• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಏರ್‌ಪೋರ್ಟ್ ಸಿಬ್ಬಂದಿ ಅರೆಸ್ಟ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 4:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 22T162333.742

RelatedPosts

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು

ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು

ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

ADVERTISEMENT
ADVERTISEMENT

ಬೆಂಗಳೂರು: ದೇಶದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯೊಬ್ಬರು ಟಿಕೆಟ್ ಮತ್ತು ಲಗೇಜುಗಳನ್ನು ಪರಿಶೀಲಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕೊರಿಯಾದ ಪ್ರವಾಸಿಯೊಬ್ಬರು ಆರೋಪಿಸಿದ್ದಾರೆ.

ಭದ್ರತಾ ತಪಾಸಣೆ ಹೆಸರಿನಲ್ಲಿ ವಿದೇಶಿ ಮಹಿಳೆಯನ್ನು ಶೌಚಾಲಯಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಏರ್‌ಪೋರ್ಟ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಎಫ್.ಡಿ. ಅಪ್ಪನ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಪ್ರವಾಸದ ಉದ್ದೇಶದಿಂದ ಭಾರತಕ್ಕೆ ಬಂದಿದ್ದ ಆ ಮಹಿಳೆ, ತಮ್ಮ ಪ್ರವಾಸ ಮುಗಿಸಿ ಸ್ವದೇಶಕ್ಕೆ ಹಿಂತಿರುಗಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಎಲ್ಲಾ ಭದ್ರತಾ ತಪಾಸಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬೋರ್ಡಿಂಗ್ ಗೇಟ್ ಕಡೆಗೆ ಸಾಗುತ್ತಿದ್ದ ವೇಳೆ, ಸಿಬ್ಬಂದಿ ಅಪ್ಪನ್ ಅಹ್ಮದ್ ಮಹಿಳೆಯನ್ನು ತಡೆದು ನಿಲ್ಲಿಸಿದ್ದಾನೆ. ಅವರ ಬ್ಯಾಗೇಜ್ ಪರಿಶೀಲನೆ ಅಗತ್ಯವಿದೆ ಎಂದು ಹೇಳಿ ಮರುತಪಾಸಣೆಗೆ ಒಳಪಡಿಸಿದ್ದಾನೆ. ಇದಾದ ಬಳಿಕ ವೈಯಕ್ತಿಕ ತಪಾಸಣೆ ನಡೆಸಬೇಕೆಂದು ಹೇಳಿ ಮಹಿಳೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾನೆ.

ಆದರೆ, ಆರೋಪಿಯು ಮಹಿಳೆಯನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬುದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆಯ ಮೈ-ಕೈ ಮುಟ್ಟುವುದು, ತಬ್ಬಿಕೊಳ್ಳಲು ಯತ್ನಿಸುವುದು ಸೇರಿದಂತೆ ಗಂಭೀರ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವರ್ತನೆಯಿಂದ ಮಹಿಳೆ ತೀವ್ರ ಆತಂಕಕ್ಕೊಳಗಾಗಿದ್ದು, ತಕ್ಷಣವೇ ಅಲ್ಲಿಂದ ಹೊರಬಂದು ಸಿಐಎಸ್‌ಎಫ್ ಸಿಬ್ಬಂದಿಗೆ ವಿಷಯ ತಿಳಿಸಿದ್ದಾಳೆ.

ಸಿಐಎಸ್‌ಎಫ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತನಿಖೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

https://youtu.be/LMp1WjL312Q?si=t6pyaLtjst_DUM0b

ಬೆಂಗಳೂರಲ್ಲಿ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಲೈಂಗಿಕ ಕಿರುಕುಳ!

 

ಬೆಂಗಳೂರಿನಲ್ಲಿ ಫಿಟ್ನೆಸ್ ಮತ್ತು ನ್ಯೂಟ್ರಿಷನ್ ಇನ್ಫ್ಲೂಯೆನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಗೆ ಇನ್ಸ್ಟಾಗ್ರಾಮ್ ಮೂಲಕ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಯುವತಿಯನ್ನು ಸೋಶಿಯಲ್ ಮೀಡಿಯಾ ಮೂಲಕ ಫಾಲೋ ಮಾಡಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರೆಯಾದ ಯುವತಿ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್ ಟಿಪ್ಸ್, ವರ್ಕೌಟ್ ವಿಡಿಯೋಗಳು ಮತ್ತು ನ್ಯೂಟ್ರಿಷನ್ ಸಲಹೆಗಳನ್ನು ಹಂಚಿಕೊಳ್ಳುತ್ತಿದ್ದರು. ಆರೋಪಿ ಸುಧೀರ್ ಕುಮಾರ್ ಅವಳನ್ನು ಫಾಲೋ ಮಾಡಿ ಸಂಪರ್ಕ ಸಾಧಿಸಿದ್ದ. ಮೊದಲು ಸಾಮಾನ್ಯ ಸಂದೇಶಗಳಿಂದ ಆರಂಭವಾದ ಸಂಭಾಷಣೆ ನಂತರ ಅಶ್ಲೀಲ ಮತ್ತು ಲೈಂಗಿಕವಾಗಿ ಪ್ರಚೋದಿಸುವ ಸಂದೇಶಗಳಿಗೆ ತಿರುಗಿತು. ಯುವತಿ ಸಂದೇಶಗಳನ್ನು ನಿರಾಕರಿಸಿದರೂ ಆರೋಪಿ ವಾಟ್ಸಾಪ್ ಸಂಖ್ಯೆ ಪಡೆದು ಕಿರುಕುಳ ಮುಂದುವರಿಸಿದ್ದಾನೆ.

