• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಎಸಿಐ 5ನೇ ಹಂತದ’ ಅತ್ಯುನ್ನತ ಮಾನ್ಯತೆ

admin by admin
April 2, 2026 - 12:13 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design (17)

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪ್ರಯಾಣಿಕರಿಗೆ ಅತ್ಯುತ್ತಮ ಅನುಭವ ನೀಡುವಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಪ್ರದಾನ ಮಾಡುವ ಗ್ರಾಹಕ ಅನುಭವದ ಅತ್ಯುನ್ನತ ‘5ನೇ ಹಂತದ ಮಾನ್ಯತೆ’ಗೆ ಬೆಂಗಳೂರು ವಿಮಾನ ನಿಲ್ದಾಣ ಭಾಜನವಾಗಿದೆ.

ವಿಮಾನ ನಿಲ್ದಾಣಗಳಲ್ಲಿ ಗ್ರಾಹಕರ ಸೇವೆ ಮತ್ತು ನಿರ್ವಹಣೆಯನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವ ವಿಶ್ವದ ಏಕೈಕ ಜಾಗತಿಕ ಮಾನ್ಯತೆ ಇದಾಗಿದೆ. ಇದರಲ್ಲಿ ಒಟ್ಟು ಐದು ಹಂತಗಳಿದ್ದು, 4 ಮತ್ತು 5ನೇ ಹಂತಗಳು ಅತಿ ಉನ್ನತ ಮತ್ತು ಪರಿಪೂರ್ಣ ಗ್ರಾಹಕ ಅನುಭವದ ವ್ಯವಸ್ಥೆಯನ್ನು ಪ್ರತಿನಿಧಿಸುತ್ತವೆ. ಅತ್ಯಂತ ಕಠಿಣವಾದ ಪರಿಶೀಲನಾ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರೈಸಿರುವ ಕೆಂಪೇಗೌಡ ವಿಮಾನ ನಿಲ್ದಾಣವು ಈ ಪ್ರತಿಷ್ಠಿತ 5ನೇ ಹಂತವನ್ನು ತಲುಪಿದೆ.

RelatedPosts

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ADVERTISEMENT
ADVERTISEMENT
ಸೇವೆಗಳ ಸುಧಾರಣೆಗೆ ತಂತ್ರಜ್ಞಾನದ ಸ್ಪರ್ಶ

ಗ್ರಾಹಕರ ತೃಪ್ತಿಯನ್ನೇ ಪ್ರಮುಖ ಆದ್ಯತೆಯಾಗಿಸಿಕೊಂಡಿರುವ ನಿಲ್ದಾಣದ ಆಡಳಿತ ಮಂಡಳಿ ಪ್ರಯಾಣಿಕರ ಪ್ರತಿಕ್ರಿಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೇವೆಗಳನ್ನು ಮೇಲ್ದರ್ಜೆಗೇರಿಸುತ್ತಿದೆ. ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ‘ಡಿಜಿ ಯಾತ್ರಾ’ದಂತಹ ಡಿಜಿಟಲ್ ಪರಿಹಾರಗಳು, ಸುಲಭ ಪ್ರವೇಶ ವ್ಯವಸ್ಥೆಗಳು ಮತ್ತು ಪ್ರಯಾಣಿಕರ ಸೌಕರ್ಯಗಳ ವಿಸ್ತರಣೆಯ ಮೂಲಕ ಯಾವುದೇ ಅಡೆತಡೆಯಿಲ್ಲದ ಸುಗಮ ಪ್ರಯಾಣವನ್ನು ಖಚಿತಪಡಿಸಲಾಗುತ್ತಿದೆ.

