ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳ ನಿವಾಸಿಗಳಿಗೆ ಇಂದು (ಜೂನ್ 20) ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಕೈಗೊಳ್ಳುತ್ತಿರುವ ತುರ್ತು ಮತ್ತು ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಗರದ 25ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಹಲವು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಬೆಸ್ಕಾಂ ನೀಡಿರುವ ಮಾಹಿತಿ ಪ್ರಕಾರ, ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ಇನ್ನೂ ಕೆಲವು ಪ್ರದೇಶಗಳಲ್ಲಿ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ತಮ್ಮ ಅಗತ್ಯ ಕೆಲಸಗಳನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಆರ್.ಆರ್.ನಗರ ಮತ್ತು ಬನಶಂಕರಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಆರ್.ಆರ್.ನಗರ ಹಾಗೂ ಬನಶಂಕರಿ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಈ ಪಟ್ಟಿಯಲ್ಲಿ ಭಾರತ್ ಲೇಔಟ್, ಪಟಾಲಮ್ಮ ದೇವಸ್ಥಾನದ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ, ಬನಶಂಕರಿ 5ನೇ ಹಂತ, ಪೂರ್ಣಪ್ರಜ್ಞ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕಾನಗರ, ಬನಶಂಕರಿ 6ನೇ ಹಂತ, 80 ಅಡಿ ರಸ್ತೆ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳು ಸೇರಿವೆ.
ಇದರ ಜೊತೆಗೆ ವೀರಭದ್ರನಗರ, ಬ್ಯಾಂಕ್ ಕಾಲೋನಿ, ಎನ್ಟಿವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬನಶಂಕರಿ 3ನೇ ಹಂತ, ಕಟ್ಟರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಔಟ್, 100 ಅಡಿ ರಿಂಗ್ ರಸ್ತೆ ಹಾಗೂ ಕಾಮಾಕ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಲ್ಲೇಶ್ವರಂ ವಿಭಾಗದಲ್ಲೂ ವಿದ್ಯುತ್ ಸರಬರಾಜು ಸ್ಥಗಿತ
ಮಲ್ಲೇಶ್ವರಂ ವಿಭಾಗ ಮತ್ತು ಸಿ-6 ಉಪವಿಭಾಗ ವ್ಯಾಪ್ತಿಯಲ್ಲಿ ನಡೆಯಲಿರುವ ನಿರ್ವಹಣಾ ಕಾಮಗಾರಿಗಳ ಪರಿಣಾಮವಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಂ.ಎಸ್. ರಾಮಯ್ಯ ಆಸ್ಪತ್ರೆ, ಪೈಪ್ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ಐ ಕ್ವಾರ್ಟರ್ಸ್, ಸದಾಶಿವನಗರ ಪೊಲೀಸ್ ಠಾಣೆ ಸುತ್ತಮುತ್ತ, ಎಜಿಎಸ್ ಲೇಔಟ್, ಜಲದರ್ಶಿನಿ ಲೇಔಟ್, ರಾಮಯ್ಯ ಬಾಯ್ಸ್ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತನ ಅಪಾರ್ಟ್ಮೆಂಟ್ ಸೇರಿದಂತೆ ಹಲವು ಪ್ರದೇಶಗಳು ಈ ವ್ಯತ್ಯಯದ ವ್ಯಾಪ್ತಿಗೆ ಬರುತ್ತವೆ.
ಇದಲ್ಲದೆ ಕಾಫಿ ಡೇ, ರಾಮಯ್ಯ ಆಸ್ಪತ್ರೆ ಎದುರಿನ ವಾಣಿಜ್ಯ ಕಟ್ಟಡಗಳು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಇಸ್ರೋ ಪ್ರದೇಶ, ಡಾಲರ್ಸ್ ಕಾಲೋನಿ, ಚಿಕ್ಕಮಾರನಹಳ್ಳಿ ಹಾಗೂ ಗೌರಿ ಅಪಾರ್ಟ್ಮೆಂಟ್ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಇರಲಿದೆ.
ಅಮರಜ್ಯೋತಿ MUSS ವ್ಯಾಪ್ತಿಯಲ್ಲೂ ಪವರ್ ಕಟ್
66/11 ಕೆವಿ ಅಮರಜ್ಯೋತಿ MUSS ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಜೋಗುಪಾಳ್ಯ, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯರಸ್ತೆ, ರಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಂಪುರ, ಕ್ಯಾಂಬ್ರಿಡ್ಜ್ ರಸ್ತೆ, ಆರ್ಎಂಝೆಡ್ ಮಿಲೇನಿಯಾ, ಹಲಸೂರು, ಹಲಸೂರು ರಸ್ತೆ ಹಾಗೂ ಅಜಂತಾ ಟ್ರಿನಿಟಿ ಸರ್ಕಲ್ ಪ್ರದೇಶಗಳು ಇದರಲ್ಲಿ ಸೇರಿವೆ.
ಇದೇ ವೇಳೆ ಎಚ್ಎಎಲ್ 2ನೇ ಹಂತ, ಬೆನ್ನಿಗಾನಹಳ್ಳಿ, ಎ. ನಾರಾಯಣಪುರ, ಬಿ. ನಾರಾಯಣಪುರ, ಕಗ್ಗದಾಸಪುರ, ಆಕಾಶನಗರ, ಉದಯನಗರ, ಬೈರಸಂದ್ರ, ಸಿ.ವಿ. ರಾಮನ್ ನಗರ, ಎನ್ಜಿಇಎಫ್ ಲೇಔಟ್ ಪೂರ್ವ ಭಾಗ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ ಹಾಗೂ ಅಬ್ಬೆ ಲೇಔಟ್ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಸ್ಕಾಂ ಅಧಿಕಾರಿಗಳ ಪ್ರಕಾರ, ವಿದ್ಯುತ್ ಜಾಲದ ಸುಧಾರಣೆ ಮತ್ತು ಸುರಕ್ಷಿತ ವಿದ್ಯುತ್ ಸರಬರಾಜು ವ್ಯವಸ್ಥೆಗಾಗಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ವಿದ್ಯುತ್ ವ್ಯತ್ಯಯದ ಅವಧಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ದಿನಚರಿ ಹಾಗೂ ಅಗತ್ಯ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.





