• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಳೆ‌ ನೀರಿನಿಂದ ಅವಾಂತರ; ನಗರದ ಶೇ.70ರಷ್ಟು ‌ಪ್ರದೇಶಗಳ ಸಮಸ್ಯೆ ‌ನಿವಾರಣೆ: ಡಿ.ಕೆ.ಶಿವಕುಮಾರ್

210 ಪ್ರದೇಶಗಳನ್ನು ಗುರುತಿಸಿ 166 ಪ್ರದೇಶಗಳಲ್ಲಿ ಸಮಸ್ಯೆ ನಿವಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2025 - 10:20 pm
in Flash News, ಕರ್ನಾಟಕ
0 0
0
Untitled design 2025 05 19t222033.368

ಬೆಂಗಳೂರು : “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಈಗಾಗಲೇ ಇಡೀ ಬೆಂಗಳೂರಿನಾದ್ಯಂತ 197 ಕಿಮೀ ಉದ್ದದ ಮಳೆನೀರುಗಾಲುವೆ ನಿರ್ಮಾಣದ ಕೆಲಸ ನಡೆಯುತ್ತಿದೆ.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬಿಬಿಎಂಪಿ ಮುಖ್ಯ ಕಚೇರಿಯ ವಾರ್ ರೂಮಲ್ಲಿ ಮಾಧ್ಯಮದವರ ಜತೆ ಸೋಮವಾರ ಮಾತನಾಡಿದರು. “ನಾನು ಬೆಂಗಳೂರಿನ ಜವಾಬ್ದಾರಿ ತೆಗೆದುಕೊಂಡ ನಂತರ ಮಳೆ ನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 210 ಪ್ರದೇಶಗಳನ್ನು ಗುರುತಿಸಲಾಯಿತು. 166 ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ‌ಮಾಡಲಾಗಿದೆ. ಇನ್ನು 44 ಪ್ರದೇಶಗಳಲ್ಲಿ ಕೆಲಸ ಬಾಕಿಯಿದ್ದು ಇದರಲ್ಲಿ 24 ಪ್ರದೇಶಗಳಲ್ಲಿ ಕೆಲಸ ನಡೆಯುತ್ತಿದೆ. ಸಂಚಾರಿ ಪೊಲೀಸರು ಮಳೆ ಬಂದಾಗ ಸಮಸ್ಯೆ ಉಂಟಾಗುವ 132 ಪ್ರದೇಶಗಳನ್ನು ಗುರುತಿಸಿದ್ದಾರೆ. ಇದರಲ್ಲಿ ಏಪ್ರಿಲ್ ವೇಳೆಗೆ 82 ಪ್ರದೇಶಗಳಲ್ಲಿ ಸಮಸ್ಯೆ ನಿವಾರಣೆ ಮಾಡಿದ್ದೇವೆ. 41 ಕೆಲಸಗಳು ಬಾಕಿ ಉಳಿದಿವೆ. ಮಳೆನೀರುಗಾಲುವೆಗೆ ಎಂದೇ 2 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ” ಎಂದು ಹೇಳಿದರು.

RelatedPosts

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

ADVERTISEMENT
ADVERTISEMENT

“ಮಳೆ ಎಂಬುದು ಪ್ರಕೃತಿಯ ನಿಯಮ. ನಾವು ಜನಸಾಮಾನ್ಯರ ಬದುಕಿನ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಂಟಾಗಿರುವ ಸಮಸ್ಯೆಗಳನ್ನು ನಿವಾರಣೆ ಮಾಡಲು ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನ ಜನತೆ ಯಾವುದೇ ಕಾರಣಕ್ಕೂ ಗಾಬರಿಗೆ ಒಳಗಾಗುವುದು ಬೇಡ” ಎಂದರು.

“ದುರಾದೃಷ್ಟವಶಾತ್ ಮಹಿಳೆಯೊಬ್ಬರ ಮೇಲೆ ಖಾಸಗಿ ಪ್ರದೇಶದಲ್ಲಿದ್ದ ಕಟ್ಟಡದ ಗೋಡೆ ಬಿದ್ದು ಮೃತಪಟ್ಟಿದ್ದಾರೆ. ನಮಗೂ ನಮ್ಮ ಜವಾಬ್ದಾರಿಯ ಬಗ್ಗೆ ಅರಿವಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಸಿಲ್ಕ್‌ ಬೋರ್ಡ್, ಹೆಬ್ಬಾಳದ‌ ನಂತರದ‌ ಭಾಗ, ಯಲಹಂಕ ಇಲ್ಲೆಲ್ಲೇ ಹೆಚ್ಚು ಮಳೆ ಸುರಿದಿದೆ. ಇಲ್ಲಿ ಒಂದೆರಡು ಕಡೆ ರೈಲ್ವೇ ಅಂಡರ್ ಪಾಸ್ ಕೆಲಸ ನಡೆಯುತ್ತದೆ. ಆದ ಕಾರಣ ನೀರು ನಿಂತು ಹೆಚ್ಚು ತೊಂದರೆಯಾಗುತ್ತಿದೆ. ಆದ್ದರಿಂದ ಆ ಇಲಾಖೆಯವರ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಲಾಗುವುದು” ಎಂದರು.

