇತ್ತು ಎಂಬ ಮಾಹಿತಿಯು ಈಗ ಬೆಳಕಿಗೆ ಬಂದಿದೆ. ಉಕ್ರೇನ್ ಪ್ರವಾಸದಲ್ಲಿ ಅವರು ಇರಾನ್ ವಿರುದ್ಧ ಕಠಿಣ ನಿಲುವು ತಳೆದಿದ್ದರು ಮತ್ತು ಇರಾನ್‌ನ ಮಿಲಿಟರಿ ಕಾರ್ಯಾಚರಣೆಗಳನ್ನು ಖಂಡಿಸಿದ್ದರು.

ಇರಾನ್ ಕೈವಾಡದ ಶಂಕೆ

ಡೊನಾಲ್ಡ್ ಟ್ರಂಪ್ ಅವರ ಕಟು ಬೆಂಬಲಿಗರಾದ ‘ಮಾಗಾ’ (MAGA) ಗುಂಪಿನ ವಲಯದಲ್ಲಿ ಈ ಸಾವಿನ ಹಿಂದೆ ರಷ್ಯಾ ಅಥವಾ ಇರಾನ್ ದೇಶಗಳ ಸಂಚು ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದು ಭಾರಿ ಸದ್ದು ಮಾಡುತ್ತಿವೆ. ಇದಕ್ಕೆ ಇಂಬು ನೀಡಿದ ಅಂಶವೆಂದರೆ, ಗ್ರಹಾಂ ಅವರ ಸಾವಿನ ಸುದ್ದಿಯನ್ನು ಇರಾನ್‌ನ ಸರ್ಕಾರಿ ಮಾಧ್ಯಮಗಳು ಸಂಭ್ರಮದ ಮಾದರಿಯಲ್ಲಿ ಪ್ರಸಾರ ಮಾಡಿರುವುದು.

ಇತ್ತೀಚೆಗಷ್ಟೇ ಗ್ರಹಾಂ ಅವರಿಗೆ ಇರಾನ್‌ನಿಂದ ಜೀವ ಬೆದರಿಕೆ ಇತ್ತು. ಉಕ್ರೇನ್ ಪ್ರವಾಸದಲ್ಲಿ ಅವರು ಇರಾನ್ ವಿರುದ್ಧ ಕಠಿಣ ಮಾತುಗಳನ್ನಾಡಿದ್ದರು. ಇದು ಇರ್‌ನ ರೆವಲ್ಯೂಷನರಿ ಗಾರ್ಡ್ಸ್ನ ಕೋಪಕ್ಕೆ ಕಾರಣವಾಗಿತ್ತು ಎಂದು ಅಮೆರಿಕದ ಗುಪ್ತಚರ ಮೂಲಗಳು ತಿಳಿಸಿವೆ.

ಗ್ರಹಾಂ ಅವರ ರಾಜಕೀಯ 

ಲಿಂಡ್ಸೆ ಗ್ರಹಾಂ ಅವರು ಅಮೆರಿಕದ ರಿಪಬ್ಲಿಕನ್ ಪಕ್ಷದ ಪ್ರಮುಖ ಧ್ವನಿಯಾಗಿದ್ದರು. ಅವರು ಡೊನಾಲ್ಡ್ ಟ್ರಂಪ್ ಅವರ ಪರಮಾಪ್ತ ಸಲಹೆಗಾರರಾಗಿದ್ದು, ವಿದೇಶಾಂಗ ನೀತಿ, ರಕ್ಷಣಾ ನೀತಿ ಮತ್ತು ಭಾರತ-ಅಮೆರಿಕ ಸಂಬಂಧಗಳ ವಿಷಯದಲ್ಲಿ ಪ್ರಭಾವಿ ಮತವನ್ನು ಹೊಂದಿದ್ದರು.

