ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಕಾಂಗ್ರೆಸ್ ಸರ್ಕಾರವು ಬೆಂಗಳೂರು ನಗರದ ಮಧ್ಯಮ ವರ್ಗದ ನಾಗರಿಕರ ಮೇಲೆ ಹೊಸ ತೆರಿಗೆ ಹೊರೆ ಏರಿಸಿ ‘ಮಹಾ ದೋಖಾ’ ಮಾಡುತ್ತಿದೆ ಎಂದು ಜನತಾ ದಳ (ಜೆಡಿಎಸ್) ಪಕ್ಷವು ಆರೋಪಿಸಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪವನ್ನು ಮಾಡಿದ್ದಾರೆ.
ಶುಭೋದಯ ಬೆಂಗಳೂರು! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ ಎಂದು ತಮ್ಮ ಟ್ವೀಟ್ನಲ್ಲಿ ಆರೋಪ ಮಾಡಿದ್ದಾರೆ.
ಈ ಹೊಸ ತೆರಿಗೆ ನಿಯಮದಿಂದ ಬೆಂಗಳೂರು ನಗರದ ಸುಮಾರು 7.5 ಲಕ್ಷ ಮನೆ ಮಾಲೀಕರು ಕಷ್ಟ ಪಡುವಂತಾಗುತ್ತದೆ.“100 ದಿನಗಳಲ್ಲಿ ಲಕ್ಷ ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಈ ಸರ್ಕಾರ ಸಾಮಾನ್ಯ ನಾಗರಿಕರನ್ನು ಒತ್ತಾಯಿಸುತ್ತಿದೆ. ಆದರೆ ಇದರ ಬಗ್ಗೆ ಚಿಂತಿಸಬೇಡಿ. ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ.” ಎಂದು ಹೇಳಿದ್ದಾರೆ.
ಈ ಬಗ್ಗೆ ನಾನು ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.