• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2026 - 10:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text 2026 09 18T222719.493

ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿರುವ 80ರ ದಶಕದ ರೆಟ್ರೋ ಲುಕ್ ಫೋಟೋ ಟ್ರೆಂಡ್ ಇದೀಗ ಸೈಬರ್ ಅಪರಾಧಿಗಳ ವಂಚನೆಗೆ ಹೊಸ ಅಸ್ತ್ರವಾಗುತ್ತಿದೆ. AI ತಂತ್ರಜ್ಞಾನದ ಮೂಲಕ ತಮ್ಮ ಫೋಟೋಗಳನ್ನು ರೆಟ್ರೋ ಶೈಲಿಗೆ ಬದಲಾಯಿಸಿಕೊಳ್ಳಲು ಮುಂದಾದ ವ್ಯಕ್ತಿಯೊಬ್ಬರು ನಕಲಿ AI ಆ್ಯಪ್‌ ಡೌನ್‌ಲೋಡ್ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಇತ್ತೀಚೆಗೆ ಹಲವರು ತಮ್ಮ ಫೋಟೋಗಳನ್ನು 80ರ ದಶಕದ ಶೈಲಿಯಲ್ಲಿ ಎಡಿಟ್ ಮಾಡಿಕೊಂಡು ಸ್ಟೇಟಸ್ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೇ ಟ್ರೆಂಡ್‌ನಿಂದ ಪ್ರೇರಿತರಾದ ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ನಿವಾಸಿ, 45 ವರ್ಷದ ವಿನೋದ್ ಕೂಡ ತಮ್ಮ ಫೋಟೋವನ್ನು ರೆಟ್ರೋ ಲುಕ್‌ಗೆ ಬದಲಾಯಿಸಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಚಾಟ್‌ಜಿಪಿಟಿ ಅಥವಾ AI ತಂತ್ರಜ್ಞಾನದ ಹೆಸರಿನಲ್ಲಿ ಲಭ್ಯವಿದ್ದ ಅಪರಿಚಿತ ಆ್ಯಪ್‌ವೊಂದನ್ನು ಅವರು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಆ್ಯಪ್‌ ಇನ್‌ಸ್ಟಾಲ್ ಮಾಡಿದ ಬಳಿಕವೇ ಸಮಸ್ಯೆ ಆರಂಭವಾಗಿದೆ. ಆ್ಯಪ್ ಮೂಲಕ ಸೈಬರ್ ಅಪರಾಧಿಗಳು ಮೊಬೈಲ್ ಸಾಧನಕ್ಕೆ ಅನಧಿಕೃತ ಪ್ರವೇಶ ಪಡೆದು, ಅದರಲ್ಲಿದ್ದ ಖಾಸಗಿ ಮಾಹಿತಿಯನ್ನು ಕದ್ದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಆ್ಯಪ್‌ ಇನ್‌ಸ್ಟಾಲ್ ಮಾಡಿದ 5 ನಿಮಿಷದಲ್ಲೇ ಕರೆ!

ನಕಲಿ AI ಆ್ಯಪ್‌ ಡೌನ್‌ಲೋಡ್ ಮಾಡಿದ ಕೇವಲ ಐದು ನಿಮಿಷಗಳಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ವಿನೋದ್ ಅವರಿಗೆ ಕರೆ ಮಾಡಿದ್ದಾನೆ. ತಕ್ಷಣವೇ 50 ಸಾವಿರ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ.

ಹಠಾತ್ ಬಂದ ಕರೆಯಿಂದ ಆಕ್ರೋಶಗೊಂಡ ವಿನೋದ್, ಹಣ ನೀಡಲು ನಿರಾಕರಿಸಿ ಕರೆ ಮಾಡಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಸೈಬರ್ ಅಪರಾಧಿ, ಹಣ ನೀಡದಿದ್ದರೆ ವಿನೋದ್ ಅವರ ಮುಖದ ಫೋಟೋ ಬಳಸಿ ಅಶ್ಲೀಲ ಚಿತ್ರಗಳನ್ನು ಸೃಷ್ಟಿಸಿ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಆದರೆ ವಿನೋದ್ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸದೆ ಕರೆ ಕಡಿತಗೊಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ವಂಚಕರು AI ತಂತ್ರಜ್ಞಾನ ಬಳಸಿಕೊಂಡು ಅವರ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ವಿನೋದ್ ಅವರ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಹಾಗೂ ವಿವಿಧ ವಾಟ್ಸಾಪ್ ಗ್ರೂಪ್‌ಗಳಿಗೆ ಕಳುಹಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೈಬರ್ ಕ್ರೈಂ ಪೊಲೀಸರಿಗೆ ದೂರು

ತಮ್ಮ ಫೋಟೋಗಳನ್ನು ಈ ರೀತಿಯಲ್ಲಿ ದುರ್ಬಳಕೆ ಮಾಡಿರುವುದರಿಂದ ಆತಂಕಕ್ಕೊಳಗಾದ ವಿನೋದ್, ತಕ್ಷಣವೇ ಸೈಬರ್ ಕ್ರೈಂ ಅಥವಾ ಸಿಇಎನ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚನೆಯ ವಿಧಾನ ಹಾಗೂ ಆರೋಪಿಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಹೊಸ ಟ್ರೆಂಡ್‌ಗಳು ವೈರಲ್ ಆಗುತ್ತಿದ್ದಂತೆ ಅದೇ ಹೆಸರಿನಲ್ಲಿ ನಕಲಿ ಆ್ಯಪ್‌ಗಳು, ವೆಬ್‌ಸೈಟ್‌ಗಳು ಮತ್ತು ಲಿಂಕ್‌ಗಳನ್ನು ಸೈಬರ್ ಅಪರಾಧಿಗಳು ಸೃಷ್ಟಿಸುವ ಸಾಧ್ಯತೆ ಇದೆ. ಇಂತಹ ಆ್ಯಪ್‌ಗಳ ಮೂಲಕ ಮೊಬೈಲ್‌ನಲ್ಲಿರುವ ಫೋಟೋಗಳು, ಕಾಂಟ್ಯಾಕ್ಟ್‌ಗಳು, ವೈಯಕ್ತಿಕ ದಾಖಲೆಗಳು ಹಾಗೂ ಇತರೆ ಖಾಸಗಿ ಮಾಹಿತಿಗೆ ಕನ್ನ ಹಾಕುವ ಅಪಾಯವಿದೆ.

ಹೀಗಾಗಿ AI ಫೋಟೋ ಎಡಿಟಿಂಗ್ ಅಥವಾ ಇತರೆ ಸೇವೆಗಳಿಗಾಗಿ ಅಪರಿಚಿತ ಮೂಲಗಳಿಂದ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಬಾರದು. ಆ್ಯಪ್‌ ಇನ್‌ಸ್ಟಾಲ್ ಮಾಡುವ ಮುನ್ನ ಅದರ ಅಧಿಕೃತ ಮೂಲ, ಡೆವಲಪರ್ ವಿವರಗಳು ಮತ್ತು ಅನುಮತಿಗಳನ್ನು ಪರಿಶೀಲಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version