ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್. ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತರ ನಡೆದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲಿಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿದ ಬಿಜೆಪಿಯ ಶಾಸಕರ ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.
ಸ್ಪೀಕರ್ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.
ಬಿಜೆಪಿ 18 ಸದಸ್ಯರು ಸಸ್ಪೆಂಡ್
1-ದೊಡ್ಡಣ್ಣ ಗೌಡ ಪಾಟೀಲ್, 2-ಸಿ ಕೆ ರಾಮಮೂರ್ತಿ, 3-ಅಶ್ವತ್ಥ ನಾರಾಯಣ, 4-ಎಸ್ ಆರ್ ವಿಶ್ವನಾಥ್, 5 -ಬೈರತಿ ಬಸವರಾಜ, 6-ಎಂ ಆರ್ ಪಾಟೀಲ್, 7-ಚನ್ನಬಸಪ್ಪ, 8-ಬಿ ಸುರೇಶ್ ಗೌಡ, 9-ಉಮನಾಥ್ ಕೋಟ್ಯಾನ್ 10-ಶರಣು ಸಲಗಾರ್, 11-ಶೈಲೇಂದ್ರ ಬೆಲ್ದಾಳೆ, 12-ಯಶಪಾಲ್ ಸುವರ್ಣ, 13-ಹರೀಶ್ ಬಿಪಿ, 14-ಡಾ. ಭರತ್ ಶೆಟ್ಟಿ, 15-ಮುನಿರತ್ನ, 16-ಬಸವರಾಜ ಮತ್ತಿಮೋಡ್, 17-ಧೀರಜ್ ಮುನಿರಾಜು, 18-ಡಾ ಚಂದ್ರು ಲಮಾಣಿ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ಕೈಕಾಲು ಹಿಡ್ದು ಮುನಿರತ್ನನನ್ನ ಹೊರಹಾಕಿದ ಮಾರ್ಷಲ್ಸ್
ಬಿಜೆಪಿ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ. ಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು.
ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್ ಹೊರಡಿಸಿದರು. ಬಳಿಕ ಮಾರ್ಷಲ್ಸ್ ಮುನಿರತ್ನರನ್ನು ಸೇರಿ, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.