ಹರಿಯಾಣದಲ್ಲಿರುವಾಗಲೇ ಆರೋಪಿ ಯುವತಿಯ ಕುಟುಂಬ ಸದಸ್ಯರ ಮನೆಗೆ ಭೇಟಿ ನೀಡಿ ಸಂಪರ್ಕ ಸಾಧಿಸಿದ್ದ. ನಂತರ ಬೆಂಗಳೂರಿಗೆ ಬಂದು ಯುವತಿಯ ಜಿಮ್ ಮತ್ತು ಸಹೋದ್ಯೋಗಿಗಳ ಬಳಿ ಮಾಹಿತಿ ಕಲೆಹಾಕಲು ಪ್ರಯತ್ನಿಸಿದ್ದಾನೆ. ಈ ವಿಷಯ ತಿಳಿದ ಯುವತಿ ಆತಂಕಗೊಂಡು ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಸುಧೀರ್ ಕುಮಾರ್ ಅವನನ್ನು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಇತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ಆರೋಪಿಯಿಂದ ಸಂಗ್ರಹಿಸಿದ ಸಂದೇಶಗಳು ಮತ್ತು ಚಾಟ್‌ಗಳನ್ನು ಪರಿಶೀಲಿಸುತ್ತಿದ್ದು, ಇನ್ನಿತರ ಇಂತಹ ಘಟನೆಗಳಲ್ಲಿ ಭಾಗಿಯಾಗಿದ್ದಾನೇ ಎಂಬುದನ್ನು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣವು ಸೋಶಿಯಲ್ ಮೀಡಿಯಾ ಮೂಲಕ ಮಹಿಳೆಯರಿಗೆ ಆಗುತ್ತಿರುವ ಲೈಂಗಿಕ ಕಿರುಕುಳದ ಗಂಭೀರತೆಯನ್ನು ಎತ್ತಿ ತೋರಿಸಿದೆ.

ದೂರುದಾರೆಯಾದ ಯುವತಿ, “ನಾನು ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೆ. ಆದರೆ ಆರೋಪಿ ನನ್ನನ್ನು ನಿರಂತರವಾಗಿ ಕಿರುಕುಳ ಮತ್ತು ಮಾನಸಿಕ ಒತ್ತಡಕ್ಕೆ ಒಳಪಡಿಸಿದ. ಅವನು ನನ್ನ ಜೀವನವನ್ನು ಭಯಾನಕಗೊಳಿಸಿದ್ದಾನೆ. ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಕ್ಕೆ ಧನ್ಯವಾದಗಳು” ಎಂದು ಹೇಳಿದ್ದಾಳೆ.

ಪೊಲೀಸರು ಈ ರೀತಿಯ ಆನ್‌ಲೈನ್ ಕಿರುಕುಳಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಸಂದೇಹಾಸ್ಪದ ಸಂದೇಶಗಳನ್ನು ತಕ್ಷಣ ರಿಪೋರ್ಟ್ ಮಾಡಬೇಕು ಮತ್ತು ವೈಯಕ್ತಿಕ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 21T192641.350

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು

by ಯಶಸ್ವಿನಿ ಎಂ
March 21, 2026 - 7:32 pm
0

Untitled design 2026 03 21T182851.674

ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು

by ಯಶಸ್ವಿನಿ ಎಂ
March 21, 2026 - 6:30 pm
0

Untitled design 2026 03 21T181207.362

ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ

by ಯಶಸ್ವಿನಿ ಎಂ
March 21, 2026 - 6:13 pm
0

Untitled design 2026 03 21T175439.215

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

by ಯಶಸ್ವಿನಿ ಎಂ
March 21, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 21T192641.350
    ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು
    March 21, 2026 | 0
  • Untitled design 2026 03 21T182851.674
    ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು
    March 21, 2026 | 0
  • Untitled design 2026 03 21T181207.362
    ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ
    March 21, 2026 | 0
  • Untitled design 2026 03 21T175439.215
    ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್
    March 21, 2026 | 0
  • Untitled design 2026 03 21T172620.388
    ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version