ಉಕ್ರೇನ್ ಸಂಘರ್ಷದ ನಡುವೆಯೂ ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ಅವರು ತೀವ್ರವಾಗಿ ಖಂಡಿಸಿದ್ದರು. ಭಾರತದ ಈ ಆರ್ಥಿಕ ಹೆಜ್ಜೆಯು ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರ ಯುದ್ಧ ನೀತಿಗೆ ಪರೋಕ್ಷ ನೆರವಾಗುತ್ತಿದೆ ಎಂದು ಪ್ರತಿಪಾದಿಸಿದ್ದ ಗ್ರಹಾಂ, ಅಮೆರಿಕಕ್ಕೆ ರಫ್ತಾಗುವ ಭಾರತೀಯ ಸರಕುಗಳ ಮೇಲೆ ಶೇಕಡಾ 500 ರಷ್ಟು ರಕ್ಷಣಾತ್ಮಕ ಸುಂಕ (Tariff) ವಿಧಿಸಬೇಕೆಂಬ ಕಠಿಣ ಎಚ್ಚರಿಕೆಯನ್ನು ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದ್ದರು.

ಟ್ರಂಪ್ ಅವರ ಭಾವಪೂರ್ಣ ಪ್ರತಿಕ್ರಿಯೆ

ತಮ್ಮ ಆಪ್ತ ರಾಜಕೀಯ ಸಹಚಾರನ ನಿಧನಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂತಾಪ ಸೂಚಿಸಿದ್ದು, ಗ್ರಹಾಂ ಅವರನ್ನು ದೇಶಕ್ಕಾಗಿ ಸದಾ ಶ್ರಮಿಸಿದ ನಿಜವಾದ ಅಮೆರಿಕನ್ ದೇಶಭಕ್ತ ಎಂದು ಬಣ್ಣಿಸಿದ್ದಾರೆ.

“ಲಿಂಡ್ಸೆ ಅಮೆರಿಕದ ದೇಶಭಕ್ತರಲ್ಲಿ ಅತ್ಯಂತ ಶ್ರೇಷ್ಠರು. ಅವರು ತಮ್ಮ ಜೀವನವನ್ನು ತಮ್ಮ ದೇಶಕ್ಕಾಗಿ ಮುಡಿಪಾಗಿಟ್ಟರು. ಅವರ ಅಗಲಿಕೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಅವರ ಕುಟುಂಬಕ್ಕೆ ನನ್ನ ಪ್ರಾರ್ಥನೆಗಳು” ಎಂದು ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಗ್ರಹಾಂ ಅವರ ನಿಧನಕ್ಕೆ ಪ್ರಮುಖ ವಿಶ್ವ ನಾಯಕರು ಮತ್ತು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಬ್ರಿಟನ್ ಪ್ರಧಾನಿ, ಫ್ರಾನ್ಸ್ ಅಧ್ಯಕ್ಷರು ಮತ್ತು ಜರ್ಮನಿ ಚಾನ್ಸೆಲರ್ ಅವರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಗುಪ್ತಚರ ಸಂಸ್ಥೆಗಳ ತನಿಖೆ

ಗ್ರಹಾಂ ಅವರ ಸಾವಿನ ಸುತ್ತಲಿನ ನಿಗೂಢತೆಯಿಂದಾಗಿ, ಅಮೆರಿಕದ ಗುಪ್ತಚರ ಸಂಸ್ಥೆಗಳು (CIA ಮತ್ತು FBI) ಸ್ವತಂತ್ರ ತನಿಖೆಯನ್ನು ಆರಂಭಿಸಿವೆ. ಉಕ್ರೇನ್ ಪ್ರವಾಸದ ಸಂದರ್ಭದಲ್ಲಿ ಗ್ರಹಾಂ ಅವರ ಆಹಾರ ಮತ್ತು ಔಷಧಿಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇರಾನ್ ಮತ್ತು ರಷ್ಯಾದ ಗುಪ್ತಚರ ಕಾರ್ಯಾಚರಣೆಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (12)

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
July 13, 2026 - 1:50 pm
0

ಮುನ್ಸೂಚನೆ (11)

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

by ಶಾಲಿನಿ ಕೆ. ಡಿ
July 13, 2026 - 1:20 pm
0

ಮುನ್ಸೂಚನೆ (10)

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

by ಶಾಲಿನಿ ಕೆ. ಡಿ
July 13, 2026 - 1:03 pm
0

ಮುನ್ಸೂಚನೆ (9)

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

by ಶಾಲಿನಿ ಕೆ. ಡಿ
July 13, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version