ಹತಾಶೆಯ ಮನುಷ್ಯರು

ಕುಮಾರಸ್ವಾಮಿ ಗ್ರೇಟರ್ ಬೆಂಗಳೂರಲ್ಲ ಲೂಟರ್ ಬೆಂಗಳೂರು ಎಂದು ಕರೆದಿರುವ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಹಾಗೂ ಬಿಜೆಪಿಯ ನಾಯಕರು ಹತಾಶೆಯ ಮನುಷ್ಯರು” ಎಂದರು.

ನಿಮ್ಮನ್ನ ಅಥವಾ ಸರ್ಕಾರವನ್ನು ನೋಡಿ ಹತಾಶೆಗೆ ಒಳಗಾಗಿದ್ದಾರೆಯೇ ಎಂದಾಗ, “ನಾನು ಹಾಗೂ ಸರ್ಕಾರ ಎರಡೂ ನೋಡಿ ಹತಾಶರಾಗಿದ್ದಾರೆ. ನಾವು ಇಷ್ಟೊಂದು ಸಾಧನೆ ಮಾಡಿದ್ದೇವೆ. ಅವರಿಗೆ ಏನನ್ನೂ ಹೇಳಿಕೊಳ್ಳಲು ಆಗುತ್ತಿಲ್ಲವಲ್ಲ. ಜೋಕರ್ ಆಟವಾಡಲು ನನಗೆ ಚಾನ್ಸ್ ಸಿಗಲಿಲ್ಲವಲ್ಲ ಎಂದು ಸಂಕಟ” ಎಂದರು.

ಡಿ.ಕೆ.ಶಿವಕುಮಾರ್ ರಿಯಲ್‌ ಎಸ್ಟೇಟ್‌ ಮಾಡುವವರು ಎನ್ನುವ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ನಾನು ಇಲ್ಲಿ ಅದನ್ನು ಮಾತನಾಡುವುದಿಲ್ಲ. ಬೇರೆ ವೇದಿಕೆಯಲ್ಲಿ ಮಾತನಾಡುತ್ತೇನೆ. ಆರ್.ಅಶೋಕ್ ಹಾಗು ವಿರೋಧ ಪಕ್ಷದ ಯಾರನ್ನಾದರೂ ಕರೆಯಿರಿ ಮಾಧ್ಯಮಗಳ ಮುಂದೆಯೇ ಚರ್ಚೆ ನಡೆಸೋಣ” ಎಂದು ತಿರುಗೇಟು ನೀಡಿದರು.

ಸವಾಲಿಗೆ ನಾನು ಸಿದ್ಧನಿದ್ದೇನೆ

ಗ್ರೇಟರ್‌ ಬೆಂಗಳೂರು ವಾಟರ್ ಬೆಂಗಳೂರಾಗಿದೆ ಎನ್ನುವ ವಿಪಕ್ಷಗಳ ಟೀಕೆಗಳ ಬಗ್ಗೆ ಕೇಳಿದಾಗ,‌ “ನಾವು ಬೆಂಗಳೂರಿನ‌ ಎಷ್ಟು ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ ಎಂಬುದರ ಬಗ್ಗೆ ನಮ್ಮ ಜೊತೆ ಚರ್ಚೆಗೆ ಅವರುಗಳು ಬರಲಿ.‌‌ ಕೇವಲ ಆರೋಪ ಮಾಡಿ ಹಿಟ್ ಅಂಡ್ ರನ್ ಮಾಡುವುದಲ್ಲ.‌ ಅವರು ಪಟ್ಟಿ ಮಾಡಿಕೊಂಡು ಬರಲಿ. ನಾವು ಸುಮ್ಮನೇ ಕುಳಿತಿದ್ದೇವ ಎಂಬುದು ತಿಳಿಯಲಿ” ಎಂದು ಹೇಳಿದರು.

ನೀವು ಸವಾಲು ಹಾಕಲು ತಯಾರಿದ್ದೀರಾ ಎಂದು ಕೇಳಿದಾಗ, “ನಾನು ಯಾವಾಗಲೂ ‌ತಯಾರಿದ್ದೇನೆ. ಮಾಧ್ಯಮಗಳಲ್ಲಿಯೇ ಇದಕ್ಕೆ ವೇದಿಕೆ ಸಿದ್ಧ ಮಾಡಿ” ಎಂದರು.

