ಬೆಂಗಳೂರಿನಲ್ಲಿ ಹೆಚ್ಚಾದ ಚಳಿ: ಹವಾಮಾನ ಇಲಾಖೆ ಎಚ್ಚರಿಕೆ

Untitled design 2025 12 26T074535.845

ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ರಾಜ್ಯದ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಿದ್ದು, ಶೀತಗಾಳಿ ಮತ್ತು ಮಂಜು ಮುಸುಕಿದ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಂಜಿನ ಮುಸುಕು:

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವ ದಟ್ಟವಾದ ಮಂಜು ಕವಿದಿದೆ. ಇದರಿಂದಾಗಿ ರಸ್ತೆಗಳಲ್ಲಿ ದೃಷ್ಟಿಗೋಚರತೆ (Visibility) ಕಡಿಮೆಯಾಗಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯವಾಗಿ ವಿಮಾನ ನಿಲ್ದಾಣದ ರಸ್ತೆ ಮತ್ತು ಹೊರವಲಯದ ಪ್ರದೇಶಗಳಲ್ಲಿ ಸಂಚರಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ. ತಾಪಮಾನವು ಕನಿಷ್ಠ 15°C ನಿಂದ ಗರಿಷ್ಠ 28°C ವರೆಗೆ ಇರಲಿದ್ದು, ನಗರದಲ್ಲಿ ಶೀತದ ಗಾಳಿ ಹೆಚ್ಚಾಗಿದೆ.

ಆರೋಗ್ಯದ ಬಗ್ಗೆ ಇರಲಿ ಎಚ್ಚರ: ಧಿಡೀರ್ ಆಗಿ ಹೆಚ್ಚಾದ ಚಳಿಯಿಂದಾಗಿ ಶೀತ, ಕೆಮ್ಮು ಮತ್ತು ಜ್ವರದಂತಹ ಸಮಸ್ಯೆಗಳು ಕಂಡುಬರುತ್ತಿವೆ. ವೈದ್ಯರ ಸಲಹೆಯಂತೆ:

ರಾಜ್ಯದ ವಿವಿಧ ಭಾಗಗಳಲ್ಲಿ ಒಣಹವೆ: ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದ್ದು ಆರೋಗ್ಯ ಸಮಸ್ಯೆಯಾಗುವುವ ಸಾಧ್ಯತೆ ಇದೆ. ಎಚ್ಚರಿಕೆ ಇಂದ ಇರಿ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

  1. ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಚಳಿ ಇಲ್ಲದಿದ್ದರೂ ಒಣಹವೆ ಇರಲಿದೆ.

  2. ದಕ್ಷಿಣ ಒಳನಾಡು: ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಚಳಿ ಹೆಚ್ಚಾಗಲಿದೆ. ಇಲ್ಲಿಯೂ ಸಹ ಮಂಜಿನ ಪ್ರಭಾವ ಕಾಣಿಸಿಕೊಳ್ಳಲಿದೆ.

  3. ಉತ್ತರ ಒಳನಾಡು: ಬೀದರ್, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ ವಾರದಿಂದಲೇ ತೀವ್ರ ಚಳಿ ದಾಖಲಾಗುತ್ತಿದ್ದು, ಒಣಹವೆ ಮುಂದುವರಿಯಲಿದೆ.

ವಾಹನ ಸವಾರರಿಗೆ ವಿಶೇಷ ಸೂಚನೆ: ಮುಂಜಾನೆ 5 ಗಂಟೆಯಿಂದ 8 ಗಂಟೆಯವರೆಗೆ ಮಂಜಿನ ಪ್ರಮಾಣ ಹೆಚ್ಚಿರುವುದರಿಂದ ಹೈವೇಗಳಲ್ಲಿ ಚಲಿಸುವಾಗ ಹೆಡ್‌ಲೈಟ್‌ಗಳನ್ನು ಆನ್ ಮಾಡಿಕೊಂಡು ಹೋಗುವುದು ಸುರಕ್ಷಿತ. ಮಂಜಿನಿಂದಾಗಿ ಅಪಘಾತಗಳ ಸಂಭವ ಇರುವುದರಿಂದ ವೇಗಕ್ಕೆ ಮಿತಿ ಇರಲಿ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Exit mobile version