ಇದಲ್ಲದೆ ಸಮೀಕ್ಷೆಗಳು ಹಾಗೂ ಕಾರ್ಯಾಗಾರಗಳ ಮೂಲಕ ಕಲೆಹಾಕಲಾದ ದತ್ತಾಂಶಗಳ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಜಾಗತಿಕ ಮಟ್ಟದ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಬಿಐಎಎಲ್ ಎಂಡಿ ಮತ್ತು ಸಿಇಒ ಹರಿ ಮರಾರ್, ವಿಮಾನ ನಿಲ್ದಾಣದ ಪ್ರತಿಯೊಂದು ಹೆಜ್ಜೆಯಲ್ಲೂ ಗ್ರಾಹಕರ ಅನುಭವವೇ ನಮಗೆ ಅತಿಮುಖ್ಯ. ಈ ಅತ್ಯುನ್ನತ ಮಾನ್ಯತೆಯು ನಮ್ಮ ಸಿಬ್ಬಂದಿಯ ಶಿಸ್ತುಬದ್ಧ ಹಾಗೂ ಸಾಮೂಹಿಕ ಶ್ರಮಕ್ಕೆ ಸಂದ ಗೌರವವಾಗಿದೆ. ಪ್ರಯಾಣಿಕರ ನಿರೀಕ್ಷೆಗಳಿಗೆ ತಕ್ಕಂತೆ ಜಾಗತಿಕ ಗುಣಮಟ್ಟದ ಸೇವೆಯನ್ನು ಒದಗಿಸುವ ನಮ್ಮ ಬದ್ಧತೆಯನ್ನು ಇದು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯ ಡೈರೆಕ್ಟರ್ ಜನರಲ್ ಜಸ್ಟಿನ್ ಎರ್ಬಚ್ಚಿ ಅವರು ಪ್ರತಿಕ್ರಿಯಿಸಿ, ಪ್ರಯಾಣಿಕರ ಅನುಭವವೇ ಯಾವುದೇ ವಿಮಾನ ನಿಲ್ದಾಣದ ಕಾರ್ಯಚಟುವಟಿಕೆಗಳ ಹೃದಯಭಾಗವಾಗಿರುತ್ತದೆ. ಪ್ರಯಾಣಿಕರ ನಿರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸುವಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ಧತೆ ಶ್ಲಾಘನೀಯ. ಈ ಉನ್ನತ ಮಾನ್ಯತೆ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) ನಿರ್ವಹಿಸುವ ಈ ನಿಲ್ದಾಣ, 2024-25ನೇ ಆರ್ಥಿಕ ವರ್ಷದಲ್ಲಿ 4.18 ಕೋಟಿಗೂ ಹೆಚ್ಚು ಜನರಿಗೆ ಸೇವೆ ಒದಗಿಸಿ ದಕ್ಷಿಣ ಭಾರತದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ. ಆರಂಭವಾದ ದಿನದಿಂದ ಇಲ್ಲಿಯವರೆಗೆ ಬರೋಬ್ಬರಿ 35 ಕೋಟಿಗೂ ಅಧಿಕ ಜನ ಇಲ್ಲಿಂದ ಪ್ರಯಾಣಿಸಿದ್ದಾರೆ. ಇದು ಭಾರತದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ.

ಕೇವಲ ಪ್ರಯಾಣಿಕರ ಸಾಗಣೆಯಲ್ಲದೆ, ಸರಕು ಸಾಗಣೆ (ಕಾರ್ಗೋ) ವಿಭಾಗದಲ್ಲೂ ಬೆಂಗಳೂರು ವಿಮಾನ ನಿಲ್ದಾಣ ಮುಂಚೂಣಿಯಲ್ಲಿದ್ದು, ಕೊಳೆಯುವ ವಸ್ತುಗಳ ಸಾಗಣೆಯಲ್ಲಿ ಸತತ 4ನೇ ವರ್ಷವೂ ದೇಶದಲ್ಲಿಯೇ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ವಿಮಾನ ನಿಲ್ದಾಣದ ಈ ಬೃಹತ್ ಬೆಳವಣಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇದರ ಬಹುಪಾಲು ಪಾಲುದಾರಿಕೆ ಹೊಂದಿರುವ ಖಾಸಗಿ ಪ್ರವರ್ತಕ ಸಂಸ್ಥೆ ‘ಫೇರ್‌ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಕಾರ್ಪೊರೇಷನ್’ನ ಹೂಡಿಕೆ ಮತ್ತು ಬೆಂಬಲವೂ ಪ್ರಮುಖ ಪಾತ್ರ ವಹಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version