ಪೆಟ್ರೋಲ್ ಬೆಲೆ ಏರಿಕೆ ಪ್ರಸ್ತಾಪ: ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದ ಆರ್‌.ಅಶೋಕ್‌..!

Untitled design (11)

ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಮತ್ತೊಮ್ಮೆ ಏರಿಕೆ ಮಾಡುವ ಪ್ರಸ್ತಾಪಕ್ಕೆ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ, ಅಸಮರ್ಥತೆ ಮತ್ತು ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತರಬೇಕು ಎಂದು ಪ್ರಶ್ನಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಪೆಟ್ರೋಲ್ ಬೆಲೆಯನ್ನು ಮತ್ತಷ್ಟು ದುಬಾರಿ ಮಾಡುವುದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುದಂತಾಗುತ್ತದೆ. ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿ ಮಾಡುವುದಂರಿನದ ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಬೆಲೆ ಏರಿಕೆಯ ಲೆಕ್ಕಾಚಾರ ಅಶೋಕ್ ಅವರು ತಮ್ಮ ಪೋಸ್ಟ್‌ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದ 2.5 ವರ್ಷಗಳಲ್ಲಿ ನಡೆದ ಬೆಲೆ ಏರಿಕೆಯ ವಿವರಗಳನ್ನು ನೀಡಿದ್ದಾರೆ:

ಒಟ್ಟಾರೆಯಾಗಿ, ಕಳೆದ 2.5 ವರ್ಷಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ ₹6 ಮತ್ತು ಡೀಸೆಲ್ ಬೆಲೆಯಲ್ಲಿ ₹5.5 ಏರಿಕೆಯಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ಹೆಚ್ಚಳ ಮಾಡಲು ಹೊರಟಿದ್ದೀರಲ್ಲ, ನಿಮ್ಮ ಸರ್ಕಾರದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು? ಎಂದು ಪ್ರಶ್ನಿಸಿದ್ದಾರೆ.

ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು ? ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ. ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಪೆಟ್ರೋಲ್ ಬೆಲೆ ಏರಿಕೆಯ ಹಿನ್ನೆಲೆ ಕರ್ನಾಟಕ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ VAT (ಮೌಲ್ಯವರ್ಧಿತ ತೆರಿಗೆ)ಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಾ ಬಂದಿದೆ. ಕೇಂದ್ರದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ, ರಾಜ್ಯ ಸರ್ಕಾರದ ತೆರಿಗೆ ಹೆಚ್ಚಳದಿಂದಾಗಿ ಸಾಮಾನ್ಯ ಜನರ ಮೇಲೆ ಹೊರೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ₹103ರ ಆಸುಪಾಸಿನಲ್ಲಿ ಇದ್ದು, ಮತ್ತೊಮ್ಮೆ ₹1 ಏರಿಕೆಯಾದರೆ ₹104 ದಾಟಲಿದೆ.

ಜನಸಾಮಾನ್ಯರ ಆಕ್ರೋಶ

ದಿನಕ್ಕೆ ₹200-300 ಇಂಧನಕ್ಕೆ ಖರ್ಚು. ಇನ್ನೂ ಏರಿಕೆಯಾದರೆ ಬದುಕು ಕಷ್ಟ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರಿಗೆ ಬೈಕ್ ಅಗತ್ಯ. ಆದರೆ ಪೆಟ್ರೋಲ್ ಬೆಲೆಯೇ ದೊಡ್ಡ ಹೊರೆ ಎಂದು ದ್ವಿಚಕ್ರ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೂ ಗೃಹಿಣಿಯರು ಇಂಧನ ಬೆಲೆ ಏರಿಕೆಯಿಂದ ದಿನಸಿ, ತರಕಾರಿ ಬೆಲೆಯೂ ಏರುತ್ತದೆ. ಗ್ಯಾರಂಟಿ ಯೋಜನೆಗಳು ಏನು ಪ್ರಯೋಜನ ?ಎಂದು ಹೇಳಿ ಅವರು ತಮ್ಮ ಅಳಲನ್ನೂ ತೋಡಿಕೊಂಡಿದ್ದಾರೆ.

ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಆರ್. ಅಶೋಕ್ ಅವರ ಈ ಟೀಕೆಯ ಬೆನ್ನ ಹಿಂದೆಯೇ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಘೋಷಿಸಿದೆ. ಪೆಟ್ರೋಲ್ ಬೆಲೆ ಏರಿಕೆ ತಡೆಯುವಂತೆ ಒತ್ತಡ ಹೇರುವ ನಿಟ್ಟಿನಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ಧರಣಿ, ಸಾಮೂಹಿಕ ಬೈಕ್ ರ್‌ಯಾಲಿ ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರ ಜೇಬಿಗೆ ಕೈ ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸರ್ಕಾರದ ಸ್ಪಷ್ಟೀಕರಣ ಬಾಕಿ ಇನ್ನೂ ಸರ್ಕಾರದಿಂದ ಪೆಟ್ರೋಲ್ ಬೆಲೆ ಏರಿಕೆ ಪ್ರಸ್ತಾಪಕ್ಕೆ ಅಧಿಕೃತ ಸ್ಪಷ್ಟೀಕರಣ ಬಂದಿಲ್ಲ. ಆದರೆ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ಆದಾಯ ಹೆಚ್ಚಳಕ್ಕಾಗಿ VAT ಏರಿಕೆ ಪರಿಗಣಿಸಲಾಗುತ್ತಿದೆ. ಇದು ಜನವಿರೋಧಿ ನಡೆಯೇ ಆಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

Exit mobile version