ವಿರೋಧ ಪಕ್ಷಗಳು ಬೆಂಗಳೂರಿನ ಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಏನಾಗಿದೆ ಎಂಬುದನ್ನು ವಿಪಕ್ಷಗಳು ನೋಡಿಕೊಳ್ಳಲಿ.‌ ನಾವಾದರು ಶೇ.70 ರಷ್ಟು ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಬೆಂಗಳೂರು ಯೋಜಿತವಾದ ನಗರವಲ್ಲ. ಆದರೂ ನಾವು ನಮ್ಮ ಕರ್ತವ್ಯ ಮಾಡುತ್ತೇವೆ” ಎಂದರು.

ಸಮಸ್ಯೆ ‌ನಿವಾರಣೆಗೆ ಏನಾದರೂ ಯೋಜನೆಗಳಿವೆಯೇ ಎಂದು ಕೇಳಿದಾಗ, ‌”ಈ ಮೊದಲೇ ನಾವು ಯೋಜನೆ ರೂಪಿಸಿದ್ದೆವು. ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದ್ದಾರೆ. ಅದರ ಬಗ್ಗೆ ನನಗೂ ಸಂತಸವಿದೆ. ಅನೇಕ ಅಧಿಕಾರಿಗಳು ತೊಂದರೆಗೆ ಒಳಗಾದ ಸ್ಥಳದಲ್ಲಿದ್ದು ಕೆಲಸ ಮಾಡಿದ್ದಾರೆ” ಎಂದರು.

ರಸ್ತೆಗಳ ಅಗಲೀಕರಣ ಮಾಡಿ ಸಮಸ್ಯೆಗಳಿಗೆ ಮುಕ್ತಿ ಹಾಡಬಹುದೇ ಎಂದು ಕೇಳಿದಾಗ, “ರಸ್ತೆ ‌ಅಗಲೀಕರಣಕ್ಕೆ‌‌ ಅಕ್ಕಪಕ್ಕದ ಕಟ್ಟಡಗಳನ್ನು ಒಡೆಯಬೇಕಾಗುತ್ತದೆ. ಇದು ಸಾಕಷ್ಟು ವೆಚ್ಚದಾಯಕ‌.‌ ಈಗ ಮೇಲ್ಸೆತುವೆ ಹಾಗೂ ಟನಲ್‌ ರಸ್ತೆಗಳೇ ಪರಿಹಾರ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸಹ ಹುಡುಕಾಟ ನಡೆಸುತ್ತಿದ್ದೇವೆ. 1 ಲಕ್ಷ‌ ಕೋಟಿಗೂ ಅಧಿಕ ಹಣವನ್ನು ಮೆಟ್ರೋ, ಫೆರಿಫೆರಲ್‌ ರಿಂಗ್‌ ರಸ್ತೆ, ಬೆಂಗಳೂರು ಅಭಿವೃದ್ಧಿಗೆ ನಾವು ಹೂಡಿಕೆ ಮಾಡಿದ್ದೇವೆ” ಎಂದರು.

ಪದೇ,‌ ಪದೇ ಮರಗಳು ಬೀಳುತ್ತಿವೆ ಎನ್ನುವುದರ ಬಗ್ಗೆ ಕೇಳಿದಾಗ, “ಮರ‌ ಪಕೃತಿಯ ಅಂಶ. ಸಡಿಲಗೊಂಡ ಮರ, ಒಣಗಿದ ಕೊಂಬೆಗಳನ್ನು ತೆರವುಗೊಳಿಸಲು ತಂಡವೊಂದು ಪ್ರತಿದಿನ ಕೆಲಸ ಮಾಡುತ್ತಿರುತ್ತದೆ. ಒಂದು ಮರವನ್ನು ಏಕಾಏಕಿ ಕತ್ತರಿಸಲು ಆಗುವುದಿಲ್ಲ. ನಾಳೆ ಯಾವ ರೀತಿ ಗಾಳಿ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗಲ್ಲ. ಟೀಕೆ ಇದ್ದೇ ಇರುತ್ತವೆ. ನಾವು ಕೇವಲ ಕೆಲಸ ಮಾಡುತ್ತೇವೆ” ಎಂದರು.

ಮಾನ್ಯತಾ ಟೆಕ್‌ ಪಾರ್ಕ್ ಒತ್ತುವರಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರಕ್ಕೂ ಎಚ್ಚರಿಕೆ ನೀಡಿದ್ದೆವು. ಈಗ ಅಲ್ಲಿ ಬಗೆದು ನೀರು ಹರಿಯಲು ಅವಕಾಶ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version